ಗ್ರಾಮ ಪಂಚಾಯಿತಿ ಚುನಾವಣೆ ಮುಂದೂಡಿಕೆಗೆ ಶಿವಮೊಗ್ಗದಲ್ಲಿ ವಿರೋಧ
ಶಿವಮೊಗ್ಗ, ಮೇ 23: ಗ್ರಾಮ ಪಂಚಾಯಿತಿ ಚುನಾವಣೆ ಮುಂದೂಡಿಕೆಗೆ ಶಿವಮೊಗ್ಗದಲ್ಲಿ ವಿರೋಧ ವ್ಯಕ್ತವಾಗಿದೆ. ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯತಿ ಸದಸ್ಯರು ವಿರೋಧಿಸಿದ್ದಾರೆ.
Recommended Video
ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯತಿ ಸದಸ್ಯರಿಂದ ಚುನಾವಣೆ ಆರು ತಿಂಗಳು ಮುಂದೂಡಿದಕ್ಕೆ ಹಾಗೂ ಹೊಸ ಆಡಳಿತ ಸಮಿತಿ ರಚನೆಗೆ ವಿರೋಧ ವ್ಯಕ್ತವಾಗಿದೆ. ನಮ್ಮ ಹಕ್ಕನ್ನು ಕಸಿದುಕೊಳ್ಳಲು ಸರ್ಕಾರ ಹೂಡಿರುವ ಹೊಸ ತಂತ್ರ ಇದು ಎಂದು ಅಸಮಾಧಾನ ಹೊರ ಹಾಕಿದ್ದಾರೆ.
ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಹುನ್ನಾರಾ: ಡಿಕೆ ಶಿವಕುಮಾರ್
ಚುನಾವಣೆ ನಡೆಸಿ ಇಲ್ಲವಾದರೆ ನಮ್ಮನ್ನೇ ಮುಂದುವರೆಸಿ ಎಂದು ಒತ್ತಾಯ ಮಾಡಿದ್ದಾರೆ. ಭದ್ರಾವತಿ ತಾಲೂಕಿನ ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಈ ಘಟನೆ ನಡೆದಿದೆ. ಗ್ರಾಮ ಪಂಚಾಯತಿ ಚುನಾವಣೆ ಬಗ್ಗೆ ಸರ್ಕಾರ ತಮ್ಮ ನಿರ್ಧಾರ ಕೈ ಬಿಡದೆ ಇದರೆ, ಜಿಲ್ಲೆಯಾದ್ಯಂತ ಹೋರಾಟಕ್ಕೆ ಸಿದ್ಧ ಎಂದಿದ್ದಾರೆ.
ಕೊರೊನಾದಿಂದ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಮುಂದಕ್ಕೆ ಹಾಕಲು ಸರ್ಕಾರ ಹೊರಟಿದೆ. ಇದನ್ನು ಕಾಂಗ್ರೆಸ್ ಪಕ್ಷ ವಿರೋಧಿಸಿದೆ. ಬಿಜೆಪಿ ಸದ್ಯದ ಪರಿಸ್ಥಿತಿಯನ್ನು ದುರುಪಯೋಗ ಪಡಿಸಿಕೊಂಡಿದೆ ಎಂದಿದ್ದಾರೆ.
''ಪಂಚಾಯಿತಿ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯ ಚುನಾವಣಾ ಆಯೋಗ ಮಾರ್ಚ್ 7, 2020 ರಂದೇ ರಾಜ್ಯ ಸರ್ಕಾರಕ್ಕೆ ಹೇಳಿದೆ. ಆದರೆ, ಸರ್ಕಾರ ಕೋವಿಡ್-19 ರ ಹಿನ್ನೆಲೆ ಚುನಾವಣೆ ಮುಂದೂಡುವುದಾಗಿ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಿ ಆಯೋಗಕ್ಕೆ ಕಳುಹಿಸಿದೆ. ಈ ಮೂಲಕ ಚುನಾವಣಾ ಆಯೋಗದ ಕೈ ಕಟ್ಟಿಹಾಕುವ ಪ್ರಯತ್ನ ಮಾಡಿದೆ.'' ಎಂದು ಡಿಕೆ ಶಿವಕುಮಾರ್ ಬೇಸರ ಹೊರಹಾಕಿದ್ದಾರೆ.