Shivamogga News: ಅಡಿಕೆ ತೂಕದಲ್ಲಿ ಮೋಸ: ಗಣೇಶ ವಿಸರ್ಜನೆ ವೇಳೆ ವಿದೇಶಿ ಪ್ರವಾಸಿಗರ ಡ್ಯಾನ್ಸ್- ಹೆಬ್ಬಾವು ಸೆರೆ
ಶಿವಮೊಗ್ಗ ಸೆಪ್ಟೆಂಬರ್ 13: ರೈತರಿಂದ ಅಡಿಕೆ ಖರೀದಿಸುವಾಗ ತೂಕದಲ್ಲಿ ಮೋಸ ಮಾಡಿದ ವ್ಯಾಪಾರಿಯೊಬ್ಬನಿಗೆ ಗ್ರಾಮಸ್ಥರು ದಂಡ ಹಾಕಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ರೈತರಿಂದ ಅಡಿಕೆ ಖರೀದಿಸುವಾಗ ತೂಕದಲ್ಲಿ ವ್ಯಾಪಾರಿಯೊಬ್ಬ ಮೋಸ ಮಾಡಿದ್ದಾನೆ. ಮೋಸ ಮಾಡಿದ ವ್ಯಾಪಾರಿಗೆ ಗ್ರಾಮಸ್ಥರು 20 ಲಕ್ಷ ರೂ. ದಂಡ ಹಾಕಿ ಪಾಠ ಕಲಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಹತೊಳಲಿ ಗ್ರಾಮದಲ್ಲಿ ವ್ಯಾಪಾರಿಯೊಬ್ಬ ಪ್ರತಿ ಕ್ವಿಂಟಾಲ್ಗೆ 3 ಕೆ.ಜಿ ಅಡಿಕೆ ಮೋಸ ಮಾಡಲಾಗಿದೆ. ರೈತರ ಮನೆ ಬಾಗಿಲಲ್ಲಿ ರಾಶಿ ಅಡಿಕೆ ತೂಕದಲ್ಲಿ ತಟ್ಟೆಹಳ್ಳಿಯವನಾಗಿ ವರ್ತಕ ದಿಲೀಪ್ ಎಂಬಾತನಿಂದ ಮೋಸ ಆಗಿರುವ ಆರೋಪ ಕೇಳಿ ಬಂದಿದೆ.

ಈತ ಗಣಕೀಕೃತ ತಕ್ಕಡಿಯಲ್ಲಿ ಬೆಳೆಗಾರರಿಗೆ ಗಮನಕ್ಕೆ ಬಾರದಂತೆ ಒಂದು ಕ್ವಿಂಟಾಲ್ಗೆ 3 ಕೆ.ಜಿ ಮೋಸ ಮಾಡಿದ್ದಾನೆ. ಈತನಿಂದ ದಂಡ ವಸೂಲಿ ಮಾಡಿದ ಗ್ರಾಮಸ್ಥರು ಗ್ರಾಮದ ದೇವಾಲಯಕ್ಕೆ ಕೊಟ್ಟಿದ್ದಾರೆ.
ಶಿವಮೊಗ್ಗ: ಗಣೇಶ ವಿಸರ್ಜನೆ ವೇಳೆ ವಿದೇಶಿ ಪ್ರವಾಸಿಗರ ಡ್ಯಾನ್ಸ್
ವಿದೇಶಿ ಪ್ರವಾಸಿಗರು ಗಣೇಶ ವಿಸರ್ಜನೆ ವೇಳೆ ಕರಿಮಣಿ ಮಾಲೀಕ ನೀನಲ್ಲ ಸಾಂಗ್ ಗೆ ಭರ್ಜರಿ ಸ್ಟೆಪ್ ಹಾಕಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅವಿನಹಳ್ಳಿ ಹೋಬಳಿಯ ಗಿಣಿವಾರ ಗ್ರಾಮದಲ್ಲಿ ಗಣೇಶ ಮೆರವಣಿಗೆಯಲ್ಲಿ ವಿದೇಶಿ ಪ್ರವಾಸಿಗರು ಕುಣಿದು ಕುಪ್ಪಳಿಸಿದ್ದಾರೆ.

ಸಾಗರ ಪ್ರವಾಸಕ್ಕೆ ವಿದೇಶಿ ಪ್ರಜೆಗಳು ಆಗಮಿಸಿದ್ದರು. ಈ ವೇಳೆ ವಿಸರ್ಜನೆ ಮೆರವಣಿಗೆ ವೇಳೆ ಸ್ಥಳೀಯರ ಜೊತೆ ಮಸ್ತ್ ಡ್ಯಾನ್ಸ್ ಮಾಡಿದ್ದಾರೆ. ಗಿಣಿವಾರ ಗ್ರಾಮದಿಂದ ಸಾಗರ ಸಿಗಂದೂರು ರಸ್ತೆಗೆ ಬರುತ್ತಿದ್ದಂತೆ ಮೆರವಣಿಗೆಯಲ್ಲಿ ವಿದೇಶಿ ಪ್ರವಾಸಿಗರು ಭಾಗವಹಿಸಿದ್ದಾರೆ. ಸದ್ಯ ಈ ವಿಡಿಯೋ ಎಲ್ಲರ ಗಮನ ಸೆಳೆದಿದೆ.
ಶಿವಮೊಗ್ಗ: ಗ್ರಾಮಕ್ಕೆ ಆಗಮಿಸಿದ ಹೆಬ್ಬಾವು ಸೆರೆ
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಅರಹತೊಳಲು ಕೈಮರದಲ್ಲಿ ಬೃಹತ್ ಹೆಬ್ಬಾವು ಕಾಣಿಸಿಕೊಂಡಿದ್ದು, ಅದನ್ನು ಸೆರೆ ಹಿಡಿದು ಕಾಡಿಗೆ ಬಿಡಲಾಗಿದೆ. ಗುರುವಾರ ಕೈಮರದ ಪೆಟ್ರೋಲ್ ಬಂಕ್ ಬಳಿ ಹೆಬ್ಬಾವು ಕಾಣಿಸಿಕೊಂಡಿತ್ತು. ಹೆಬ್ಬಾವು ಸೆರೆ ಹಿಡಿದ ಹೊಳೆಹೊನ್ನೂರು ಸಿಪಿಐ ಲಕ್ಷ್ಮಪತಿ ಹಾಗೂ ಸ್ಥಳೀಯರು ಅದನ್ನು ಕಾಡಿಗೆ ಬಿಟ್ಟಿದ್ದಾರೆ. ಹೆಬ್ಬಾವು ಕಂಡು ಗಾಬರಿಯಾಗಿದ್ದ ಸ್ಥಳೀಯರು ಅದನ್ನು ಸೆರೆ ಹಿಡಿಯುತ್ತಿದ್ದಂತೆ ನಿಟ್ಟುಸಿರು ಬಿಟ್ಟಿದ್ದಾರೆ.

ಮುಸ್ಲಿಂ ಬಾಂಧವರಿಂದ ಗಣೇಶ ಮೂರ್ತಿಗೆ ಮಾಲಾರ್ಪಣೆ
ಶಿವಮೊಗ್ಗ ನಗರದ ಇಮಾಮ್ ಬಡ ಏರಿಯಾದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಮುಸ್ಲಿಂ ಬಾಂಧವರಿಂದ ಗಣೇಶ ಮೂರ್ತಿಗೆ ಮಾಲಾರ್ಪಣೆ ಮಾಡಲಾಗಿದೆ. ಸ್ನೇಹ ಜ್ಯೋತಿ ಗೆಳೆಯರ ಬಳಗದವರು ಪ್ರತಿಷ್ಟಾಪನೆ ಮಾಡಿದ್ದ ಗಣಪತಿ ವಿಸರ್ಜನಾ ಮೆರವಣಿಗೆ ಮಸೀದಿ ಹತ್ತಿರ ಬರುತ್ತಿದ್ದಂತೆ ಮಸೀದಿ ಅಧ್ಯಕ್ಷ ಮುನೀರ್ ಅಹಮ್ಮದ್ ಮಾಲಾರ್ಪಣೆ ಮಾಡಿದ್ದಾರೆ. ಹೀಗೆ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಭಾಗವಹಿಸಿದ ಮುಸ್ಲಿಂ ಬಾಂಧವರು ಕೋಮು ಸೌಹಾರ್ದತೆ ಮರೆದಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications