ಜಾತಿ ವ್ಯವಸ್ಥೆಯ ವಿರುದ್ಧ ಮತ್ತೆ ಸಮರ ಆರಂಭಿಸಿ: ಸಾವರ್ಕರ್ ಮೊಮ್ಮಗ
ಶಿವಮೊಗ್ಗ, ಅಕ್ಟೋಬರ್ 23: ಹಿಂದುತ್ವದ ಐಕಾನ್ ವಿ ಡಿ ಸಾವರ್ಕರ್ ಅವರ ಮೊಮ್ಮಗ ಸಾತ್ಯಕಿ ಸಾವರ್ಕರ್ ಅವರು ತಮ್ಮ ತಾತ ಪ್ರಾರಂಭಿಸಿದ ಜಾತಿ ವ್ಯವಸ್ಥೆಯ ವಿರುದ್ಧ ಸಮರವನ್ನು ಪುನಃ ಪ್ರಾರಂಭಿಸುವ ಅಗತ್ಯವಿದೆ ಎಂದು ಹೇಳಿದರು.
ಇಲ್ಲಿ ಆಯೋಜಿಸಿದ್ದ 'ಸಾವರ್ಕರ್ ಸಾಮ್ರಾಜ್ಯ' ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಅವರು, ನನ್ನ ತಾತ ಸಾವರ್ಕರ್ ಅವರು ದೇಶದಲ್ಲಿ ಜಾತಿ ಪದ್ಧತಿಯನ್ನು ತೊಡೆದುಹಾಕಲು ಬಯಸಿದ್ದರು. ಅವರು ಸಾಯುವವರೆಗೂ ಅದರ ವಿರುದ್ಧ ಹೋರಾಡಿದರು. ಸಾವರ್ಕರ್ ಅವರು ಜಾತಿ ಭೇದವಿಲ್ಲದೆ ಎಲ್ಲ ಹಿಂದೂಗಳನ್ನು ಒಗ್ಗೂಡಿಸಲು ಬಯಸಿದ್ದರು. ಜಾತಿ ವ್ಯವಸ್ಥೆಯ ವಿರುದ್ಧ ಸಮರವನ್ನು ಪುನರಾರಂಭಿಸಲು ಸಮಯ ಪಕ್ವವಾಗಿದೆ ಎಂದರು.
ಸ್ವಾತಂತ್ರ್ಯ ದಿನದಂದು ಶಿವಮೊಗ್ಗದಲ್ಲಿ ನಡೆದ ಘಟನೆಯನ್ನು ಉಲ್ಲೇಖಿಸಿದ ಅವರು, ''ಶಿವಮೊಗ್ಗ ಹಿಂದೂಗಳ ಶಕ್ತಿಯ ಕೇಂದ್ರವಾಗಿದೆ ಎಂದು ತಿಳಿಯದೆ ಕೆಲವರು ತಮ್ಮ ಬ್ಯಾನರ್ ಹಾಕುವುದನ್ನು ವಿರೋಧಿಸಿದರು. ಇದರ ಪರಿಣಾಮವಾಗಿ ಸಾವರ್ಕರ್ ಅವರ ಆದರ್ಶಗಳು ಕರ್ನಾಟಕದಾದ್ಯಂತ ಹರಡಿತು. ಹಿಂದೂಗಳನ್ನು ಒಗ್ಗೂಡಿಸುವುದು ಸಾವರ್ಕರ್ ಅವರ ಕನಸಾಗಿತ್ತು ಮತ್ತು ದೇಶವಿರೋಧಿ ಶಕ್ತಿಗಳು ಇನ್ನೂ ನಮ್ಮ ಸುತ್ತಲೂ ಇವೆ. ಅಂತಹ ಶಕ್ತಿಗಳ ವಿರುದ್ಧ ಹೋರಾಡಲು, ಸಾವರ್ಕರ್ ಅವರ ಹಿಂದುತ್ವದ ಮಂತ್ರವನ್ನು ಜನರಲ್ಲಿ ಹರಡಬೇಕು'' ಎಂದು ಸಾತ್ಯಕಿ ಹೇಳಿದರು.

ಕರ್ನಾಟಕ ದೇವಸ್ಥಾನ ಸಂವರ್ಧನ ಸಂಸ್ಧೆ ಸಂಯೋಜಕ ಮನೋಹರ ಮಾತಾಡ್ ಮಾತನಾಡಿ, 1857ರ ಭಾರತೀಯ ಬಂಡಾಯವನ್ನು ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ಎಂದು ಕರೆದು ಭಾರತೀಯರಲ್ಲಿ ಆತ್ಮಸ್ಥೈರ್ಯ ತುಂಬಿದವರು ಸಾವರ್ಕರ್. ಸಾವರ್ಕರ್ ಅಂಡಮಾನ್ ಜೈಲಿನಲ್ಲಿದ್ದ ದಿನಗಳನ್ನು ಉಲ್ಲೇಖಿಸಿದ ಅವರು, ಬ್ರಿಟಿಷರು ಜೈಲಿನ ಕೈದಿಗಳನ್ನು ಗೋಮಾಂಸ ತಿನ್ನುವಂತೆ ಒತ್ತಾಯಿಸುವ ಮೂಲಕ ಕ್ರಿಶ್ಚಿಯನ್ ಧರ್ಮಕ್ಕೆ ಪರಿವರ್ತಿಸುತ್ತಿದ್ದಾರೆ. ಆದರೆ ಸಾವರ್ಕರ್ ಅವರಿಗೆ ಗಂಗಾಜಲ ಮತ್ತು ತುಳಸಿಯನ್ನು ಅರ್ಪಿಸುವ ಮೂಲಕ ಅವರನ್ನು ಹಿಂದೂಗಳಾಗಿ ಪರಿವರ್ತಿಸಿದರು ಎಂದರು.
''ಅಲ್ಲದೆ ಎಲ್ಲ ಜಾತಿಯ ಜನರಿಗಾಗಿ ಪತಿತ ಪಾವನ ಮಂದಿರ ಆರಂಭಿಸಿದರು. ಅಲ್ಲಿ ಇಂದಿಗೂ ದಲಿತರು ಅರ್ಚಕರಾಗಿ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಸೇರುವ ಪ್ರಸ್ತಾಪವನ್ನು ಸಾವರ್ಕರ್ ನಯವಾಗಿ ತಿರಸ್ಕರಿಸಿದ್ದರು ಮತ್ತು 1965 ರಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಕಾಂಗ್ರೆಸ್ ಸೇರಿದರೆ ದೇಶದ್ರೋಹಿಯಾಗುತ್ತಿದ್ದರು'' ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಇ.ಕಾಂತೇಶ್ ಮಾತನಾಡಿದರು. ಈ ಸಂದರ್ಭದಲ್ಲಿ ವಿ ಡಿ ಸಾವರ್ಕರ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಲಾಯಿತು. ಈಶ್ವರಪ್ಪ ಮತ್ತು ಸಾತ್ಯಕಿ ಪುಷ್ಪನಮನ ಸಲ್ಲಿಸಿದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications