ಭದ್ರಾವತಿ: ಹಿಜಾಬ್ ವಿರುದ್ಧ ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳು
ಶಿವಮೊಗ್ಗ, ಫೆಬ್ರವರಿ 1: ಉಡುಪಿ ಕಾಲೇಜಿನ ಹಿಜಾಬ್ ವಿವಾದ ಜೀವಂತವಾಗಿರುವಾಗಲೇ, ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಪ್ರತಿಷ್ಠಿತ ಕಾಲೇಜಿನಲ್ಲೂ ಇದೇ ರೀತಿಯ ವಿವಾದ ಭುಗಿಲೆದ್ದಿದೆ. ಸಮವಸ್ತ್ರವಿದ್ದರೂ ಕೆಲವರಿಗೊಂದು, ಉಳಿದವರಿಗೊಂದು ನೀತಿ ಅನುಸರಿಸದಂತೆ ಆಗ್ರಹಿಸಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದರು.
ಭದ್ರಾವತಿ ನ್ಯೂ ಟೌನ್ನ ಸರ್.ಎಂ. ವಿಶ್ವೇಶ್ವರಯ್ಯ ಕಾಲೇಜಿನಲ್ಲಿ ಮಂಗಳವಾರ ಹಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದರು. ಎಲ್ಲಾ ವಿದ್ಯಾರ್ಥಿಗಳಿಗೂ ಸಮವಸ್ತ್ರ ಕಡ್ಡಾಯಗೊಳಿಸಬೇಕು ಎಂದು ವಿದ್ಯಾರ್ಥಿಗಳು, ಹಿಂದೂ ಸಂಘಟನೆಗಳ ಕಾರ್ಯಕರ್ತರು ಆಗ್ರಹಿಸಿದರು. ಇದರಿಂದ ಕೆಲವು ಹೊತ್ತು ಕಾಲೇಜಿನಲ್ಲಿ ಬಿಗುವಿನ ವಾತಾವರಣವಿತ್ತು.
ತರಗತಿಗೆ ಕೇಸರಿ ಶಾಲು
ಸರ್.ಎಂ.ವಿಶ್ವೇಶ್ವರಯ್ಯ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಸಮವಸ್ತ್ರ ಕಡ್ಡಾಯವಿದೆ. ಹಾಗಿದ್ದೂ ಮುಸ್ಲಿಂ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿನಿಯರು ತರಗತಿಗಳಲ್ಲೂ ಹಿಜಾಬ್ ಧರಿಸುತ್ತಾರೆ. ಇದು ಸರಿಯಾದ ಕ್ರಮವಲ್ಲ, ಆದ್ದರಿಂದ ತಾವು ಕೇಸರಿ ಶಾಲು ಧರಿಸಿ ತರಗತಿಗೆ ಬರುತ್ತೇವೆ ಎಂದು ಕೆಲವು ವಿದ್ಯಾರ್ಥಿಗಳು ತಿಳಿಸಿದ್ದರು. ಇಂದು ಹಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ, ಕಾಲೇಜಿಗೆ ಬಂದಿದ್ದರು. ಇನ್ಮುಂದೆ ಕೇಸರಿ ಶಾಲು ಧರಿಸಿಕೊಂಡೇ ತರಗತಿಗೆ ಬರುವುದಾಗಿ ಕಾಲೇಜು ಆಡಳಿತ ಮಂಡಳಿಗೆ ತಿಳಿಸಿದರು.

ಕ್ರಮ ಕೈಗೊಂಡ ಆಡಳಿತ ಮಂಡಳಿ
ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳ ಜೊತೆಗೆ ಕಾಲೇಜು ಆಡಳಿತ ಮಂಡಳಿ ಚರ್ಚೆ ನಡೆಸಿತು. ವಿವಿಧ ಸಂಘಟನೆಗಳ ಪ್ರಮುಖರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಎಲ್ಲಾ ವಿದ್ಯಾರ್ಥಿಗಳಿಗು ಸಮವಸ್ತ್ರ ಕಡ್ಡಾಯಗೊಳಿಸಲಾಗಿದೆ. ತರಗತಿ ಪ್ರವೇಶಿಸುವಾಗ ಸಮವಸ್ತ್ರದಲ್ಲೇ ಇರಬೇಕು ಎಂದು ಪಟ್ಟು ಹಿಡಿದರು.
ಘಟನೆ ಕುರಿತು ಮಾತನಾಡಿದ ಸರ್.ಎಂ. ವಿಶ್ವೇಶ್ವರಯ್ಯ ಕಲಾ ಮತ್ತು ವಾಣಿಜ್ಯ ಕಾಲೇಜು ಪ್ರಾಂಶುಪಾಲ ಡಾ.ಉಮಾಶಂಕರ್, "ಕಾಲೇಜಿನಲ್ಲಿ ಸಮವಸ್ತ್ರ ಕಡ್ಡಾಯವಿದೆ. ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರು, ಕಾಲೇಜಿನ ವೇಯ್ಟಿಂಗ್ ರೂಂನಲ್ಲಿ ಅದನ್ನು ತೆಗೆದು, ಸಮವಸ್ತ್ರದಲ್ಲೇ ತರಗತಿಗೆ ಬರಬೇಕು. ಗುರುವಾರದಿಂದ ಈ ನಿಯಮವನ್ನು ಕಡ್ಡಾಯಗೊಳಿಸಲಾಗಿದೆ,'' ಎಂದು ತಿಳಿಸಿದರು.

ಕಾಲೇಜಿನಲ್ಲಿ ಬಿಗುವಿನ ವಾತವರಣ
ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಇವತ್ತು ಕಾಲೇಜಿಗೆ ಭೇಟಿ ನೀಡಿದ್ದರು. ಈ ಸಂದರ್ಭ ಕೆಲ ಹೊತ್ತು ಕಾಲೇಜಿನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ನಿಯಂತ್ರಿಸಿದರು. ಬಳಿಕ ಕಾಲೇಜು ಆಡಳಿತ ಮಂಡಳಿ ಸಭೆ ನಡೆಸಿ, ನಿರ್ಣಯ ಪ್ರಕಟಿಸಿದ ಬಳಿಕ ಪರಿಸ್ಥಿತಿ ಶಾಂತವಾಯಿತು.
'ದಿಢೀರ್ ವಿವಾದವಲ್ಲ'
ಇನ್ನು ಹಿಜಾಬ್ ವಿವಾದ ದಿಢೀರ್ ಆರಂಭವಾಗಿದ್ದಲ್ಲ. ''ಕಳೆದ ವಾರ ವಿದ್ಯಾರ್ಥಿನಿಯೊಬ್ಬಳ ಜೊತೆಗೆ ವಿದ್ಯಾರ್ಥಿಯೊಬ್ಬ ಮಾತನಾಡುತ್ತಿದ್ದಾಗ ಗಲಾಟೆಯಾಗಿತ್ತು. ವಿದ್ಯಾರ್ಥಿನಿಯ ಸಮುದಾಯಕ್ಕೆ ಸೇರಿದ ಕೆಲವು ಯುವಕರು ಆಕೆಯೊಂದಿಗೆ ಮಾತನಾಡದಂತೆ ವಿದ್ಯಾರ್ಥಿಗೆ ಎಚ್ಚರಿಸಿದ್ದರು. ಇದರಿಂದ ವಿವಾದ ಹುಟ್ಟಿಕೊಂಡಿರುವ ಸಾಧ್ಯತೆ ಇದೆ,'' ಎಂದು ಪ್ರಾಂಶುಪಾಲ ಡಾ.ಉಮಾಶಂಕರ್ ತಿಳಿಸಿದ್ದಾರೆ.
Recommended Video
ಸರ್.ಎಂ.ವಿಶ್ವೇಶ್ವರಯ್ಯ ಕಾಲೇಜು, ಭದ್ರಾವತಿಯ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದು. ವಿವಿಧೆಡೆಯ ವಿದ್ಯಾರ್ಥಿಗಳು ಇಲ್ಲಿ ವಿದ್ಯಭ್ಯಾಸ ಮಾಡುತ್ತಿದ್ದಾರೆ. ಮುಸ್ಲಿಂ ಸಮುದಾಯಕ್ಕೆ ಸೇರಿದ ಸುಮಾರು 250 ವಿದ್ಯಾರ್ಥಿನಿಯರು ಈ ಕಾಲೇಜಿನಲ್ಲಿ ಓದುತ್ತಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications