ಶಿವಮೊಗ್ಗ ಗಲಭೆ; ನ್ಯಾಯಾಂಗ ತನಿಖೆಗೆ ಸಿದ್ದರಾಮಯ್ಯ ಆಗ್ರಹ
ಶಿವಮೊಗ್ಗ, ಫೆಬ್ರವರಿ 22; ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಯ ಬಳಿಕ ಶಿವಮೊಗ್ಗದಲ್ಲಿ ಗಲಭೆ ನಡೆದಿದೆ. ಶಿವಮೊಗ್ಗ ನಗರದಲ್ಲಿ ಮುಂಜಾಗ್ರತಾ ಕ್ರಮವಾಗಿ ಕರ್ಫ್ಯೂ ಜಾರಿಯಲ್ಲಿದೆ. ಮಂಗಳವಾರ ನಗರದಲ್ಲಿ ಪರಿಸ್ಥಿತಿ ಹತೋಟಿಗೆ ಬಂದಿದ್ದು, ಪೊಲೀಸ್ ಬಂದೋಬಸ್ತ್ ಮುಂದುವರೆದಿದೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಂಗಳವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ಹರ್ಷ ಕೊಲೆ ಪ್ರಕರಣ, ನಂತರ ನಡೆದ ಗಲಭೆ ಸೇರಿದಂತೆ ಎಲ್ಲಾ ಪ್ರಕರಣಗಳ ನ್ಯಾಯಾಂಗ ತನಿಖೆಯಾಗಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
"ಶಿವಮೊಗ್ಗದ ಬಿಜೆಪಿ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ, ಆ ನಂತರದ ಶವಯಾತ್ರೆ ಸಂದರ್ಭದಲ್ಲಿ ನಡೆದ ಗಲಭೆ, ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟ, ಹಲ್ಲೆ, ಕಲ್ಲು ತೂರಾಟ, ಸರ್ಕಾರದ ಸಚಿವ ಸ್ಥಾನದಲ್ಲಿರುವ ಈಶ್ವರಪ್ಪ ಶವಯಾತ್ರೆಯ ಮುಂದಾಳತ್ವ ವಹಿಸುವ ಮೂಲಕ 144 ಸೆಕ್ಷನ್ ನ ಉಲ್ಲಂಘನೆ ಮಾಡಿರುವುದು ಈ ಎಲ್ಲಾ ಒಟ್ಟು ಘಟನೆಗಳನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತೇನೆ" ಎಂದರು.
ಕರ್ಫ್ಯೂ ಹಿನ್ನಲೆಯಲ್ಲಿ ಮಂಗಳವಾರ ಶಿವಮೊಗ್ಗ ನಗರ ಸಂಪೂರ್ಣ ಸ್ಥಬ್ಧವಾಗಿದೆ. ವ್ಯಾಪಾರ, ವಹಿವಾಟು ಇಲ್ಲದೆ ನಗರ ಬಣಗುಡುತ್ತಿದೆ. ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಹರ್ಷ ಕೊಲೆ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ.

ರಾಜ್ಯದಲ್ಲಿ ಸರ್ಕಾರ ಇದೆಯೇ?
"ಶಿವಮೊಗ್ಗ ನಗರದಲ್ಲಿ ಬಿಜೆಪಿ ಕಾರ್ಯಕರ್ತ ಹರ್ಷ ಅವರ ಕೊಲೆಯಾದದ್ದು ಭಾನುವಾರ. ಮುಂಜಾಗ್ರತಾ ಕ್ರಮವಾಗಿ ಆ ದಿನದ ರಾತ್ರಿಯಿಂದಲೇ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಕಳೆದ ಮೂರು ದಿನಗಳಲ್ಲಿ ಶಿವಮೊಗ್ಗದಲ್ಲಿ 3 ಕೊಲೆಗಳು ನಡೆದಿವೆ. ಶಿವಮೊಗ್ಗ ಗೃಹ ಸಚಿವರ ತವರು ಜಿಲ್ಲೆ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಈಶ್ವರಪ್ಪ ಅವರು ಅದೇ ಜಿಲ್ಲೆಯವರು. ಅಲ್ಲೇ ಈ ರೀತಿಯ ಕೊಲೆಗಳು ನಿರಂತರವಾಗಿ ನಡೆಯುತ್ತವೆ ಎಂದರೆ ರಾಜ್ಯದಲ್ಲಿ ಸರ್ಕಾರ ಇದೆಯೇ? ಎಂಬ ಪ್ರಶ್ನೆ ಸಹಜವಾಗಿ ಮೂಡುತ್ತದೆ" ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಶವಯಾತ್ರೆ ನಡೆಸಿದ್ದು ಹೇಗೆ?
"ಹರ್ಷ ಕೊಲೆಯಾದ ದಿನವೇ 144 ಸೆಕ್ಷನ್ ಜಾರಿಯಾಗಿದ್ದರೂ ಮೃತನ ಶವಯಾತ್ರೆ ನಡೆಸಲು ಪೊಲೀಸ್ ಇಲಾಖೆ ಅವಕಾಶ ನೀಡಿದ್ದು ಹೇಗೆ? ಮತ್ತು ಏಕೆ?. ಈ ಶವಯಾತ್ರೆಯಲ್ಲಿ ಸಚಿವ ಈಶ್ವರಪ್ಪ, ಸ್ಥಳೀಯ ಸಂಸದ ರಾಘವೇಂದ್ರ ಕೂಡ ಭಾಗವಹಿಸಿದ್ದರು, ಹೀಗಾಗಿ ಈ ಶವಯಾತ್ರೆಯನ್ನು ರಾಜ್ಯ ಸರ್ಕಾರದ ಪ್ರಾಯೋಜಿತ ಶವಯಾತ್ರೆ ಎನ್ನಬೇಕಾಗುತ್ತದೆ" ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
|
ಕೆ. ಎಸ್. ಈಶ್ವರಪ್ಪ ನೇರ ಹೊಣೆ
"ತಮ್ಮದೇ ಸರ್ಕಾರ 144 ಸೆಕ್ಷನ್ ಹಾಕಿದೆ, ಸರ್ಕಾರದ ಸಚಿವರ ಎದುರೇ ಕಲ್ಲುತೂರಾಟ ನಡೆದಿದೆ, ಅಂಗಡಿ, ವಾಹನಗಳಿಗೆ ಬೆಂಕಿ ಹಾಕಲಾಗಿದೆ, ಜನ ಗುಂಪು ಗುಂಪಾಗಿ ಕತ್ತಿ, ತಲ್ವಾರ್ ಹಿಡಿದು ಓಡಾಡುತ್ತಾರೆ, ಈ ಮೆರವಣಿಗೆಯಲ್ಲಿ ಸಚಿವ ಈಶ್ವರಪ್ಪ ಅವರೇ ಮುಂದೆ ನಿಂತಿದ್ದಾರೆ ಎಂದರೆ ಇದು ನಾಗರೀಕ ಸರ್ಕಾರವ? ಇವತ್ತು ಶಿವಮೊಗ್ಗದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿ, ಆಸ್ತಿ ಪಾಸ್ತಿ ನಷ್ಟವಾಗಿದ್ದರೆ ಅದಕ್ಕೆ ಸಚಿವ ಈಶ್ವರಪ್ಪ ಅವರೇ ನೇರ ಹೊಣೆ" ಎಂದು ಸಿದ್ದರಾಮಯ್ಯ ದೂರಿದರು.

ಶಿವಮೊಗ್ಗ ಗಲಭೆ, ಸಿದ್ದರಾಮಯ್ಯ ಪ್ರಶ್ನೆಗಳು
"ರಾಜ್ಯದಲ್ಲಿ ಈಶ್ವರಪ್ಪ ಅವರದೇ ಪಕ್ಷದ ಸರ್ಕಾರ ಇದೆ. ಪಿ.ಎಫ್.ಐ ಮತ್ತು ಎಸ್.ಡಿ.ಪಿ.ಐ ಗಳು ಕೊಲೆ ಪ್ರಕರಣದಲ್ಲಿ ಭಾಗಿಯಾದ ಬಗ್ಗೆ ಸಾಕ್ಷ್ಯಗಳು ಇದ್ದರೆ ಈ ಕೂಡಲೇ ಅವುಗಳನ್ನು ನಿಷೇಧ ಮಾಡಲಿ. ನಿಷೇಧ ಮಾಡಬೇಡಿ ಎಂದು ಅವರಿಗೆ ಅಡ್ಡ ಬರುತ್ತಿರುವವರಾದರೂ ಯಾರು?" ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
"ಹರ್ಷ ಕೊಲೆ ಪ್ರಕರಣವನ್ನು ಎನ್.ಐ.ಎ ಇಂದಲೋ ಅಥವಾ ಬೇರೆ ಯಾವ ತನಿಖಾ ಸಂಸ್ಥೆಯ ಮೂಲಕವಾದರೂ ತನಿಖೆ ನಡೆಸಲಿ. ಅದಕ್ಕೆ ನನ್ನ ತಕರಾರು ಇಲ್ಲ. ಅದರ ಜೊತೆಗೆ ನಿನ್ನೆಯ ಶವ ಯಾತ್ರೆಯಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟವಾಗಿದೆ, ಇಬ್ಬರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ, ಸಾಕಷ್ಟು ಜನರ ಮೇಲೆ ಹಲ್ಲೆ, ಕಲ್ಲು ತೂರಾಟ ನಡೆದಿದೆ. ಈ ಎಲ್ಲಾ ಕಾರಣಗಳಿಗಾಗಿ ಒಟ್ಟು ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸುತ್ತೇನೆ" ಎಂದರು.

ಈಶ್ವರಪ್ಪ ಸಂಪುಟದಿಂದ ವಜಾಗೊಳಿಸಿ
"ಬಿಜೆಪಿ ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರು ರಾಷ್ಟ್ರೀಯ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ರಾಷ್ಟ್ರ ಧ್ವಜಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಅವರ ಹೇಳಿಕೆ ಅತ್ಯಂತ ಬೇಜವಾಬ್ದಾರಿಯುತವಾದುದ್ದು ಎಂದು ಹೇಳಿದ್ದಾರೆ. ಜೊತೆಗೆ ಅವರಿಗೆ ತಾವು ಛೀಮಾರಿ ಹಾಕಿರುವುದಾಗಿ ತಿಳಿಸಿದ್ದಾರೆ. ಇದಕ್ಕಿಂತ ನಾಚಿಕೆಗೇಡಿನ ವಿಚಾರ ಬೇರೆ ಉಂಟಾ? ಈಶ್ವರಪ್ಪ ಅವರು ದೇಶ ಮತ್ತು ಸರ್ಕಾರಕ್ಕಿಂತ ದೊಡ್ಡವರಲ್ಲ. ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಬೇಕು ಜೊತೆಗೆ ಕೂಡಲೇ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು" ಎಂದು ಸಿದ್ದರಾಮಯ್ಯ ಆಗ್ರಹಿಸಿದರು.
-
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ












Click it and Unblock the Notifications