ಯಶವಂತಪುರ - ಶಿವಮೊಗ್ಗ- ತಾಳಗುಪ್ಪ ಮಾರ್ಗದಲ್ಲಿ ವಿಶೇಷ ಎಕ್ಸಪ್ರೆಸ್ ರೈಲು ಸೇವೆ: ಸಮಯ, ದಿನಾಂಕಗಳ ವಿವರ ತಿಳಿಯಿರಿ
Indian Railways: ಭಾರತೀಯ ರೈಲ್ವೆಯು ಪ್ರಯಾಣಿಕರಿಗೆ ಅನುಕೂಲಕ್ಕೆ ತಕ್ಕಂತೆ ಹಬ್ಬ-ಹರಿದಿನಗಳು, ವಿಶೇಷ ಸಂದರ್ಭಗಳಲ್ಲಿ ವಿಶೇಷ ರೈಲು ಸೇವೆಯನ್ನು ಕಲ್ಪಿಸುತ್ತಾ ಬಂದಿದೆ. ಇದೀಗ ಫೆಬ್ರವರಿ 3ರಿಂದ ಯಶವಂತಪುರ - ಶಿವಮೊಗ್ಗ- ತಾಳಗುಪ್ಪ ಮಾರ್ಗದಲ್ಲಿ ವಿಶೇಷ ಎಕ್ಸಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಹಾಗಾದ್ರೆ, ಸಮಯ, ದಿನಾಂಕಗಳ ವಿವರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಯಶವಂತಪುರ-ತಾಳಗುಪ್ಪ ನಡುವೆ ಮಾರಿಕಾಂಬಾದೇವಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಣೆ ನಿರ್ವಹಿಸಲು ರೈಲ್ವೆ ಇಲಾಖೆ ಫೆಬ್ರವರಿ 3ರಿಂದ 10ರವರೆಗೆ 5 ಟ್ರಿಪ್ ವಿಶೇಷ ಎಕ್ಸಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಈ ರೈಲುಗಳು ವಿಶೇಷ ದಿನಗಳಲ್ಲಿ ಸಂಚರಿಸಿ ಭಕ್ತರಿಗೆ ಮತ್ತು ಪ್ರಯಾಣಿಕರಿಗೆ ಅನುಕೂಲ ಒದಗಿಸಲಿವೆ.

ಸಾಗರ ತಾಲ್ಲೂಕಿನಲ್ಲಿ ನಡೆಯಲಿರುವ ಮಾರಿಕಾಂಬಾದೇವಿ ಜಾತ್ರಾ ಮಹೋತ್ಸವದ ಹಿನ್ನೆಲೆ ಪ್ರಯಾಣಿಕರ ದಟ್ಟಣೆ ನಿಯಂತ್ರಿಸಲು ಇಲಾಖೆ ಈ ಕ್ರಮ ತೆಗೆದುಕೊಂಡಿದೆ. ರೈಲು ಸಂಖ್ಯೆ 06585 / 06586 ಯಶವಂತಪುರ - ತಾಳಗುಪ್ಪ - ಯಶವಂತಪುರ ವಿಶೇಷ ಎಕ್ಸಪ್ರೆಸ್ 4 ಟ್ರಿಪ್ಗಳು ಸಂಚಾರ ನಡೆಸಲಿವೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ವಿಶೇಷ ರೈಲುಗಳ ಸಮಯ, ದಿನಾಂಕಗಳ ವಿವರ
* ರೈಲು ಸಂಖ್ಯೆ 06585 - ಯಶವಂತಪುರ - ತಾಳಗುಪ್ಪ ವಿಶೇಷ ಎಕ್ಸಪ್ರೆಸ್ ಈ ರೈಲು ಫೆಬ್ರವರಿ 3, 5, 8 ಮತ್ತು 10ರಂದು ಸಂಚರಿಸಲಿದೆ. ಈ ರೈಲು ಯಶವಂತಪುರದಿಂದ ರಾತ್ರಿ 10:45ಕ್ಕೆ ಹೊರಟು, ಮರುದಿನ ಬೆಳಗ್ಗೆ 05:05ಕ್ಕೆ ತಾಳಗುಪ್ಪಕ್ಕೆ ತಲುಪಲಿದೆ.
* ರೈಲು ಸಂಖ್ಯೆ 06586 ತಾಳಗುಪ್ಪ - ಯಶವಂತಪುರ ವಿಶೇಷ ಎಕ್ಸಪ್ರೆಸ್ ರೈಲು ಫೆಬ್ರವರಿ 4, 6, 9 ಮತ್ತು 11ರಂದು ಸಂಚಾರ ಮಾಡಲಿದೆ. ಈ ರೈಲು ತಾಳಗುಪ್ಪದಿಂದ ಬೆಳಗ್ಗೆ 09:30ಕ್ಕೆ ಹೊರಟು, ಸಂಜೆ 5:15ಕ್ಕೆ ಯಶವಂತಪುರಕ್ಕೆ ತಲುಪಲಿದೆ.
ಇನ್ನೂ 07 ಸ್ಲೀಪರ್ ಕ್ಲಾಸ್ ಕೋಚ್ಗಳು, 06 ಸಾಮಾನ್ಯ ದ್ವಿತೀಯ ದರ್ಜೆ ಕೋಚ್ಗಳು ಮತ್ತು 02 ಎಸ್ಎಲ್ಆರ್/ಡಿ ಕೋಚ್ಗಳು ರೈಲಿನಲ್ಲಿ ಇರಲಿವೆ.
* ರೈಲು ಸಂಖ್ಯೆ 06587 ಯಶವಂತಪುರ - ತಾಳಗುಪ್ಪ ವಿಶೇಷ ಎಕ್ಸಪ್ರೆಸ್ ಈ ರೈಲು ಫೆಬ್ರವರಿ 6 ರಂದು ಸಂಚಾರ ಮಾಡಲಿದೆ. ಈ ರೈಲು ಯಶವಂತಪುರದಿಂದ ರಾತ್ರಿ 10:45ಕ್ಕೆ ಹೊರಟು, ಮರುದಿನ ಬೆಳಿಗ್ಗೆ 05:05ಕ್ಕೆ ತಾಳಗುಪ್ಪಕ್ಕೆ ತಲುಪಲಿದೆ.
* ರೈಲು ಸಂಖ್ಯೆ 06588 ತಾಳಗುಪ್ಪ - ಯಶವಂತಪುರ ವಿಶೇಷ ಎಕ್ಸಪ್ರೆಸ್ ಫೆಬ್ರವರಿ 7ರಂದು ಸಂಚಾರ ಮಾಡಲಿದೆ. ಈ ರೈಲು ತಾಳಗುಪ್ಪದಿಂದ ಬೆಳಗ್ಗೆ 09:30ಕ್ಕೆ ಹೊರಟು, ಸಂಜೆ 5:15ಕ್ಕೆ ಯಶವಂತಪುರಕ್ಕೆ ತಲುಪಲಿದೆ. 01 ಎಸಿ ಟು ಟಯರ್ ಕೋಚ್, 02 ಎಸಿ ತ್ರಿ ಟಯರ್ ಕೋಚ್ಗಳು, 10 ಸ್ಲೀಪರ್ ಕ್ಲಾಸ್ ಕೋಚ್ಗಳು, 05 ಸಾಮಾನ್ಯ ದ್ವಿತೀಯ ದರ್ಜೆ ಕೋಚ್ಗಳು ಮತ್ತು 02 ಎಸ್ಎಲ್ಆರ್/ಡಿ ಕೋಚ್ಗಳು ಇರಲಿವೆ.
ನಿಲುಗಡೆಗಳ ವಿವರ: ಈ ರೈಲುಗಳು ಎರಡೂ ದಿಕ್ಕುಗಳಲ್ಲಿ ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಕೊನಗವಳ್ಳಿ ಹಾಲ್ಟ್, ಹಾರನಹಳ್ಳಿ, ಕುಂಸಿ, ಅರಸಾಳು, ಕೆಂಚನಾಲ ಹಾಲ್ಟ್, ಆನಂದಪುರಂ, ಅಡ್ಡೇರಿ ಮತ್ತು ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆ ಆಗಲಿವೆ.
ವಿಶೇಷ ಎಕ್ಸಪ್ರೆಸ್ ರೈಲುಗಳನ್ನು ಹಬ್ಬ-ಹರಿದಿನಗಳು, ಜಾತ್ರೆಗಳ ಸಂದರ್ಭದಲ್ಲಿ ಹೆಚ್ಚಿದ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು ಓಡಿಸಲಾಗುತ್ತದೆ. ಆರಾಮದಾಯಕ ಪ್ರಯಾಣ, ಸುರಕ್ಷಿತ ಪ್ರಯಾಣ ಹಿನ್ನೆಲೆ ಬಹುತೇಕ ಮಂದಿ ರೈಲಿನಲ್ಲಿ ಪ್ರಯಾಣ ಮಾಡಲಿ ಬಯಸುತ್ತಾರೆ. ಆದ್ದರಿಂದ ವಿಶೇಷ ಸಂದರ್ಭಗಳಲ್ಲಿ ಇಂತಹ ಮಹತ್ವದ ನಿರ್ಧಾರವನ್ನು ರೈಲ್ವೆ ಇಲಾಖೆ ತೆಗೆದುಕೊಳ್ಳುತ್ತಾ ಬಂದಿದೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
ಭಾರತದ ಏಕೈಕ ರೈಲು ಸಂಪರ್ಕವಿಲ್ಲದ ರಾಜ್ಯ ಸಿಕ್ಕಿಂ: ಕಾರಣ ಮತ್ತು ಪ್ರಯಾಣ ಮಾರ್ಗಗಳ ವಿವರ -
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications