ಶಿವಮೊಗ್ಗ ಪೊಲೀಸರಿಗೆ ಸಲಾಂ, ಆಂಬ್ಯುಲೆನ್ಸ್ ಸಾಗಲು ಝಿರೋ ಟ್ರಾಫಿಕ್ ವ್ಯವಸ್ಥೆ
ಶಿವಮೊಗ್ಗ, ಜೂನ್ 12 : ರೋಗಿಯನ್ನು ಆಸ್ಪತ್ರೆಗೆ ಸ್ಥಳಾಂತರ ಮಾಡಲು ಶಿವಮೊಗ್ಗ ಪೊಲೀಸರು ಝಿರೋ ಟ್ರಾಫಿಕ್ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಪೊಲೀಸರ ಮಾನವೀಯ ಕಾರ್ಯಕ್ಕೆ ಜನರು ಶಹಬ್ಬಾಸ್ ಎಂದು ಹೇಳಿದ್ದಾರೆ.
ಶಿವಮೊಗ್ಗ ನಗರದ ನಂಜಪ್ಪ ಆಸ್ಪತ್ರೆಯಿಂದ ರೋಗಿಯನ್ನು ಸ್ಥಳಾಂತರ ಮಾಡಬೇಕಿತ್ತು. ಶಿವಮೊಗ್ಗ ಪೊಲೀಸರು ರೋಗಿಯ ಪತಿಯ ಮನವಿಯಂತೆ ಆಂಬ್ಯುಲೆನ್ಸ್ ಸಾಗುವ ಮಾರ್ಗದಲ್ಲಿ ಝಿರೋ ಟ್ರಾಫಿಕ್ ವ್ಯವಸ್ಥೆಯನ್ನು ಮಂಗಳವಾರ ಮಾಡಿಕೊಟ್ಟು. ಮಾನವೀಯತೆ ಮೆರೆದಿದ್ದಾರೆ.
ಬೆಂಗಳೂರಿನಲ್ಲಿ ಹಲವಾರು ಬಾರಿ ಜೀವಂತ ಹೃದಯ ಸಾಗಣೆ ಮಾಡುವಾಗ ಝಿರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗುತ್ತದೆ. ವಿಐಪಿಗಳು ಸಂಚಾರ ನಡೆಸುವಾಗಲೂ ಉಳಿದ ವಾಹನಗಳ ಸಂಚಾರಕ್ಕೆ ತಡೆ ಹಾಕಲಾಗುತ್ತದೆ.

ಆದರೆ, ಜಿಲ್ಲಾ ಕೇಂದ್ರದಲ್ಲಿ ಇದೇ ಮೊದಲ ಬಾರಿಗೆ ರೋಗಿಯನ್ನು ಸ್ಥಳಾಂತರ ಮಾಡಲು ಝಿರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿತ್ತು. ಜನರು ಇದಕ್ಕೆ ಸಹಕಾರ ನೀಡಿದ್ದು, ಪೊಲೀಸರ ಕಾರ್ಯವನ್ನು ಶ್ಲಾಘಿಸಿದ್ದಾರೆ.
ಘಟನೆ ವಿವರ : ಸಾಗರ ತಾಲೂಕಿನ ಮಕ್ಕಿಮನೆಯ ಸುಜಾತಾ (32) ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಎರಡು ದಿನದಿಂದ ಅವರಿಗೆ ಶಿವಮೊಗ್ಗ ನಗರದ ನಂಜಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮಂಗಳವಾರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡುವಂತೆ ವೈದ್ಯರು ಸೂಚನೆ ನೀಡಿದ್ದರು.
ಸುಜಾತಾ ಅವರನ್ನು ಸರಿಯಾದ ಸಮಯಕ್ಕೆ ಮಣಿಪಾಲಕ್ಕೆ ಕರೆದುಕೊಂಡು ಹೋಗುವುದು ಸವಾಲಾಗಿತ್ತು. ಪತಿ ಪದ್ಮರಾಜ್ ಅವರು ಶಿವಮೊಗ್ಗ ಎಸ್ಪಿ ಅಭಿನವ್ ಖರೇ ಅವರಿಗೆ ಈ ಕುರಿತು ಮಾಹಿತಿ ನೀಡಿದ್ದರು. ಸಹಕಾರ ನೀಡುವಂತೆ ಮನವಿ ಮಾಡಿದ್ದರು.
ಅಭಿನವ್ ಖರೇ ಅವರು ಸುಜಾತಾ ಅವರಿದ್ದ ಆಂಬ್ಯುಲೆನ್ಸ್ ಸಾಗುವ ಮಾರ್ಗದಲ್ಲಿ ಝಿರೋ ಟ್ರಾಫಿಕ್ ವ್ಯವಸ್ಥೆ ಮಾಡಲು ಸೂಚನೆ ನೀಡಿದರು. ಸಂಚಾರಿ ಪೊಲೀಸರ ಸಹಕಾರದಿಂದ ನಂಜಪ್ಪ ಆಸ್ಪತ್ರೆಯಿಂದ ತೀರ್ಥಹಳ್ಳಿ ರಸ್ತೆಯ ತನಕ ಝಿರೋ ಟ್ರಾಫಿಕ್ ವ್ಯವಸ್ಥೆ ಮಾಡಿ, ಆಂಬ್ಯುಲೆನ್ಸ್ ಸಾಗಲು ಅವಕಾಶ ಕಲ್ಪಿಸಲಾಯಿತು.
ಸಂಚಾರಿ ಪೊಲೀಸರು ಕಾರ್ಯಕ್ಕೆ ನಗರದ ಜನರು ಸಹ ಕೈ ಜೋಡಿಸಿದ್ದು, ಆಂಬ್ಯುಲೆನ್ಸ್ ಸಾಗಲು ವ್ಯವಸ್ಥೆ ಮಾಡಿಕೊಟ್ಟರು. ಸುಜಾತಾ ಅವರು ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸಿದರು.
-
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು












Click it and Unblock the Notifications