ಶಿವಮೊಗ್ಗ: ಶಿವರಾತ್ರಿಗೆ ಹೋದ ಬಾಲಕರು ತುಂಗೆ ಪಾಲು
ಶಿವಮೊಗ್ಗ, ಫೆ. 18: ನದಿ ದಂಡೆಯ ಮೇಲೆ ಶಿವರಾತ್ರಿ ಉತ್ಸವ ನಡೆಯುತ್ತಿತ್ತು. ಘಂಟಾ ಘೋಷ, ವಾದ್ಯಗಳ ಶಬ್ದ ಮೊಳಗುತ್ತಿತ್ತು. ಆದರೆ ಅದೇ ಸಮಯಕ್ಕೆ ಪಕ್ಕದ ನದಿಯಲ್ಲಿ ಈಜಲು ನೀರಿಗಿಳಿದಿದ್ದ ಮೂವರು ಬಾಲಕರು ನೀರು ಪಾಲಾಗಿದ್ದರು. ಅವರ ಆಕ್ರಂದನ ಉತ್ಸವದ ಗಲಾಟೆಯಲ್ಲಿ ಜನರ ಕಿವಿಗೆ ಕೇಳಲೇ ಇಲ್ಲ.
ಹೌದು... ಶಿವರಾತ್ರಿ ಉತ್ಸವಕ್ಕೆ ತೆರಳಿದ್ದ ಮೂವರು ಬಾಲಕರು ತುಂಗಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಅರಕೆರೆ ಸಮೀಪದ ಶಿವಾಲಯದ ಬಳಿಯ ತುಂಗಾ ನದಿ ಮೂವರು ಬಾಲಕರ ಪ್ರಾಣ ಬಲಿತೆಗೆದುಕೊಂಡಿದೆ.[ಗರ್ಭಿಣಿ ಪ್ರಿಯತಮೆಯನ್ನು ನದಿಗೆ ತಳ್ಳಿದ ಭೂಪ]

ಶಿವಮೊಗ್ಗದ ನಂದೀಶ್, ಲೋಹಿತ್ ಸಿಂಗ್ ಮತ್ತು ಅಭಿಷೇಕ್ ಸಾವೀಗೀಡಾದ ಬಾಲಕರು. ಫೆಬ್ರವರಿ 17 ಶಿವರಾತ್ರಿ ಪ್ರಯುಕ್ತ ಅರಕೆರೆಯಲ್ಲಿ ನಡೆಯುತ್ತಿದ್ದ ಉತ್ಸವಕ್ಕೆ ತೆರಳಿದ್ದ ಬಾಲಕರು ಈಜಲು ನದಿಗೆ ಇಳಿದಿದ್ದಾರೆ. ಆದರೆ ಮೂವರು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಘಟನೆ ಮಂಗಳಾರವೇ ನಡೆದಿದ್ದು ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ದುರ್ಗಿಗುಡಿಯ ಶಾಲೆಯಲ್ಲಿ ಎಸ್ಎಸ್ ಎಲ್ ಸಿ ಓದುತ್ತಿದ್ದ ನಾಲ್ವರು ಬಾಲಕರು ಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳಲು ಅರಕೆರೆಗೆ ಆಗಮಿಸಿದ್ದರು. ಈ ವೇಳೆ ಮೂವರು ಬಾಲಕರು ನೀರಿಗಿಳಿಯುವ ತೀರ್ಮಾನ ಮಾಡಿದ್ದಾರೆ. ಮತ್ತೊಬ್ಬ ಬಾಲಕ ನವೀನ್ ಮಾತ್ರ ಮೇಲೆ ಉಳಿದಿದ್ದಾನೆ.
ಸಂಜೆ ಮನೆಗೆ ಮಕ್ಕಳು ಹಿಂದಿರುಗದ್ದನ್ನು ನೋಡಿ ಪಾಲಕರು ಗಾಬರಿಗೊಂಡಿದ್ದಾರೆ. ತಕ್ಷಣ ಅಕ್ಕಪಕ್ಕದವರೊಂದಿಗೆ ಸೇರಿ ಮಕ್ಕಳನ್ನು ಹುಡುಕಲು ಪ್ರಯತ್ನ ಮಾಡಿದ್ದಾರೆ. ರಾತ್ರಿಯಿಡಿ ಮಕ್ಕಳಿಗಾಗಿ ಹುಡುಕಾಟ ನಡೆಸಿದರೂ ಪ್ರಯೋಜನವಾಗಿಲ್ಲ.
ನಂತರ ಬೆಳಗಿನ ಜಾವ ಮಕ್ಕಳ ಪಾಲಕರು ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರೆ. ಬುಧವಾರ ಬೆಳಗ್ಗೆ ತುಂಗಾ ನದಿಯಲ್ಲಿ ಲೋಹಿತ್ ಸಿಂಗ್ ಎಂಬ ಬಾಲಕನ ಶವ ತೆಲುತ್ತಿರುವುದು ಕಂಡುಬಂದಿದೆ. ಇದನ್ನು ತಿಳಿದ ಪೊಲೀಸರು ಹುಡುಕಾಟ ನಡೆಸಿದಾಗ ಮಕ್ಕಳ ಶವ ಪತ್ತೆಯಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications