ಯಡಿಯೂರಪ್ಪ ಭೇಟಿಗೂ ಮೊದಲು ಕುಮಾರ್ ಬಂಗಾರಪ್ಪ ಮುನಿಸು!
ಶಿವಮೊಗ್ಗ, ಫೆಬ್ರವರಿ 28: ಮೂಗೂರು ಏತ ನೀರಾವರಿ ಯೋಜನೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಿರಲು ನಿರ್ಧರಿಸಿ ಸೊರಬ ಕ್ಷೇತ್ರದ ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ ಅಚ್ಚರಿ ಮೂಡಿಸಿದ್ದರು. ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ನೇತೃತ್ವದ ತಂಡ ಶಾಸಕರ ಮನೆಗೆ ಭೇಟಿ ನೀಡಿ ಮನವೊಲಿಸಿದರು.
ಬಿ. ವೈ. ರಾಘವೇಂದ್ರ, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಗುರುಮೂರ್ತಿ, ಬಿಜೆಪಿ ಜಿಲ್ಲಾಧ್ಯಕ್ಷ ಟಿ. ಡಿ. ಮೇಘರಾಜ್ ಅವರು ಶಾಸಕ ಕುಮಾರ್ ಬಂಗಾರಪ್ಪ ಅವರ ಮನೆಗೆ ಭಾನುವಾರ ಬೆಳಗ್ಗೆ ದೌಡಾಯಿಸಿದರು. ಅವರ ಮನವೊಲಿಸಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮಾಡಿದರು.
ಬಳಿಕ ಎಲ್ಲರೂ ಒಟ್ಟಿಗೆ ಮನೆಯಿಂದ ಹೊರಬಂದು, ಕಾರ್ಯಕ್ರಮದ ಸ್ಥಳಕ್ಕೆ ತೆರಳಿದರು. ಮಾಧ್ಯಮಗಳ ಜೊತೆ ಮಾತನಾಡಿದ ಬಿ. ವೈ. ರಾಘವೇಂದ್ರ, "ಯಾವುದೆ ಅಸಮಾಧಾನವಿಲ್ಲ. ಶಿವಮೊಗ್ಗದಲ್ಲಿ ನಡೆಯುವ ನಮ್ಮೊಲುಮೆ ಕಾರ್ಯಕ್ರಮಕ್ಕೆ ಶಾಸಕ ಕುಮಾರ್ ಬಂಗಾರಪ್ಪ ಅವರನ್ನು ಆಹ್ವಾನಿಸಲು ಮನೆಗೆ ಬಂದಿದ್ದೇವೆ" ಎಂದು ತಿಳಿಸಿದರು.

ಶಾಸಕರ ಅಸಮಾಧಾನ ಏಕೆ?: ಮೂಗೂರು ಏತ ನೀರಾವರಿ ಯೋಜನೆಯ ಕುರಿತ ಫ್ಲೆಕ್ಸ್ಗಳಲ್ಲಿ ಶಾಸಕ ಕುಮಾರ್ ಬಂಗಾರಪ್ಪ ಅವರ ಫೋಟೊ ಬಳಕೆ ಮಾಡಿಲ್ಲ ಎಂದು ಹೇಳಲಾಗಿದೆ. ಈ ನಡುವೆ ನೀರಾವರಿ ನಿಗಮದವರು ತಯಾರಿಸಿರುವ ಕಿರು ಚಿತ್ರದಲ್ಲಿಯೂ ಶಾಸಕರನ್ನು ಕಡೆಗಣಿಸಲಾಗಿದೆ. ಇದು ಅವರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ತಿಳಿದು ಬಂದಿದೆ.
ಸಿಎಂ ಭೇಟಿ ಮೊದಲು ಮುಸುಕಿನ ಗುದ್ದಾಟ; ಸೊರಬ ಬಿಜೆಪಿಯಲ್ಲಿಯಲ್ಲಿನ ಮೂಲ ಮತ್ತು ವಲಸಿಗರ ನಡುವಿನ ಮುಸುಕಿನ ಗುದ್ದಾಟದಿಂದಾಗಿಯೇ ಶಾಸಕರನ್ನು ಕಡೆಗಣಿಸಲಾಗಿದೆ ಎಂದು ಹೇಳಲಾಗುತ್ತಿದೆ. ಮೂಲ ಬಿಜೆಪಿಯವರು ಶಾಸಕ ಕುಮಾರ್ ಬಂಗಾರಪ್ಪ ಅವರನ್ನು ದೂರವಿಟ್ಟು ಫ್ಲೆಕ್ಸ್ ಪ್ರಿಂಟ್ ಮಾಡಿಸಿದ್ದಾರೆ ಎಂದು ಆರೋಪಿಸಲಾಗಿದೆ.
-
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral












Click it and Unblock the Notifications