ಶಿವಮೊಗ್ಗ: ಮನೆಯಲ್ಲಿ ಅಗ್ನಿ ಅವಘಡ, ಮಗನನ್ನು ರಕ್ಷಿಸಲು ಹೋದ ಖ್ಯಾತ ಉದ್ಯಮಿ ಸಾವು
ಶಿವಮೊಗ್ಗ, ಜನವರಿ, 08: ಶಾರ್ಟ್ ಸರ್ಕ್ಯೂಟ್ನಿಂದಾಗಿ ಶಿವಮೊಗ್ಗದ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿ ಮನೆಯೊಳಗೆ ಸಿಲುಕಿಕೊಂಡಿದ್ದ ಯುವ ಉದ್ಯಮಿ ದಟ್ಟ ಹೊಗೆಯಿಂದಾಗಿ ಅಸ್ವಸ್ಥಗೊಂಡು ಕೊನೆಯುಸಿರೆಳೆದಿದ್ದಾರೆ.
ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮುಂಭಾಗ ಇರುವ ಭೂಪಾಳಂ ನಿವಾಸದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೆನೆಯಲ್ಲಿ ಸಿಲುಕಿಕೊಂಡಿದ್ದ ಯುವ ಉದ್ಯಮಿ ಭೂಪಾಳಂ ಶರತ್ ಅವರು ಅಗ್ನಿಯ ಜ್ವಾಲೆಯಿಂದ ಅಸ್ವಸ್ಥಗೊಂಡಿದ್ದರು. ನಂತರ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಉದ್ಯಮಿ ಶರತ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಘಟನೆಯ ಸಂಪೂರ್ಣ ವಿವರ
ರಾತ್ರಿ ಭೂಪಾಳಂ ನಿವಸದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿಯ ಜೊತೆಗೆ ಮನೆಯಲ್ಲಿ ದಟ್ಟ ಹೊಗೆಯೂ ಕೂಡ ಆವರಿಸಿಕೊಂಡಿತ್ತು. ಮನೆ ಒಳಗಿದ್ದ ಭೂಪಾಳಂ ಶಶಿಧರ್ ಸೇರಿದಂತೆ ನಾಲ್ವರು ಹೊರಗೆ ಬಂದಿದ್ದರು. ಆದರೆ ಉದ್ಯಮಿ ಶರತ್ ಮಾತ್ರ ಒಳಗೆ ಸಿಲುಕಿ ಅಸ್ವಸ್ಥರಾಗಿದ್ದರು ಎಂದು ತಿಳಿದುಬಂದಿದೆ. ನಂತರ ಸ್ಥಳೀಯರ ಮಾಹಿತಿ ಮೇರೆಗೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿ ಆಗಿದ್ದಾರೆ. ಬೆಂಕಿಯ ಜ್ವಾಲೆಯ ನಡುವೆ ಸಿಲುಕಿಕೊಂಡಿದ್ದ ಉದ್ಯಮಿ ಶರತ್ ಭೂಪಾಳಂ ಮತ್ತು ಅವರ ಮಗನ ರಕ್ಷಣೆ ಮಾಡಿದ್ದಾರೆ. ನಂತರ ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಬೆಳಗ್ಗೆ ಶರತ್ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಗಾಳಿಯಲ್ಲಿ ಗುಂಡು ಹಾರಿಸಿದ್ದ ವ್ಯಕ್ತಿ ಸಾವು
ಇತ್ತೀಚೆಗಷ್ಟೇ ಹೊಸ ವರ್ಷದ ಪಾರ್ಟಿ ವೇಳೆ ಗುಂಡು ತಗುಲಿ ಯುವಕನೊಬ್ಬ ಗಾಯಗೊಂಡಿದ್ದ. ನಂತರ ಗುಂಡು ಹಾರಿಸಿದ ವ್ಯಕ್ತಿಗೆ ಹೃದಯಾಘಾತ ಸಂಭವಿಸಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿವಮೊಗ್ಗದ ವಿದ್ಯಾನಗರದಲ್ಲಿ ನಡೆದಿತ್ತು. ವಿದ್ಯಾನಗರದಲ್ಲಿರುವ ಮಂಜುನಾಥ ಓಲೇಕರ್ ಎಂಬುವವರ ಮನೆಯಲ್ಲಿ ಹೊಸವರ್ಷದ ಪಾರ್ಟಿ ನಡೆಯುತ್ತಿದ್ದಾಗ ಘಟನೆ ಸಂಭವಿಸಿತ್ತು.

ಓಲೇಕರ್ ಅವರು ತಮ್ಮ ಕುಟುಂಬದವರೊಂದಿಗೆ ಹೊಸ ವರ್ಷಾಚರಣೆ ಮಾಡುತ್ತಿದ್ದು, 12 ಗಂಟೆಗೆ ಅವರು ತಮ್ಮ ಮನೆಯಲ್ಲಿದ್ದ ಗನ್ ತೆಗೆದುಕೊಂಡು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಮಂಜುನಾಥ್ ಓಲೇಕರ್ ಹಾರಿಸಿದ ಗುಂಡು ಮಿಸ್ ಫೈರ್ ಆಗಿ ಪಾರ್ಟಿ ಮಾಡುತ್ತಿದ್ದ ವಿನಯ್ ಎಂಬುವವರಿಗೆ ತಗುಲಿದೆ. ಗುಂಡು ತಗುಲಿದ ಕಾರಣ ಯುವಕ ವಿನಯ್ ಗಂಭೀರ ಗಾಯಗೊಂಡಿದ್ದು, ಆತನನ್ನು ಕೂಡಲೆ ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಯುವಕನಿಗೆ ಗುಂಡು ತಗುಲುತ್ತಿದ್ದಂತೆ ಮಂಜುನಾಥ್ ಓಲೇಕರ್ ಅವರು ಆತಂಕಕ್ಕೀಡಾಗಿ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ. ನಂತರ ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು ಎನ್ನುವ ಮಾಹಿತಿ ತಿಳಿದುಬಂದಿತ್ತು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications