ಹಳ್ಳಿ ಕಡೆ ಮುಖ ಮಾಡಿದ ಯುವಜನತೆ: ಹಾಲು ಉತ್ಪಾದನೆ ಹೆಚ್ಚಳ
ಶಿವಮೊಗ್ಗ, ಜೂನ್ 26: ಮಹಾಮಾರಿ ಕೊರೊನಾ ವೈರಸ್ ಎಲ್ಲಾ ಉತ್ಪಾದನಾ ಕ್ಷೇತ್ರಗಳ ಭಾರಿ ಮೇಲೆ ಪರಿಣಾಮ ಬೀರಿದೆ. ಆದರೆ ಲಾಕ್ ಡೌನ್ ಪರಿಣಾಮದಿಂದಾಗಿ ಹಾಲು ಉತ್ಪಾದನೆ ಅಧಿಕಗೊಂಡಿದೆ. ಹಳ್ಳಿಯಿಂದ ಉದ್ಯೋಗಕ್ಕಾಗಿ ನಗರದ ಕಡೆಗೆ ಮುಖ ಮಾಡಿದ್ದವರು ವಾಪಸ್ ಬಂದು ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ನಿರ್ಧಾರ ಹಾಲು ಉತ್ಪಾದನೆ ಹೆಚ್ಚಳಕ್ಕೆ ಕಾರಣವಾಗಿದೆ.
Recommended Video
ಶಿವಮೊಗ್ಗ ಹಾಲು ಒಕ್ಕೂಟದ ವ್ಯಾಪ್ತಿಯಲ್ಲಿ ಹಾಲು ಉತ್ಪಾದನೆ ಹೆಚ್ಚಳಗೊಂಡಿದೆ. ಲಾಕ್ ಡೌನ್ ಗೂ ಮುನ್ನ ಶಿಮುಲ್ ಗೆ ಪ್ರತಿದಿನ 4.5 ಲಕ್ಷ ಲೀಟರ್ ಹಾಲು ಬರುತ್ತಿತ್ತು. ನಂತರ ಪ್ರತಿದಿನ 6.4 ಲಕ್ಷ ಲೀಟರ್ ಹಾಲು ಬರುತ್ತಿದೆ. ಒಂದು ಕಡೆ ಮುಂಗಾರು ಮಳೆ ಆರಂಭವಾಗಿದ್ದು, ಹಸಿರು ಹುಲ್ಲು ಸೋಂಪಾಗಿ ಬೆಳೆದಿರುತ್ತದೆ, ಹಸುಗಳು ಹೆಚ್ಚು ಹಾಲು ಕೊಡುವ ಸಮಯವಿದು. ಬೇರೆ ರಾಜ್ಯಗಳಿಗೆ ಕೆಲಸಕ್ಕೆ ವಲಸೆ ಹೋಗಿದ್ದವರು ವಾಪಸ್ ತಮ್ಮ ಊರುಗಳಿಗೆ ಬಂದಿದ್ದಾರೆ. ಇವರೆಲ್ಲರೂ ತಮ್ಮ ಕುಟುಂಬದವರ ಜೊತೆ ಹೈನುಗಾರಿಕೆಯಲ್ಲಿ ತೊಡಗಿಕೊಂಡಿದ್ದಾರೆ.
ಹಳ್ಳಿಗೆ ವಾಪಸ್ಸಾದ ಯುವಕರು ಉದ್ಯೋಗ ಇಲ್ಲದಿದ್ದರಿಂದ ತಮ್ಮ ಮನೆಯಲ್ಲಿರುವ ಹಸುಗಳನ್ನು ಮೇಯಿಸುತ್ತಿದ್ದಾರೆ. ಪರಿಣಾಮ ಹಸುಗಳು ನೀಡುವ ಹಾಲಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಒಂದು ಕಡೆ ಹಾಲಿನ ಉತ್ಪಾದನೆಯಲ್ಲಿ ಗಣನೀಯವಾಗಿ ಹೆಚ್ಚಳವಾಗಿದ್ದರೆ, ಮಾರಾಟದ ಪ್ರಮಾಣ ಕುಸಿದಿದೆ. ಹೀಗಾಗಿ ಶಿಮುಲ್ ಗೆ ಮತ್ತೊಂದು ಸಮಸ್ಯೆ ಎದುರಾಗಿದೆ.

ಅಂದಹಾಗೆ ಪ್ರಸ್ತುತ ಶಿಮುಲ್ ಗೆ ಹಾಲು ಉತ್ಪಾದಕರಿಂದ 6.43 ಲಕ್ಷ ಲೀಟರ್ ಹಾಲು ಬರುತ್ತಿದೆ. ಆದರೆ ಶಿಮೂಲ್ ನಿಂದ ಮಾರಾಟ ಆಗುತ್ತಿರುವುದು ಮಾತ್ರ ಕೇವಲ 2.30 ಲಕ್ಷ ಲೀಟರ್. ಉಳಿದ 4.10 ಲಕ್ಷ ಲೀಟರ್ ಅಧಿಕ ಉತ್ಪಾದನೆಯಾಗುತ್ತಿದೆ. ಒಂದು ಲಕ್ಷ ಲೀಟರ್ ಹಾಲನ್ನು ಇತರೆ ಮದರ್ ಡೈರಿಗಳಿಗೆ ನೀಡಲಾಗುತ್ತಿದೆ. ಬಾಕಿ ಉಳಿದ 3.10 ಲಕ್ಷ ಲೀಟರ್ ಹಾಲನ್ನು ಹಾಲಿನ ಪುಡಿ ಹಾಗೂ ಇತರೆ ಉತ್ಪನ್ನಗಳ ಉತ್ಪಾದನೆಗೆ ಬಳಸಿಕೊಳ್ಳಲಾಗುತ್ತಿದೆ.
ಲಾಕ್ ಡೌನ್ ಮತ್ತು ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಸಭೆ-ಸಮಾರಂಭಗಳು ನಡೆಯುತ್ತಿಲ್ಲ. ಹೀಗಾಗಿ ಶಿಮುಲ್ ನ ಹಾಲು ಮಾರಾಟ ಕುಸಿದಿದೆ. ಅದರಲ್ಲೂ ಹಾಲು ಖರೀದಿ ದರದಲ್ಲಿಯೂ ಏರಿಕೆ ಮಾಡಲಾಗಿದ್ದು, ಈ ಕಾರಣದಿಂದಾಗಿ ಹೆಚ್ಚು ಹೆಚ್ಚು ಹಾಲು ಉತ್ಪಾದಿಸಿ ರೈತರು ಡೈರಿಗೆ ಕಳಿಸುತ್ತಿದ್ದು, ಇದು ಹಾಲು ಉತ್ಪಾದನೆಗೆ ಪ್ರಮುಖ ಕಾರಣವಾಗಿದೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications