Breaking:ಶಿವಮೊಗ್ಗ ಚೂರಿ ಇರಿತ ಪ್ರಕರಣದ ಆರೋಪಿಗೆ ಉಗ್ರರ ನಂಟು: ಆರಗ ಜ್ಞಾನೇಂದ್ರ
ಶಿವಮೊಗ್ಗ, ಸೆಪ್ಟೆಂಬರ್ 3: ಸಾವರ್ಕರ್ ಫೋಟೊ ವಿವಾದ ಸಂದರ್ಭ ಯುವಕನಿಗೆ ಚಾಕು ಇರಿದ ಆರೋಪಿ ಜಬೀವುಲ್ಲಾನ ಹಿನ್ನೆಲೆ ಭಯಾನಕವಾಗಿದೆ. ಆತನಿಗೆ ಹಲವು ಉಗ್ರ ಗುಂಪಿನೊಂದಿಗೆ ನಂಟು ಇದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಶನಿವಾರ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.
ಉಗ್ರ ಗುಂಪಿನೊಂದಿಗೆ ನಂಟು ಇರುವ ಹಿನ್ನಲೆಯಲ್ಲಿ ಶೀಘ್ರದಲ್ಲೇ ಜಬೀವುಲ್ಲಾ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಲಾಗುತ್ತದೆ. ಇಂತಹವರಿಂದ ದೇಶ ಉಳಿಯುತ್ತದೆ. ಆತನ ಹಿನ್ನೆಲೆ ಭಯಾನಕವಾಗಿ ಇರುವುದರಿಂದ ಎನ್ಐಎಗೆ ಪ್ರಕರಣ ವಹಿಸಲಾಗುತ್ತಿದೆ ಎಂದು ತಿಳಿಸಿದರು.
ಯಾರಿದು ಜಬೀವುಲ್ಲಾ?
ಆಗಸ್ಟ್ 15ರಂದು ಶಿವಮೊಗ್ಗದ ಅಮೀರ್ ಅಹಮದ್ ಸರ್ಕಲ್ನಲ್ಲಿ ಸಾರ್ವಕರ್ ಫ್ಲೆಕ್ಸ್ ವಿವಾದ ಸಂಬಂಧ ಗಲಾಟೆಯಾಗಿತ್ತು. ಆ ದಿನ ಗಾಂಧಿ ಬಜಾರ್ ಬಳಿ ಪ್ರೇಮ್ ಸಿಂಗ್ ಎಂಬ ಯುವಕನಿಗೆ ಚಾಕು ಇರಿಯಲಾಗಿತ್ತು. ಈ ಪ್ರಕರಣ ಸಂಬಂಧ ಜಬೀವುಲ್ಲಾನ ಪಾತ್ರ ಇರುವುದು ಪೊಲೀಸರಿಗೆ ತಿಳಿದು ಬಂದಿತ್ತು.

ಮಾರ್ನಮಿ ಬೈಲು ನಿವಾಸಿ ಜಬೀವುಲ್ಲಾ ಅಲಿಯಾಸ್ ಚರ್ಬಿ (30) ಎಂಬಾತನನ್ನು ಬಂಧಿಸುವ ವೇಳೆ, ಪೊಲೀಸರ ಮೇಲೆ ಚಾಕುವಿನಿಂದ ದಾಳಿ ಮಾಡಲು ಯತ್ನಿಸಿದ್ದ. ಈ ಸಂದರ್ಭ ಪೊಲೀಸರು ಆತ್ಮರಕ್ಷಣೆಗೆ ಹಾರಿಸಿದ ಗುಂಡು, ಜಬೀವುಲ್ಲಾನ ಕಾಲಿಗೆ ತಗುಲಿತ್ತು. ಗಾಯಗೊಂಡಿದ್ದ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇತ್ತೀಚೆಗಷ್ಟೆ ಜಬೀವುಲ್ಲಾ ಆಸ್ಪತ್ರೆಯಿಂದ ಬಿಡುಗಡೆಯಾಗಿ, ಜೈಲು ಸೇರಿದ್ದ.

ಜಬೀವುಲ್ಲಾ ಮನೆ ಮೇಲೆ ದಾಳಿ
ಜಬೀವುಲ್ಲಾ ಸೇರಿದಂತೆ ಚಾಕು ಇರಿತ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಹಿನ್ನೆಲೆ ಕುರಿತು ಅನುಮಾನ ವ್ಯಕ್ತಪಡಿಸಿದ್ದ ಪೊಲೀಸರು, ಮನೆಗಳ ಮೇಲೆ ದಾಳಿ ನಡೆಸಿದ್ದರು. ರಾತ್ರೋರಾತ್ರಿ ದಾಳಿ ನಡೆಸಿದ್ದ ಪೊಲೀಸರು ಕೆಲವು ವಸ್ತುಗಳು ಮತ್ತು ದಾಖಲೆಗಳನ್ನು ವಶಕ್ಕೆ ಪಡೆದಿದ್ದರು.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications