ಹೊಳೆಬಾಗಿಲು-ಸಿಗಂದೂರು ಸಂಪರ್ಕ ಸೇತುವೆಗೆ ಕೇಂದ್ರ ಅಸ್ತು
ಸಿಗಂದೂರು, ಫೆಬ್ರವರಿ 05: ಪ್ರಸಿದ್ಧ ಯಾತ್ರಾ ಕ್ಷೇತ್ರ ಸಿಗಂದೂರು ಮತ್ತು ಹೊಳೆಬಾಗಿಲು ನಡುವೆ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಕೇಂದ್ರ ಹಸಿರು ನಿಶಾನೆ ತೋರಿಸಿದ್ದು, ಅದಕ್ಕಾಗಿ 600 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಿದೆ.
ಸೇತುವೆ ನಿರ್ಮಾಣದಿಂದ ಸಿಗಂದೂರು, ಕೊಲ್ಲೂರು ಮುಂತಾದ ಯಾತ್ರಾ ಸ್ಥಳಗಳಿಗೆ ಹೋಗುವುದು ಸುಗಮವಾಗಲಿದ್ದು, ಶರವಾತಿ ನದಿ ಹಿನ್ನೀರಿನ ಜನರ ಜೀವನ ಸುಧಾರಿಸಲಿದೆ.
ಶರವಾತಿ ಜಲವಿದ್ಯುತ್ ಯೋಜನೆಯಿಂದಾಗಿ ಸಾಗರ ತಾಲ್ಲೂಕಿನ ಕರೂರು, ಬಾರಂಗಿ, ಆವಿನಹಳ್ಳಿ, ಹೋಬಳಿಗಳ 5000 ಕ್ಕೂ ಹೆಚ್ಚು ಕುಟುಂಬಗಳು ಪ್ರಮುಖ ವಾಣಿಜ್ಯ ಕ್ಷೇತ್ರ ಸಾಗರದೊಂದಿಗೆ ಸಂಪರ್ಕ ಕಡಿದುಕೊಂಡಿದ್ದವು. ಇದರಿಂದ ಅವರ ಆರೋಗ್ಯ, ಶಿಕ್ಷಣದಂತಹಾ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದರು ಆದರೆ ಸೇತುವೆ ನಿರ್ಮಾಣದ ಬಳಿಕ ಆ ಜನರ ಜೀವನ ಸಹಜ ಸ್ಥಿತಿಗೆ ಮರಳುವ ವಿಶ್ವಾಸವಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಸಂಪರ್ಕ ಸೇತುವೆ ಬಗ್ಗೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಸಲ್ಲಿಸಿದ್ದು, ಅವರು ಮನವಿಗೆ ಸ್ಪಂದಿಸಿದ ಕಾರಣ ಸೇತುವೆ ನಿರ್ಮಾಣಕ್ಕೆ ಹಸಿರು ನಿಶಾನೆ ಲಭಿಸಿದೆ ಎನ್ನಲಾಗಿದೆ. ಸ್ವತಃ ಯಡಿಯೂರಪ್ಪ ಅವರು ಈ ವಿಷಯವನ್ನು ಹೇಳಿದ್ದಾರೆ.
ಸಾಗರ, ಹೊಳೆಬಾಗಿಲು, ಸಿಗಂದೂರು, ಮರಕುಟುಕ ಮೂಲಕ ಬೈಂದೂರು-ರಾಣೆ ಬೆನ್ನೂರು ರಾಷ್ಟ್ರೀಯ ಹೆದ್ದಾರಿಗೆ ಜೋಡಣೆ ಮಾಡಿ, ರಾಷ್ಟ್ರೀಯ ಹೆದ್ದಾರಿ ಎಂದು ಘೋಷಣೆ ಮಾಡಿ ಸೇತುವೆ ನಿರ್ಮಾಣಕ್ಕೆ 600 ಕೋಟಿ ರೂಪಾಯಿ ಮಂಜೂರು ಮಾಡಿದ್ದಾರೆ ಎಂದು ಯಡಿಯೂರಪ್ಪ ಅವರು ಮಾಹಿತಿ ಹಂಚಿಕೊಂಡಿದ್ದಾರೆ.
ಇದೇ ತಿಂಗಳ 19ನೇ ತಾರೀಖಿನಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಆಗಮಿಸಿ ಸೇತುವೆ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications