ಸೊರಬ ಚುನಾವಣಾ ಫಲಿತಾಂಶ 2023; ಮಧು ಬಂಗಾರಪ್ಪ ಗೆಲುವು
ಶಿವಮೊಗ್ಗ, ಮೇ 13; ಶಿವಮೊಗ್ಗ ಜಿಲ್ಲೆಯ ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಸಹೋದರರ ಸವಾಲಿನಲ್ಲಿ ಕಾಂಗ್ರೆಸ್ನ ಮಧು ಬಂಗಾರಪ್ಪ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಕುಮಾರ್ ಬಂಗಾರಪ್ಪರನ್ನು ಸೋಲಿಸಿದ್ದಾರೆ.
ಬಿಜೆಪಿಯ ಕುಮಾರ್ ಬಂಗಾರಪ್ಪ 53794 ಮತಗಳನ್ನು ಪಡೆದಿದ್ದಾರೆ. ಮಧು ಬಂಗಾರಪ್ಪ 97932 ಮತಗಳನ್ನು ಪಡೆದಿದ್ದಾರೆ.
ಹಿಂದಿನ ಅಪ್ಡೇಟ್; ಶಿವಮೊಗ್ಗ ಜಿಲ್ಲೆಯ ಸೊರಬ ಕ್ಷೇತ್ರದಲ್ಲಿ ಕಾಂಗ್ರೆಸ್ನ ಮಧು ಬಂಗಾರಪ್ಪ ಭಾರೀ ಮುನ್ನಡೆ ಪಡೆದುಕೊಂಡಿದ್ದಾರೆ. 45,532 ಮತಗಳನ್ನು ಅವರು ಪಡೆದಿದ್ದು, ಬಿಜೆಪಿಯ ಕುಮಾರ್ ಬಂಗಾರಪ್ಪ 24,911 ಮತಗಳನ್ನು ಪಡೆದಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಪ್ರತಿ ಬಾರಿಯೂ ಗಮನ ಸೆಳೆಯುವ ಕ್ಷೇತ್ರ ಶಿವಮೊಗ್ಗ ಜಿಲ್ಲೆಯ ಸೊರಬ. ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಪುತ್ರರು ಎದುರಾಳಿಗಳು. ಹಾಲಿ ಶಾಸಕರು ಬಿಜೆಪಿಯ ಕುಮಾರ್ ಬಂಗಾರಪ್ಪ. ಎದುರಾಳಿ ಕಾಂಗ್ರೆಸ್ನ ಮಧು ಬಂಗಾರಪ್ಪ.

ಕಳೆದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಸೋಲು ಕಂಡಿದ್ದ ಮಧು ಬಂಗಾರಪ್ಪ ಈ ಬಾರಿ ಕಾಂಗ್ರೆಸ್ನಿಂದ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಪಕ್ಷದೊಳಗಿನ ಅಸಮಾಧಾನದ ಜೊತೆಗೆ ಸಹೋದರನ ವಿರುದ್ಧವೂ ಕುಮಾರ್ ಬಂಗಾರಪ್ಪ ಹೋರಾಟ ನಡೆಸಬೇಕಿದೆ.
ದಿ. ಎಸ್. ಬಂಗಾರಪ್ಪ ಇಬ್ಬರು ಪುತ್ರರು ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಪುತ್ರ ಡಾ. ಶಿವರಾಜ್ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಸಹ ಕಾಂಗ್ರೆಸ್ ಸೇರಿ ಮಧು ಬಂಗಾರಪ್ಪ ಬೆಂಬಲಕ್ಕೆ ನಿಂತಿದ್ದಾರೆ. ಸಹೋದರರ ನಡುವೆ ಜೆಡಿಎಸ್ನ ಬಸೂರು ಚಂದ್ರೇಗೌಡ ಅಭ್ಯರ್ಥಿ.
2004ರ ಚುನಾವಣೆಯಲ್ಲಿ ಮೊದಲ ಬಾರಿಗೆ ಕುಮಾರ್ ಬಂಗಾರಪ್ಪ (ಕಾಂಗ್ರೆಸ್), ಮಧು ಬಂಗಾರಪ್ಪ (ಬಿಜೆಪಿ) ಮುಖಾಮುಖಿಯಾದರು. 44,677 ಮತಗಳನ್ನು ಪಡೆದು ಕುಮಾರ್ ಬಂಗಾರಪ್ಪ ಗೆದ್ದರು. 32,748 ಮತಗಳನ್ನು ಪಡೆದು ಬಿಜೆಪಿಯ ಮಧು ಬಂಗಾರಪ್ಪ ಸೋಲು ಕಂಡರು.

2008ರಲ್ಲಿ ಬಿಜೆಪಿಯ ಹರತಾಳು ಹಾಲಪ್ಪ ಸಹೋದರರಿಗೆ ಸೋಲಿನ ರುಚಿ ತೋರಿಸಿದ್ದರು. ಕಾಂಗ್ರೆಸ್ನ ಕುಮಾರ್ ಬಂಗಾರಪ್ಪ 32,499 ಮತ ಪಡೆದು ಸೋಲು ಕಂಡರು. ಇನ್ನು ಸಮಾಜವಾದಿ ಪಕ್ಷದಿಂದ ಕಣಕ್ಕಿಳಿದಿದ್ದ ಮಧು ಬಂಗಾರಪ್ಪ 31,135 ಮತಗಳನ್ನು ಪಡೆದಿದ್ದರು.
ಸೊರಬದ ಚುನಾವಣಾ ಚಿತ್ರಣ 2013ರಲ್ಲಿ ಬದಲಾಯಿತು. ಮಧು ಬಂಗಾರಪ್ಪ ಜೆಡಿಎಸ್ನಿಂದ ಕಣಕ್ಕಿಳಿದು 58,541 ಮತಗಳನ್ನು ಪಡೆದು ಗೆದ್ದರು. ಕೆಜೆಪಿ ಅಭ್ಯರ್ಥಿಯಾಗಿದ್ದ ಹರತಾಳು ಹಾಲಪ್ಪ 37,316 ಮತ ಪಡೆದು ಸೋತರು. ಕಾಂಗ್ರೆಸ್ನ ಕುಮಾರ್ ಬಂಗಾರಪ್ಪ 33,176 ಮತಗಳನ್ನು ಪಡೆದು 3ನೇ ಸ್ಥಾನ ಪಡೆದರು.
2018ರ ಚುನಾವಣೆಯ ಹೊತ್ತಿಗೆ ಹರತಾಳು ಹಾಲಪ್ಪ ಸಾಗರಕ್ಕೆ ವಲಸೆ ಹೋದರು. ಅಲ್ಲಿ ಬಿಜೆಪಿ ಟಿಕೆಟ್ ಪಡೆದು ಗೆದ್ದರು. ಕಾಂಗ್ರೆಸ್ನಲ್ಲಿದ್ದ ಕುಮಾರ್ ಬಂಗಾರಪ್ಪ ಬಿಜೆಪಿ ಸೇರಿದರು. ಸೊರಬದಲ್ಲಿ ಕಣಕ್ಕಿಳಿದು 72,091 ಮತ ಪಡೆದು ಜೆಡಿಎಸ್ನ ಮಧು ಬಂಗಾರಪ್ಪ (58,805) ಸೋಲಿಸಿದರು.
ಈ ಬಾರಿ ಮಧು ಬಂಗಾರಪ್ಪ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿ ಕಣಕ್ಕಿಳಿದಿದ್ದಾರೆ. ಕುಮಾರ್ ಬಂಗಾರಪ್ಪ ಬಿಜೆಪಿ ಟಿಕೆಟ್ನಲ್ಲಿಯೇ ಸ್ಪರ್ಧಿಸಿದ್ದಾರೆ. ಎಸ್. ಬಂಗಾರಪ್ಪ ಪುತ್ರರಲ್ಲಿ ಯಾರಿಗೆ ಜಯ?.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications