Lok Sabha Election 2024 Result: ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಹಿನ್ನಡೆ
ಶಿವಮೊಗ್ಗ, ಜೂನ್ 04: ಶಿವಮೊಗ್ಗ ಲೋಕಸಭಾ ಕ್ಷೇತ್ರದ 2024ರ ಚುನಾವಣೆ ಮತ ಎಣಿಕೆ ಆರಂಭವಾಗಿದೆ. ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಇದೆ ಎಂದು ನಿರೀಕ್ಷೆ ಮಾಡಲಾಗಿದೆ. ಅಂಚೆ ಮತಗಳ ಎಣಿಕೆ ಮುಗಿದು ಇವಿಎಂ ಮತಗಳ ಮೊದಲ ಸುತ್ತಿನ ಎಣಿಕೆ ಆರಂಭವಾಗಿದೆ.
ಬಿ. ವೈ. ರಾಘವೇಂದ್ರ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ. ಕಾಂಗ್ರೆಸ್ನಿಂದ ಗೀತಾ ಶಿವರಾಜ್ ಕುಮಾರ್ ಕಣದಲ್ಲಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಕೆ. ಎಸ್. ಈಶ್ವರಪ್ಪ ಕಣಕ್ಕಿಳಿದು ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಸಮಯ 8.35ರ ಮಾಹಿತಿಯಂತೆ ಶಿವಮೊಗ್ಗದಲ್ಲಿ ಅಂಚೆ ಮತಗಳ ಎಣಿಕೆಯಲ್ಲಿ ಬಿಜೆಪಿಯ ಬಿ. ವೈ. ರಾಘವೇಂದ್ರ ಮುನ್ನಡೆ ಪಡೆದಿದ್ದಾರೆ. ರಾಘವೇಂದ್ರ 687 ಮತಗಳನ್ನು ಪಡೆದಿದ್ದು, 611 ಮತಗಳನ್ನು ಗೀತಾ ಶಿವರಾಜ್ ಕುಮಾರ್ ಪಡೆದಿದ್ದಾರೆ. ಅಂಚೆ ಮತಗಳ ಎಣಿಕೆಯಲ್ಲಿ ಪಕ್ಷೇತರ ಅಭ್ಯರ್ಥಿಗೆ ಹಿನ್ನಡೆಯಾಗಿದೆ. ಅಂಚೆ ಮತಗಳಲ್ಲಿ ಬಿಜೆಪಿ 2252, ಕಾಂಗ್ರೆಸ್ 2018, ಈಶ್ವರಪ್ಪ 260 ಮತಗಳನ್ನು ಪಡೆದಿದ್ದಾರೆ.
ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಹಾವೇರಿಯಲ್ಲಿ ಪುತ್ರ ಕಾಂತೇಶ್ಗೆ ಬಿಜೆಪಿ ಟಿಕೆಟ್ ಸಿಕ್ಕಿಲ್ಲ ಎಂದು ಅಸಮಾಧಾನಗೊಂಡರು. ಮಾಜಿ ಸಿಎಂ ಯಡಿಯೂರಪ್ಪ, ಬಿ. ವೈ. ವಿಜಯೇಂದ್ರ ಟೀಕೆ ಮಾಡಿದರು.
ಅಂತಿಮವಾಗಿ ಶಿವಮೊಗ್ಗದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದರು. ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಕಾರಣ ಈಶ್ವರಪ್ಪ ಬಿಜೆಪಿಯಿಂದ 6 ವರ್ಷ ಉಚ್ಛಾಟನೆಗೊಂಡರು.
ಶಿವಮೊಗ್ಗದಲ್ಲಿ ಇವಿಎಂ ಮತ ಎಣಿಕೆ ಮೊದಲ ಸುತ್ತು ಮುಕ್ತಾಯಗೊಂಡಿದೆ. ಬಿಜೆಪಿಯ ಬಿ. ವೈ. ರಾಘವೇಂದ್ರ 22,134. ಕಾಂಗ್ರೆಸ್ನ ಗೀತಾ ಶಿವರಾಜ್ ಕುಮಾರ್ 15,771 ಮತ್ತು ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ 1092 ಮತಗಳನ್ನು ಪಡೆದಿದ್ದಾರೆ.
ಮೊದಲ ಸ್ಥಾನದಲ್ಲಿ ಬಿ. ವೈ. ರಾಘವೇಂದ್ರ ಇದ್ದು, 2ನೇ ಸ್ಥಾನದಲ್ಲಿ ಗೀತಾ ಶಿವರಾಜ್ ಕುಮಾರ್ ಇದ್ದಾರೆ. ಈಶ್ವರಪ್ಪ 3ನೇ ಸ್ಥಾನದಲ್ಲಿದ್ದಾರೆ.
ಸದ್ಯದ ಮಾಹಿತಿ ಪ್ರಕಾರ ಬಿ. ವೈ. ರಾಘವೇಂದ್ರ 33,780 ಮತ, ಗೀತಾ ಶಿವರಾಜ್ ಕುಮಾರ್ 22,497 ಮತ್ತು ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ 2145 ಮತಗಳನ್ನು ಪಡೆದಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications