ಶಿವಮೊಗ್ಗ ಉಪ ಚುನಾವಣೆ : ಪೈಪೋಟಿ ಕೊಟ್ಟು ಸೋತ ಮಧು ಬಂಗಾರಪ್ಪ
ಶಿವಮೊಗ್ಗ, ನವೆಂಬರ್ 06 : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಮುಕ್ತಾಯಗೊಂಡಿದೆ. ಮೂವರು ಮಾಜಿ ಮುಖ್ಯಮಂತ್ರಿಗಳ ಪುತ್ರರ ಸ್ಪರ್ಧೆಯಿಂದಾಗಿ ಚುನಾವಣೆಯ ಫಲಿತಾಂಶ ಕುತೂಹಲಕ್ಕೆ ಕಾರಣವಾಗಿತ್ತು.
ಉಪಚುನಾವಣೆ ಫಲಿತಾಂಶ LIVE: ಮತಎಣಿಕೆ ಆರಂಭ
ಶಿವಮೊಗ್ಗದ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಮಂಗಳವಾರ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭಗೊಂಡಿತು. ಬಿಜೆಪಿ ಅಭ್ಯರ್ಥಿಯಾದ ಬಿ.ವೈ.ರಾಘವೇಂದ್ರ, ಜೆಡಿಎಸ್-ಕಾಂಗ್ರೆಸ್ ಒಮ್ಮತದ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ನಡುವೆ ತೀವ್ರ ಪೈಪೋಟಿ ನಡೆಯಿತು.
ಉಪ ಚುನಾವಣೆ ಮುಗಿಯುತ್ತಲೇ ಶಿವಮೊಗ್ಗ ಬಿಜೆಪಿಯಲ್ಲಿ ಅಸಮಾಧಾನ!
ಅಂತಿಮವಾಗಿ ಬಿ.ವೈ.ರಾಘವೇಂದ್ರ ಅವರು ಗೆಲುವು ಸಾಧಿಸಿದರು. ಪುತ್ರನನ್ನು ಶಿವಮೊಗ್ಗದಲ್ಲಿ ಗೆಲ್ಲಿಸಿಕೊಳ್ಳುವ ಮೂಲಕ ತವರು ಜಿಲ್ಲೆಯಲ್ಲಿ ತಮ್ಮ ಪ್ರಭಾವ ಏನು? ಎಂಬುದನ್ನು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಾಬೀತು ಮಾಡಿದರು.
ನವೆಂಬರ್ 3ರಂದು ಉಪ ಚುನಾವಣೆಯ ಮತದಾನ ನಡೆದಿತ್ತು. ಶೇ 61.05ರಷ್ಟು ಮತದಾನವಾಗಿತ್ತು. ಶಿವಮೊಗ್ಗ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ತವರು ಕ್ಷೇತ್ರ. ಆದ್ದರಿಂದ, ಚುನಾವಣೆ ಫಲಿತಾಂಶದ ಮೇಲೆ ಎಲ್ಲರ ಕಣ್ಣಿತ್ತು. ಫಲಿತಾಂಶದ ಕ್ಷಣ-ಕ್ಷಣದ ಮಾಹಿತಿ ಇಲ್ಲಿದೆ...
ಶಿವಮೊಗ್ಗದಲ್ಲಿ ಕಾಂಗ್ರೆಸ್-ಜೆಡಿಎಸ್ ಸೋಲಿಗೆ 5 ಕಾರಣಗಳು