Shivamogga: ಧಾರಾಕಾರ ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು- ರಾತ್ರಿಯಿಡೀ ನಿದ್ದೆಗೆಟ್ಟ ಜನ!
ಶಿವಮೊಗ್ಗ ಅಕ್ಟೋಬರ್ 12: ಶಿವಮೊಗ್ಗದಲ್ಲಿ ಧಾರಾಕಾರ ಮಳೆಯಿಂದಾಗಿ ದೊಡ್ಡ ಅವಾಂತರವೇ ಸೃಷ್ಟಿಯಾಗಿದೆ. ರಾತ್ರಿಯಿಡೀ ಸುರಿದ ಮಳೆಯಿಂದಾಗಿ ಹಲವೆಡೆ ಮನೆಗಳಿಗೆ ಮಳೆ ನೀರು ನುಗ್ಗಿದೆ. ಕಳೆದ ಕೆಲ ದಿನಗಳಿಂದ ಭದ್ರಾವತಿ ತಾಲೂಕಿನಲ್ಲಿ ಮಳೆ ಅಬ್ಬರ ಜೋರಾಗಿದೆ. ನಿರಂತರ ಮಳೆಗೆ ರಸ್ತೆಗಳು, ಮನೆಗಳು ಜಲಾವೃತಗೊಂಡು ಊರಿಗೂರೇ ಹಬ್ಬದ ಕಳೆ ಕಳೆದುಕೊಂಡಿದೆ.
ಹೌದು... ಇಂದು ದಸರಾ ಹಬ್ಬ. ಹಬ್ಬದ ಹಿನ್ನೆಲೆ ಮನೆ, ಕಚೇರಿಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತಿವೆ. ಜನ ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆಗಳಲ್ಲಿ ಭಾಗವಹಿಸುತ್ತಿದ್ದಾರೆ. ಆದರೆ ಬೆಳಗ್ಗೆಯಿಂದ ಶುರುವಾದ ಮಳೆಯಿಂದಾಗಿ ಜನ ಮನೆ ಬಿಟ್ಟು ಹೊರಬರಲು ಹಿಂದೇಟು ಹಾಕುವಂತಹ ಸ್ಥಿತಿ ನಿರ್ಮಾಣವಾಗಿದೆ.

ಮಳೆ ಮುಂದುವರೆದ ಹಿನ್ನೆಲೆ ಚರಂಡಿಗಳು ತುಂಬಿ ಹರಿಯುತ್ತಿವೆ. ಚರಂಡಿ ತುಂಬಿದ ಪರಿಣಾಮ ರಸ್ತೆ ಮೇಲೆ ಮಳೆಯ ನೀರು ತುಂಬಿ ಹರಿಯುತ್ತಿದೆ. ಹೀಗಾಗಿ ವಾಹನ ಸಂಚಾರಕ್ಕೂ ಅಡ್ಡಿಯಾಗಿದೆ. ಅಲ್ಲದೆ ಭದ್ರಾವತಿ ನಗರದ ಜನ್ನಾಪುರದ ಕಿತ್ತೂರು ರಾಣಿ ಚೆನ್ನಮ್ಮ ಬ್ಲಾಕ್ನ ಮನೆಯೊಂದರ ಕಾಂಪೌಂಡ್ ಗೋಡೆ ಕುಸಿದು ಮನೆಗಳಿಗೆ ನುಗ್ಗಿರುವ ನೀರನ್ನು ಹೊರ ಹಾಕಲು ಜನರು ಹರಸಾಹಸ ಪಡುತ್ತಿದ್ದಾರೆ.
ಒಂದೆಡೆ ಮಳೆ ಮತ್ತೊಂದೆಡೆ ದಸರಾ ಜಂಬೂ ಸವಾರಿ ಮೆರವಣಿಗೆ
ಶಿವಮೊಗ್ಗದಲ್ಲಿ ಒಂದೆಡೆ ಮಳೆ ಜೋರಾಗಿದ್ದರೆ ಮತ್ತೊಂದೆಡೆ ರಾಜ್ಯದ ಎರಡನೇ ಅತಿದೊಡ್ಡ ಶಿವಮೊಗ್ಗ ದಸರಾ ಜಂಬೂ ಸವಾರಿ ಮೆರವಣಿಗೆ ಆರಂಭವಾಗಿದೆ. ಶಿವಪ್ಪನಾಯಕ ಅರಮನೆಯಿಂದ ದಸರಾ ಜಂಬೂ ಸವಾರಿ ಅದ್ದೂರಿಯಾಗಿ ಆರಂಭಗೊಂಡಿದೆ.

ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಜಂಬೂ ಸವಾರಿಗೆ ಚಾಲನೆ ನೀಡಿದರು. ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಸಂಬೂ ಸವಾರಿಗೆ ಚಾಲನೆ ನೀಡಲಾಯಿತು. ಸಾಗರ್ ಆನೆ ಬೆಳ್ಳಿ ಅಂಬಾರಿ ಹೊತ್ತಿದೆ. ಬಾಲಣ್ಣ ಮತ್ತು ಬಹದ್ದೂರ್ ಎಂಬ ಆನೆಗಳು ಸಾಗರ್ ಆನೆಗೆ ಸಾಥ್ ನೀಡಿವೆ. 650 ಕೆಜಿಯ ಬೆಳ್ಳಿ ಅಂಬಾರಿಯಲ್ಲಿ ಚಾಮುಂಡೇಶ್ವರಿಯ ಮೆರವಣಿಗೆ ಮಾಡಲಾಗುತ್ತಿದೆ. ಶಾಸಕ ಚನ್ನಬಸಪ್ಪ, ಡಿಸಿ, ಎಸ್ಪಿ ಹಾಗೂ ಜಿಲ್ಲಾ ಪಂಚಾಯತ್ ಸಿಇಓ ಮೆರವಣಿಗೆಯಲ್ಲಿ ಭಾಗಿಯಾಗಿದ್ದಾರೆ.
ಕಳೆದ ರಾತ್ರಿಯೂ ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆ
ಕಳೆದ ರಾತ್ರಿ ಕೂಡ ಎರಡು ಗಂಟೆಗೂ ಹೆಚ್ಚು ಕಾಲ ಶಿವಮೊಗ್ಗದ ಭದ್ರಾವತಿ ತಾಲೂಕಿನಲ್ಲಿ ಎಡಬಿಡದೆ ಧಾರಾಕಾರವಾಗಿ ಮಳೆ ಸುರಿದಿದೆ. ಇದರಿಂದಾಗಿ ರಸ್ತೆಗಳ ಮೇಲೆ ನೀರು ಉಕ್ಕಿ ಹರಿಯುತ್ತಿರುವ ದೃಶ್ಯಗಳು ಕಂಡು ಬಂದಿದೆ. ಇದರಿಂದಾಗಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಮಳೆಯ ಆರ್ಭಟಕ್ಕೆ ಭದ್ರಾವತಿ ಪಟ್ಟಣದ ಬಸವೇಶ್ವರ ಸರ್ಕಲ್ ಜಲಾವೃತಗೊಂಡಿದೆ. ತಗ್ಗುಪ್ರದೇಶದ ಮನೆಗಳಿಗೆ ಮಳೆಯ ನೀರು ನುಗ್ಗಿದೆ. ಭದ್ರಾವತಿ ಪಟ್ಟಣದ ಭೂತನಗುಡಿ ಬಡಾವಣೆಯಲ್ಲಿ ಅಂಗಡಿ, ಮನೆಗಳಿಗೆ ಮಳೆಯ ನೀರು ನುಗ್ಗಿ ದೊಡ್ಡ ಅವಾಂತರವೇ ಸೃಷ್ಟಿಯಾಗಿದೆ. ಬಿಟ್ಟು ಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನಜೀವನವೇ ಅಸ್ತವ್ಯಸ್ತಗೊಂಡಿದೆ.
ಚಿಕ್ಕಮಗಳೂರಿನಲ್ಲಿ ಮಳೆ ಅಬ್ಬರ
ಇನ್ನೂ ಚಿಕ್ಕಮಗಳೂರಿನಲ್ಲೂ ಭಾರೀ ಮಳೆಯಾಗುತ್ತಿದ್ದು, ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕುದುರೆಮುಖ, ಸಂಸೆ, ಹೊರನಾಡು ಸುತ್ತಮುತ್ತ ಮಳೆ ಅಬ್ಬರ ಜೋರಾಗಿದೆ. ಕಳಸ ಪಟ್ಟಣದಲ್ಲೂ ಮಳೆ ಅರ್ಭಟ ಶುರುವಾಗಿದೆ. ಭಾರಿ ಮಳೆಯಿಂದಾಗಿ ಕಾಫಿ-ಅಡಿಕೆ ಬೆಳೆಗಾರರು ಆತಂಕಕ್ಕೀಡಾಗಿದ್ದಾರೆ.
ತೋಟಗಳಿಂದ ಮಳೆ ನೀರು ರಸ್ತೆಗೆ ನುಗ್ಗುತ್ತಿದ್ದು ಚಾರ್ಮಾಡಿ ಘಾಟ್ ತಪ್ಪಲಿನಲ್ಲೂ ಭಾರೀ ಮಳೆಯಿಂದಾಗಿ ಪ್ರವಾಸಿಗರು ಪರದಾಡುವಂತಾಗಿದೆ. 3-4 ದಿನದಿಂದ ಮಧ್ಯಾಹ್ನದ ಬಳಿಕ ಕಾಫಿನಾಡಲ್ಲಿ ನಿತ್ಯ ಮಳೆ ಸುರಿಯುತ್ತಿದೆ. ಮಲೆನಾಡಿನಾದ್ಯಂತ ಬೆಳೆಗ್ಗೆಯಿಂದಲೂ ಮೋಡ ಕವಿದ ವಾತವರಣ ಆವರಿಸುತ್ತಿದ್ದು, ಮುಂದಿನ ಮೂರ್ನಾಲ್ಕು ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications