ಶಿವಮೊಗ್ಗ: ಶಿವರಾತ್ರಿಗೆ ಹೋದ ಬಾಲಕರು ತುಂಗೆ ಪಾಲು
ಶಿವಮೊಗ್ಗ, ಫೆ. 18: ನದಿ ದಂಡೆಯ ಮೇಲೆ ಶಿವರಾತ್ರಿ ಉತ್ಸವ ನಡೆಯುತ್ತಿತ್ತು. ಘಂಟಾ ಘೋಷ, ವಾದ್ಯಗಳ ಶಬ್ದ ಮೊಳಗುತ್ತಿತ್ತು. ಆದರೆ ಅದೇ ಸಮಯಕ್ಕೆ ಪಕ್ಕದ ನದಿಯಲ್ಲಿ ಈಜಲು ನೀರಿಗಿಳಿದಿದ್ದ ಮೂವರು ಬಾಲಕರು ನೀರು ಪಾಲಾಗಿದ್ದರು. ಅವರ ಆಕ್ರಂದನ ಉತ್ಸವದ ಗಲಾಟೆಯಲ್ಲಿ ಜನರ ಕಿವಿಗೆ ಕೇಳಲೇ ಇಲ್ಲ.
ಹೌದು... ಶಿವರಾತ್ರಿ ಉತ್ಸವಕ್ಕೆ ತೆರಳಿದ್ದ ಮೂವರು ಬಾಲಕರು ತುಂಗಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಅರಕೆರೆ ಸಮೀಪದ ಶಿವಾಲಯದ ಬಳಿಯ ತುಂಗಾ ನದಿ ಮೂವರು ಬಾಲಕರ ಪ್ರಾಣ ಬಲಿತೆಗೆದುಕೊಂಡಿದೆ.[ಗರ್ಭಿಣಿ ಪ್ರಿಯತಮೆಯನ್ನು ನದಿಗೆ ತಳ್ಳಿದ ಭೂಪ]

ಶಿವಮೊಗ್ಗದ ನಂದೀಶ್, ಲೋಹಿತ್ ಸಿಂಗ್ ಮತ್ತು ಅಭಿಷೇಕ್ ಸಾವೀಗೀಡಾದ ಬಾಲಕರು. ಫೆಬ್ರವರಿ 17 ಶಿವರಾತ್ರಿ ಪ್ರಯುಕ್ತ ಅರಕೆರೆಯಲ್ಲಿ ನಡೆಯುತ್ತಿದ್ದ ಉತ್ಸವಕ್ಕೆ ತೆರಳಿದ್ದ ಬಾಲಕರು ಈಜಲು ನದಿಗೆ ಇಳಿದಿದ್ದಾರೆ. ಆದರೆ ಮೂವರು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಘಟನೆ ಮಂಗಳಾರವೇ ನಡೆದಿದ್ದು ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ದುರ್ಗಿಗುಡಿಯ ಶಾಲೆಯಲ್ಲಿ ಎಸ್ಎಸ್ ಎಲ್ ಸಿ ಓದುತ್ತಿದ್ದ ನಾಲ್ವರು ಬಾಲಕರು ಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳಲು ಅರಕೆರೆಗೆ ಆಗಮಿಸಿದ್ದರು. ಈ ವೇಳೆ ಮೂವರು ಬಾಲಕರು ನೀರಿಗಿಳಿಯುವ ತೀರ್ಮಾನ ಮಾಡಿದ್ದಾರೆ. ಮತ್ತೊಬ್ಬ ಬಾಲಕ ನವೀನ್ ಮಾತ್ರ ಮೇಲೆ ಉಳಿದಿದ್ದಾನೆ.
ಸಂಜೆ ಮನೆಗೆ ಮಕ್ಕಳು ಹಿಂದಿರುಗದ್ದನ್ನು ನೋಡಿ ಪಾಲಕರು ಗಾಬರಿಗೊಂಡಿದ್ದಾರೆ. ತಕ್ಷಣ ಅಕ್ಕಪಕ್ಕದವರೊಂದಿಗೆ ಸೇರಿ ಮಕ್ಕಳನ್ನು ಹುಡುಕಲು ಪ್ರಯತ್ನ ಮಾಡಿದ್ದಾರೆ. ರಾತ್ರಿಯಿಡಿ ಮಕ್ಕಳಿಗಾಗಿ ಹುಡುಕಾಟ ನಡೆಸಿದರೂ ಪ್ರಯೋಜನವಾಗಿಲ್ಲ.
ನಂತರ ಬೆಳಗಿನ ಜಾವ ಮಕ್ಕಳ ಪಾಲಕರು ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರೆ. ಬುಧವಾರ ಬೆಳಗ್ಗೆ ತುಂಗಾ ನದಿಯಲ್ಲಿ ಲೋಹಿತ್ ಸಿಂಗ್ ಎಂಬ ಬಾಲಕನ ಶವ ತೆಲುತ್ತಿರುವುದು ಕಂಡುಬಂದಿದೆ. ಇದನ್ನು ತಿಳಿದ ಪೊಲೀಸರು ಹುಡುಕಾಟ ನಡೆಸಿದಾಗ ಮಕ್ಕಳ ಶವ ಪತ್ತೆಯಾಗಿದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications