ಶಿವಮೊಗ್ಗ; ಸಿಗಂದೂರು ದೇವಾಲಯದ ಯಥಾಸ್ಥಿತಿ ಮುಂದುವರಿಕೆ?
ಶಿವಮೊಗ್ಗ, ಅಕ್ಟೋಬರ್ 20 : ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ಪ್ರಸಿದ್ಧ ಸಿಗಂದೂರು ಚೌಡೇಶ್ವರಿ ದೇವಾಲಯವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ನೀಡುವುದಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಸರ್ಕಾರದ ಪ್ರಸ್ತಾವನೆವನ್ನು ಜಿಲ್ಲೆಯ ಈಡಿಗ ಸಮುದಾಯ ವಿರೋಧಿಸಿದೆ.
ಸೊರಬ ಕ್ಷೇತ್ರದ ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ ಈ ಕುರಿತು ಮಾತನಾಡಿದ್ದಾರೆ. "ಸಿಗಂದೂರು ದೇವಾಲಯದ ಆಡಳಿತ ನಿರ್ವಹಣೆ, ಪೂಜಾ ಕಾರ್ಯಗಳ ವಿಷಯದಲ್ಲಿ ಯಥಾಸ್ಥಿತಿ ಕಾಯ್ದುಕೊಂಡು ಹೋಗುವುದು ಸೂಕ್ತ" ಎಂದು ಹೇಳಿದ್ದಾರೆ.
"ದೇವಾಲಯದ ವಿಚಾರದಲ್ಲಿ ಜಾತಿ ಹಾಗೂ ರಾಜಕಾರಣ ಮಾಡುವುದು ಸರಿಯಲ್ಲ. ಇದು ಎಲ್ಲಾ ಸಮುದಾಯದವರಿಗೆ ಸೇರಿದ ದೇವಾಲಯ. ಈಗ ಆಗಿರುವ ಗೊಂದಲವನ್ನು ನಾಲ್ಕು ಗೋಡೆಗಳ ನಡುವೆ ಕುಳಿತು ಚರ್ಚಿಸಿ ಬಗೆಹರಿಸಿಕೊಳ್ಳಬೇಕು. ಮುಖ್ಯಮಂತ್ರಿಗಳಿಗೂ ನನ್ನ ನಿಲುವನ್ನು ತಿಳಿಸಿದ್ದೇನೆ" ಎಂದು ಶಾಸಕರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಭಾನುವಾರ ಶಿಕಾರಿಪುರದಲ್ಲಿ ಮಾತನಾಡಿ, "ಸಿಗಂದೂರು ದೇವಾಲಯವನ್ನು ಮುಜರಾಯಿ ಇಲಾಖೆಗೆ ಸೇರಿಸಬೇಕೋ, ಬೇಡವೋ ಎಂಬ ಬಗ್ಗೆ ಸಾಗರ ಮತ್ತು ಸೊರಬ ಶಾಸಕರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ" ಎಂದು ಹೇಳಿದ್ದರು.
ದೇವಾಲಯದಲ್ಲಿ ಗೊಂದಲ; ಕಳೆದ ಶುಕ್ರವಾರ ದೇವಾಲಯದ ಪ್ರಧಾನ ಅರ್ಚಕ ಶೇಷಗಿರಿ ಭಟ್ ಮತ್ತು ಭಕ್ತರ ನಡುವೆ ಗದ್ದಲ ನಡೆದಿತ್ತು. ಈ ಘಟನೆ ದೇವಾಲಯದ ಭಕ್ತರಲ್ಲಿ ನೋವು ಉಂಟು ಮಾಡಿತ್ತು. ಬಳಿಕ ಶಿವಮೊಗ್ಗ ಜಿಲ್ಲಾಧಿಕಾರಿಗಳು ದೇವಾಲಯಕ್ಕೆ ಭೇಟಿ ನೀಡಿದ್ದರು.
"ದೇವರ ಹೆಸರಿನಲ್ಲಿ ಗಲಾಟೆ ಮಾಡುವುದು ಯಾರಿಗೂ ಶೋಭೆ ತರುವುದಿಲ್ಲ. ದೇವಾಲಯವನ್ನು ಮುಜರಾಯಿ ಇಲಾಖೆಗೆ ಸೇರಿಸಬೇಕು ಎಂಬ ಕೂಗು ಹೆಚ್ಚಾಗಿದೆ. ದೇವಾಲಯದಲ್ಲಿ ನಡೆದ ಘಟನೆಯೂ ಗಮನಕ್ಕೆ ಬಂದಿದೆ" ಎಂದು ಮುಖ್ಯಮಂತ್ರಿಗಳು ಶಿಕಾರಿಪುರದಲ್ಲಿ ಹೇಳಿಕೆ ನೀಡಿದ್ದರು.
ದೇವಾಲಯದಲ್ಲಿ ನಡೆದ ಗದ್ದಲ ಒಂದು ಕಡೆ. ಮತ್ತೊಂದು ಕಡೆ ಶಿವಮೊಗ್ಗ ಜಿಲ್ಲಾ ಆರ್ಯ ಈಡಿಗ ಸಂಘ ಚೌಡೇಶ್ವರಿ ದೇವಾಲಯವನ್ನು ಮುಜರಾಯಿ ಇಲಾಖೆಗೆ ನೀಡಲು ವಿರೋಧ ವ್ಯಕ್ತಪಡಿಸಿತ್ತು. ಇಲಾಖೆಗೆ ವಹಿಸುವ ತೀರ್ಮಾನ ಮಾಡಿದರೆ ಹೋರಾಟ ಮಾಡುವ ಎಚ್ಚರಿಕೆ ಕೊಟ್ಟಿತ್ತು.
ಸರ್ಕಾರ ದೇವಾಲಯದ ಆಡಳಿತ ನಿರ್ವಹಣೆ ಬಗ್ಗೆ ಶಿವಮೊಗ್ಗ ಜಿಲ್ಲಾಧಿಕಾರಿಗಳಿಂದ ವರದಿ ಹೇಳಿದೆ. ವರದಿ ಆಧರಿಸಿ ಸರ್ಕಾರ ಮುಂದಿನ ತೀರ್ಮಾನವನ್ನು ಕೈಗೊಳ್ಳುವ ನಿರೀಕ್ಷೆ ಇದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications