ಶಿವಮೊಗ್ಗ-ರಾಣೇಬೆನ್ನೂರು ರೈಲು ಯೋಜನೆ ಅನುಷ್ಠಾನ: ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ ಭರವಸೆ
ಶಿವಮೊಗ್ಗ, ಆಗಸ್ಟ್ 08: ನಗರ ರೈಲು ನಿಲ್ದಾಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಲಿಫ್ಟ್ ಹಾಗೂ ಅರಸಾಳು ರೈಲು ನಿಲ್ದಾಣದಲ್ಲಿನ ಮಾಲ್ಗುಡಿ ಮ್ಯೂಸಿಯಂ ಅನ್ನು ವರ್ಚುವಲ್ ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಉದ್ಘಾಟನೆ ಮಾಡಲಾಯಿತು.
ಪೆಸಿಟ್ ಕಾಲೇಜಿನಲ್ಲಿ ನಡೆದ ವರ್ಚುವಲ್ ವಿಡಿಯೋ ಕಾನ್ಫರೆನ್ಸ್ ನಲ್ಲಿ ತಮ್ಮ ಬೆಳಗಾವಿಯ ಕಚೇರಿಯಿಂದಲೇ ರೈಲ್ವೆ ಸಚಿವ ಸುರೇಶ್ ಅಂಗಡಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, "ಶಿವಮೊಗ್ಗ ಜನತೆಯ ಆಶೋತ್ತರಕ್ಕೆ ಅನುಗುಣವಾಗಿ ನಿರಂತರವಾಗಿ ಶ್ರಮಿಸುತ್ತಿರುವ ಸಂಸದ ಬಿ.ವೈ. ರಾಘವೇಂದ್ರ ಅವರ ಪ್ರಯತ್ನಗಳು ಪ್ರಶಂಸನೀಯವಾಗಿದೆ" ಎಂದರು.
ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗ ನಿರ್ಮಾಣದ ವೆಚ್ಚದಲ್ಲಿ ಶೇ.50ರಷ್ಟು ಹಣ ಹಾಗೂ ಉಚಿತ ಜಾಗವನ್ನು ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಹೇಳಿದ್ದಾರೆ. ಇದು ರೈಲ್ವೆ ಇಲಾಖೆಗೆ ಯೋಜನೆಯನ್ನು ಶೀಘ್ರ ಆರಂಭಿಸಲು ಸಹಕಾರಿಯಾಗಿದೆ ಎಂದರು.
ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಮಾರ್ಗದ ಯೋಜನೆ ಮುಂದಿನ ಆಯವ್ಯಯದಲ್ಲಿ ಘೋಷಣೆಯಾಗಲಿದ್ದು, ಈ ಕುರಿತಂತೆ ಎಲ್ಲ ಪ್ರಕ್ರಿಯೆಗಳು ನಡೆದಿವೆ. ಬೆಳಗಾವಿ-ಧಾರವಾಡ ಮತ್ತು ಶಿವಮೊಗ್ಗ-ರಾಣೇಬೆನ್ನೂರು ಯೋಜನೆಗಳನ್ನು ಮುಂದಿನ ರೈಲ್ವೆ ಬಜೆಟ್ ನಲ್ಲಿ ಅಳವಡಿಸಿಕೊಂಡು ಆದಷ್ಟು ಬೇಗನೇ ಕಾಮಗಾರಿ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಶಿವಮೊಗ್ಗಕ್ಕೆ ಇನ್ನೊಂದು ಬ್ರಿಡ್ಜ್, ಕೋಚಿಂಗ್ ಡಿಪೋ, ಆನಂದಪುರ, ಸಾಗರ ಹಾಗೂ ತಾಳಗುಪ್ಪ ನಿಲ್ದಾಣಗಳಲ್ಲಿನ ಪ್ಲಾಟ್ ಫಾರಂ ವಿಸ್ತರಣೆ ಸೇರಿದಂತೆ ಹಲವು ಬೇಡಿಕೆಗಳನ್ನು ಸಂಸದರು ಇರಿಸಿದ್ದಾರೆ. ಇವುಗಳ ಅನುಮೋದನೆಗೆ ಶೀಘ್ರ ಕ್ರಮ ಕೈಗೊಳ್ಳುತ್ತೇನೆ ಎಂದರು.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications