ಕೊರೊನಾ ಎದುರಿಸಲು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಸನ್ನದ್ಧ: ಸಿಇಒ
ಶಿವಮೊಗ್ಗ, ಮಾರ್ಚ್ 13: ಶಿವಮೊಗ್ಗ ಜಿಲ್ಲೆಗೆ ಕೊರೊನಾ ವೈರಸ್ ಇನ್ನೂ ಕಾಲಿಟ್ಟಿಲ್ಲ. ಹಾಗಂತ ಜಿಲ್ಲಾಡಳಿತ ಕೈಕಟ್ಟಿ ಕುಳಿತಕೊಳ್ಳದೇ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊರೊನಾ ಎದುರಿಸಲು ಮುಂಜಾಗ್ರತಾ ಕ್ರಮವಾಗಿ ಸಮರ್ಪಕವಾಗಿ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೈಶಾಲಿ ತಿಳಿಸಿದರು.
ಈ ಮೊದಲು ಕೇವಲ ಒಂದು ಕೊಠಡಿಯಲ್ಲಿ 6 ಬೆಡ್ ಗಳನ್ನು ಸುಸಜ್ಜಿತವಾಗಿ ವ್ಯವಸ್ಥೆ ಮಾಡಲಾಗಿತ್ತು. ಈಗ 12 ಹಾಸಿಗೆಗಳುಳ್ಳ ಎರಡು ಕೊಠಡಿಗಳನ್ನು ಮೀಸಲಿಡಲಾಗಿದೆ. ಇದಕ್ಕೆ ಬೇಕಾದ N95 ಮಾಸ್ಕ್ ನ್ನ ತರಿಸಿಡಲಾಗಿದ್ದು, ಅಗತ್ಯ ಔಷಧಿಗಳನ್ನು ತಂದಿಟ್ಟುಕೊಳ್ಳಲಾಗಿದೆ. ವೈದ್ಯರಿಗೆ ಮತ್ತು ನರ್ಸ್ ಗಳಿಗೆ ಅಗತ್ಯ ತರಬೇತಿಯನ್ನೂ ನೀಡಲಾಗಿದೆ ಎಂದರು.
ಇದರ ಜೊತೆಗೆ ಗೌನ್ ಗಳ ಅವಶ್ಯಕತೆ ಇದ್ದು, ಇದರ ಕೊರತೆ ಇರುವ ಬಗ್ಗೆ ಮಾಹಿತಿ ಬರುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವ ಈಶ್ವರಪ್ಪ, ಗೌನ್ ಗಳ ಬಗ್ಗೆ ಸರ್ಕಾರದೊಂದಿಗೆ ಮಾತನಾಡಿ ಶೀಘ್ರದಲ್ಲಿಯೇ ವ್ಯವಸ್ಥೆ ಮಾಡಲಾಗುವುದು ಎಂದರು.

ಮೆಗ್ಗಾನ್ ಕುಂದುಕೊರತೆಗಳ ಬಗ್ಗೆ ಏಪ್ರಿಲ್ ಮೊದಲನೇ ವಾರದಲ್ಲಿ ಸಭೆ ಮೆಗ್ಗಾನ್ ನಲ್ಲಿ ಅವ್ಯವಸ್ಥೆಯ ಕುರಿತು ಈಗಾಗಲೇ ನಿರ್ದೇಶಕ ಡಾ.ಲೇಪಾಕ್ಷಿಯೊಂದಿಗೆ ಸಭೆ ನಡೆಸಲಾಗಿದ್ದು, ಹಲವು ಸೂಕ್ತ ನಿರ್ದೇಶನವನ್ನು ನೀಡಲಾಗಿತ್ತು. ಮುಂದಿನ ಪುನರ್ ಪರಿಶೀಲನಾ ಸಭೆಯಲ್ಲಿ ಸರಿಪಡಿಸಿಕೊಳ್ಳುವುದಾಗಿ ನಿರ್ದೇಶಕರು ತಿಳಿಸಿದರು.
ಈ ತಿಂಗಳಲ್ಲಿ ಸಭೆ ನಡೆಸಬಹುದು ಎಂದು ತಿಳಿದಿದ್ದೆವು, ಆದರೆ ಅಧಿವೇಶನ ನಡೆಯುತ್ತಿರುವುದರಿಂದ ಈ ತಿಂಗಳಲ್ಲಿ ಪುನರ್ ಪರಿಶೀಲನಾ ಸಭೆ ನಡೆಸಲಾಗುತ್ತಿಲ್ಲ. ಇದನ್ನು ಏಪ್ರಿಲ್ ತಿಂಗಳ ಮೊದಲನೇ ವಾರದಲ್ಲಿ ನಡೆಸಲಾಗುವುದು ಎಂದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications