ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅರಣ್ಯ ಸಿಬ್ಬಂದಿಯಿಂದಲೇ ಅಕ್ರಮ ಮರ ಸಾಗಾಟ, ಆದರೂ ಪ್ರಕರಣ ದಾಖಲಿಸಿಲ್ಲ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ. ಆಗಸ್ಟ್ 03: ಅಕ್ರಮ ಮರಗಳನ್ನು ಸಾಗಾಣೆ ನಡೆಸಿ ತನ್ನ ಮನೆಯಲ್ಲಿಟ್ಟುಕೊಂಡಿದ್ದ ಅರಣ್ಯಾಧಿಕಾರಿ ವಿರುದ್ಧ ಕ್ರಮ ತೆಗೆದುಕೊಳ್ಳದೆ, ಕೇವಲ ಮರದ ತುಂಡುಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ಮುಚ್ಚಿ ಹಾಕುವ ಕೆಲಸವನ್ನು ಸಿರಿಗೆರೆ ವಲಯ ಅರಣ್ಯಾಧಿಕಾರಿಗಳು ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಕಳೆದ ಎರಡು ದಿನದ ಹಿಂದೆ ಕುಂಸಿಯ ಅರಣ್ಯ ರಕ್ಷಕ ವಸಂತ ಎಂಬುವವರ ಮನೆಯಲ್ಲಿ ಅಕ್ರಮವಾಗಿ ಇಟ್ಟುಕೊಂಡಿದ್ದ ಬೀಟೆ ಮರದ ತುಂಡುಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಟ್ರ್ಯಾಕ್ಟರ್ ನಲ್ಲಿ ಆಯನೂರಿನ ಅರಣ್ಯ ಡಿಪೋಗೆ ತಂದು ಹಾಕಿದ್ದಾರೆ.

ವಿದ್ಯುತ್ ತಂತಿಗೆ ಬಲಿಯಾದ ನವಿಲು; ಅಂತಿಮ ನಮನ ಸಲ್ಲಿಸಿದ ಸ್ಥಳೀಯರುವಿದ್ಯುತ್ ತಂತಿಗೆ ಬಲಿಯಾದ ನವಿಲು; ಅಂತಿಮ ನಮನ ಸಲ್ಲಿಸಿದ ಸ್ಥಳೀಯರು

ಆದರೆ ವಸಂತ ಅವರು ಓರ್ವ ಅಧಿಕಾರಿಯಾಗಿ ಮರದ ತುಂಡುಗಳನ್ನು ಇಲಾಖೆಯ ಗಮನಕ್ಕೆ ತರದೆ ತನ್ನ ಮನೆಯಲ್ಲಿ ಇಟ್ಟುಕೊಂಡಿದ್ದು ಅಪರಾಧ. ಲಕ್ಷಾಂತರ ರೂ. ಬೆಲೆ ಬಾಳುವ ಮರವನ್ನು ಅಕ್ರಮವಾಗಿ ಮನೆಯಲ್ಲಿಟ್ಟುಕೊಂಡಿದ್ದ ವಸಂತ ಅವರ ಮೇಲೆ ಕ್ರಮ ತೆಗೆದುಕೊಳ್ಳುವುದನ್ನು ಬಿಟ್ಟು ಮನೆಯಲ್ಲಿ ಸಿಕ್ಕ ತುಂಡಗಳು ಅರಣ್ಯದಲ್ಲಿ ಗಾಳಿ, ಮಳೆಗೆ ಬಿದ್ದ ಮರವಾಗಿವೆ ಎಂದು ಅಧಿಕಾರಿಗಳು ಸುಳ್ಳು ಪ್ರಕರಣ ದಾಖಲಿಸಿದ್ದಾರೆ.

 Shivamogga: Illegal Timber Trafficking By Forest Staff, Though No Case Has Been Filed

ಸುಮಾರು 31 ಬೀಟೆ ಮರದ ತುಂಡುಗಳು ಸಿಕ್ಕಿವೆ. ಇವು ಲಕ್ಷಾಂತರ ರೂ. ಬೆಲೆ ಬಾಳುವ ಮರವಾಗಿವೆ. ಅರಣ್ಯದಂಚಿನ ಗ್ರಾಮಸ್ಥರು ಮನೆಯ ಉರುವಲಿಗೆ ಎಂದು ಸೌದೆ ತಂದರೆ ಕೇಸು ದಾಖಲಿಸುವ ಅರಣ್ಯ ಅಧಿಕಾರಿಗಳು, ತಮ್ಮ ಅಧಿಕಾರಿಯನ್ನು ಉಳಿಸಲು ಸುಳ್ಳು ಕೇಸು ದಾಖಲಿಸಿಕೊಂಡಿರುವುದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಲಾದರೂ ಅರಣ್ಯ ಇಲಾಖೆಯವರು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ.

English summary
It has been alleged that the Sirigare zonal officials are carrying out the task of sealing the case, rather than taking action against the forester who had trafficked the illegal trees.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X