ಸಿಗಂದೂರು ದೇವಾಲಯ ಮುಜರಾಯಿಗೆ; ವಿವಾದಕ್ಕೆ ತೆರೆ ಎಳೆದ ಹಾಲಪ್ಪ
ಶಿವಮೊಗ್ಗ, ಅಕ್ಟೋಬರ್ 21 : ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯವನ್ನು ಮುಜರಾಯಿ ಇಲಾಖೆಗೆ ನೀಡುವ ಕುರಿತು ಹಬ್ಬಿರುವ ಸುದ್ದಿಗಳಿಗೆ ಬಿಜೆಪಿ ಶಾಸಕ ಹಾರತಾಳು ಹಾಲಪ್ಪ ತೆರೆ ಎಳೆದಿದ್ದಾರೆ.
"ಸಿಗಂದೂರು ದೇವಾಲಯವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ತರುವ ಇಲ್ಲವೇ ಯಾವುದಾದರೂ ಮಠಗಳಿಗೆ ವಹಿಸಿಕೊಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ಮುಜರಾಯಿ ಇಲಾಖೆಗೆ ಸೇರಿಸುವುದಕ್ಕೆ ನನ್ನ ವಿರೋಧವೂ ಇದೆ" ಎಂದು ಹಾಲಪ್ಪ ಹೇಳಿದ್ದಾರೆ.
"ರಾಮಪ್ಪ ಧರ್ಮದರ್ಶಿಯಾಗಿ, ಎಸ್. ಪಿ. ಶೇಷಗಿರಿ ಭಟ್ ಪ್ರಧಾನ ಅರ್ಚಕರಾಗಿ ಮುಂದುವರಿಯಬೇಕು. ದೇವಾಲಯದ ಆದಾಯದ ಫಲಾನುಭವಿ ನಾನಲ್ಲ. ಆಡಳಿತ ವ್ಯವಸ್ಥೆಯಲ್ಲಿಯೂ ಹಸ್ತಕ್ಷೇಪ ಮಾಡಿಲ್ಲ" ಎಂದು ಸಾಗರದ ಶಾಸಕ ಹರತಾಳು ಹಾಲಪ್ಪ ಸ್ಪಷ್ಟಪಡಿಸಿದ್ದಾರೆ.
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು "ಸಿಗಂದೂರು ದೇವಾಲಯವನ್ನು ಮುಜರಾಯಿ ಇಲಾಖೆಗೆ ಸೇರಿಸಬೇಕೋ, ಬೇಡವೋ ಎಂಬ ಬಗ್ಗೆ ಶಾಸಕರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ" ಎಂದು ಹೇಳಿದ್ದರು.

2015ರಲ್ಲಿಯೇ ಪತ್ರ ಬರೆದಿದ್ದರು
"2015ರಲ್ಲಿಯೇ ಕೆಲವರು ಸಿಗಂದೂರು ದೇವಾಲಯವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ತರಬೇಕು ಎಂದು ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದರು. ಆಗ ನಾನು ಶಾಸಕನಾಗಿ ಇರಲಿಲ್ಲ. ದೇವಾಲಯವನ್ನು ಮುಂದಿಟ್ಟುಕೊಂಡು ಕೆಲವರು ಅನಗತ್ಯವಾಗಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ" ಎಂದು ಶಾಸಕ ಹರತಾಳು ಹಾಲಪ್ಪ ಆರೋಪಸಿದ್ದಾರೆ.

ಎಲ್ಲವನ್ನು ದೇವಿಯೇ ನೋಡಿಕೊಳ್ಳುತ್ತಾಳೆ
"ಧರ್ಮದರ್ಶಿ ರಾಮಪ್ಪ ಅವರ ಮುಗ್ಧತೆ ಬಳಕೆ ಮಾಡಿಕೊಂಡು ಅನಗತ್ಯ ವಿವಾದವನ್ನು ಸೃಷ್ಟಿ ಮಾಡಲಾಗುತ್ತಿದೆ. ಶೇಷಗಿರಿ ಭಟ್ ಮನೆತನದವರು ತಲೆತಲಾಂತರದಿಂದ ದೇವಿಯ ಪೂಜೆಯನ್ನು ಮಾಡುತ್ತಿದ್ದಾರೆ. ಅವರಿಬ್ಬರೂ ಒಟ್ಟಾಗಿ ಹೋಗುವುದಕ್ಕೆ ಕೆಲವರು ಅವಕಾಶ ನೀಡುತ್ತಿಲ್ಲ. ಎಲ್ಲವವನ್ನೂ ದೇವಿಯೇ ನೋಡಿಕೊಳ್ಳುತ್ತಾಳೆ" ಎಂದು ಶಾಸಕರು ಹೇಳಿದರು.

ಯಥಾಸ್ಥಿತಿ ಕಾಪಾಡುವುದು ಸೂಕ್ತ
"ಸಾಗರ ತಾಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯದ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿಕೊಂಡು ಹೋಗುವುದು ಸೂಕ್ತ. ದೇವಾಲಯದ ವಿಚಾರದಲ್ಲಿ ಜಾತಿ, ರಾಜಕಾರಣ ಮಾಡುವುದು ಸರಿಯಲ್ಲ. ಇದು ಎಲ್ಲಾ ಸಮುದಾಯಕ್ಕೂ ಸೇರಿದ ದೇವಾಲಯ" ಎಂದು ಸೊರಬ ಕ್ಷೇತ್ರದ ಶಾಸಕ ಕುಮಾರ್ ಬಂಗಾರಪ್ಪ ಹೇಳಿದ್ದಾರೆ.

ಮುಜರಾಯಿ ಇಲಾಖೆಗೆ ನೀಡಲು ವಿರೋಧ
ಸಿಗಂದೂರು ಚೌಡೇಶ್ವರಿ ದೇವಾಲಯವನ್ನು ಮುಜರಾಯಿ ಇಲಾಖೆಗೆ ನೀಡಲು ಹಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಶಿವಮೊಗ್ಗ ಜಿಲ್ಲಾ ಆರ್ಯ ಈಡಿಗ ಸಂಘ ಮುಜರಾಯಿಗೆ ನೀಡಿದರೆ ಹೋರಾಟ ಮಾಡುವ ಎಚ್ಚರಿಕೆಯನ್ನು ನೀಡಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications