ಮಂಡಗದ್ದೆ ಬಳಿ ಬೈಕ್ ಅಪಘಾತ; ಗಾಯಾಳುಗಳಿಗೆ ನೆರವಾದ ಗೃಹ ಸಚಿವ
ಶಿವಮೊಗ್ಗ, ನವೆಂಬರ್ 13: ಶಿವಮೊಗ್ಗ ಜಿಲ್ಲೆಯ ಮಂಡಗದ್ದೆ ಬಳಿ ಬೈಕ್ ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ದವರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಅವರ ಬೆಂಗಾವಲು ಸಿಬ್ಬಂದಿ ನೆರವಾಗಿದ್ದಾರೆ. ಗಾಯಾಳುಗಳಿಗೆ ಆರೈಕೆ ಮಾಡಿ, ತಮ್ಮ ಎಸ್ಕಾರ್ಟ್ ವಾಹನದಲ್ಲಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಮಂಡಗದ್ದೆ ಕಾಡಿನಲ್ಲಿ ಅಪಘಾತ ಸಂಭವಿಸಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಬೈಕ್ ಸವಾರರು ಗಾಯಗೊಂಡಿದ್ದು, ರಸ್ತೆಯಲ್ಲಿ ನರಳಾಡುತ್ತಿದ್ದರು. ಈ ವೇಳೆ ವಾಹನ ಸವಾರರು ಗಾಯಾಳುಗಳಿಗೆ ನೆರವಾಗಿದ್ದರು.
ಗಾಯಳುಗೆ ನೆರವಾದ ಸಚಿವರು, ಸಿಬ್ಬಂದಿ
ಗೃಹ ಸಚಿವ ಆರಗ ಜ್ಞಾನೇಂದ್ರ ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದರು. ಶಿವಮೊಗ್ಗದಲ್ಲಿ ನಡೆಯುತ್ತಿರುವ ಕಾರ್ಯಕ್ರವೊಂದರಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದರು. ಬೈಕ್ ಅಪಘಾತ ಆಗಿರುವುದು ತಿಳಿಯುತ್ತಿದ್ದಂತೆ ಕಾರಿನಿಂದ ಇಳಿದು ಗಾಯಾಳುಗಳ ನೆರವಿಗೆ ಧಾವಿಸಿದರು.

ಗಾಯಾಳುಗಳಿಗೆ ನೀರು ಕುಡಿಸಿ, ಆರೈಕೆ ಮಾಡಿದರು. ಅಲ್ಲದೆ ತಮ್ಮ ಎಸ್ಕಾರ್ಟ್ಗೆ ಬಂದಿದ್ದ ಪೊಲೀಸ್ ಜೀಪಿನಲ್ಲೇ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುವಂತೆ ಪೊಲೀಸ್ ಸಿಬ್ಬಂದಿಗೆ ಸೂಚಿಸಿದರು.
ಆಸ್ಪತ್ರೆಗೆ ಫೋನ್ ಮಾಡಿ ಮಾಹಿತಿ
ಇನ್ನು ಘಟನೆ ಸಂಬಂಧ ಗಾಯಾಳುಗಳಿಗೆ ಕೂಡಲೆ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಆಸ್ಪತ್ರೆ ಸಿಬ್ಬಂದಿಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ ನೀಡಿದರು. ಗಾಯಾಳುಗಳಿಬ್ಬರು ತೀರ್ಥಹಳ್ಳಿ ಮೂಲದವರು ಎಂದು ತಿಳಿದು ಬಂದಿದೆ.

ಈ ಹಿಂದೆಯೂ ನೆರವಾಗಿದ್ದರು
ತೀರ್ಥಹಳ್ಳಿ ತಾಲೂಕಿನಲ್ಲಿ ಈ ಹಿಂದೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದವರನ್ನು ತಮ್ಮದೆ ಕಾರಿನಲ್ಲಿ ಕರೆದೊಯ್ದಿದ್ದರು. ತೀರ್ಥಹಳ್ಳಿಯ ಜೆ.ಸಿ. ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ್ದರು.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications