ಪಿಂಚಣಿಗಾಗಿ ಕಾದು ಸುಸ್ತಾಗಿ ಬಿದ್ದಿದ್ದ ವೃದ್ಧೆ ಮನೆಗೆ ತೆರಳಿ ಮಂಜೂರಾತಿ ಪತ್ರ ನೀಡಿದ ತಹಶೀಲ್ದಾರ್
ಶಿವಮೊಗ್ಗ, ಜೂನ್ 21: ಸಾಮಾಜಿಕ ಭದ್ರತಾ ಪಿಂಚಣಿ ಪಡೆಯಲು ಗ್ರಾಮ ಲೆಕ್ಕಾಧಿಕಾರಿ ಕಚೇರಿಗೆ ಆಗಮಿಸಿದ್ದ ಗಂಟೆಗಟ್ಟಲೇ ಕುಳಿತು ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದ ಹೊಸನಗರ ತಾಲೂಕು ಹೆಬ್ಬಿಗೆ ಗ್ರಾಮದ ಸಾಧಮ್ಮ ಅವರ ಮನೆಗೆ ಸ್ವತಃ ತೆರಳಿದ ತಹಶೀಲ್ದಾರ್ ವಿ.ಎಸ್.ರಾಜೀವ್ ಪಿಂಚಣಿಯ ಮಂಜೂರಾತಿ ಪತ್ರವನ್ನು ಹಸ್ತಾಂತರಿಸಿದ್ದಾರೆ.
ಶುಕ್ರವಾರ ವೃದ್ಧೆ ಸಾದಮ್ಮ ಬೆಳಗ್ಗೆ 9.30ಕ್ಕೆ ಗ್ರಾಮ ಲೆಕ್ಕಾಧಿಕಾರಿ ಕಚೇರಿಗೆ ಆಗಮಿಸಿದ್ದರು. ಮಧ್ಯಾಹ್ನವಾದರೂ ಗ್ರಾಮ ಲೆಕ್ಕಿಗ ಮಂಜಪ್ಪ ಕಚೇರಿಗೆ ಆಗಮಿಸಿರಲಿಲ್ಲ. ಕಾದು ಕಾದು ಸುಸ್ತಾಗಿದ್ದ ವೃದ್ಧೆ ಸಾಧಮ್ಮ ಸುಸ್ತಾಗಿ ಕುಸಿದು ಬಿದ್ದಿದ್ದರು. ತಕ್ಷಣ ಸ್ಥಳೀಯರು ಅಜ್ಜಿಯನ್ನು ಉಪಚರಿಸಿ ಅವರ ಪರಿಸ್ಥಿತಿ ಕಂಡು ಮರುಕ ವ್ಯಕ್ತಪಡಿಸಿದ್ದರು. ಗ್ರಾಮ ಲೆಕ್ಕಾಧಿಕಾರಿ ನಡೆಗೆ ಆಕ್ರೋಶವನ್ನು ವ್ಯಕ್ತಪಡಿಸಿದ್ದರು.
ಈ ವಿಡಿಯೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ವೃದ್ಧೆ ಸಾದಮ್ಮ ಮನೆಗೆ ಪಿಂಚಣಿಪತ್ರವನ್ನು ತಲುಪಿಸುವಂತೆ ಸೂಚನೆ ನೀಡಿದ್ದರು. ಡಿಸಿ ಸೂಚನೆಯಂತೆ ಮಂಗಳವಾರ ತಹಶೀಲ್ದಾರ್ ವಿ.ಎಸ್.ರಾಜೀವ್ ಫಲಾನುಭವಿಯ ಮನೆಗೆ ತೆರಳಿದ ಪಿಂಚಣಿ ಮಂಜೂರಾತಿ ಪತ್ರವನ್ನು ಹಸ್ತಾಂತರಿಸಿ ಆರೋಗ್ಯ ವಿಚಾರಿಸಿದ್ಧಾರೆ.

ವಿಳಂಬ ಮಾಡಿದರೆ ಕ್ರಮ
ಸಾಮಾಜಿಕ ಭದ್ರತಾ ಪಿಂಚಣಿ ಸೇರಿದಂತೆ ಯಾವುದೇ ಸೌಲಭ್ಯಗಳನ್ನು ಪಡೆಯಲು ಕಚೇರಿಗಳಿಗೆ ಆಗಮಿಸುವ ಸಾರ್ವಜನಿಕರಿಗೆ ತಕ್ಷಣ ಸ್ಪಂದಿಸಬೇಕು. ಕರ್ತವ್ಯ ನಿರ್ವಹಣೆಯಲ್ಲಿ ವಿಳಂಬ ಮಾಡುವವರ ವಿರುದ್ಧ ಕ್ರಮವನ್ನು ಜರುಗಿಸಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಸಂಬಂಧಪಟ್ಟ ನಿಟ್ಟೂರು ಗ್ರಾಮ ಲೆಕ್ಕಾಧಿಕಾರಿಗೆ ಈಗಾಗಲೇ ನೊಟೀಸ್ ಜಾರಿಗೊಳಿಸಲಾಗಿದ್ದು, ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ ಮಾಹಿತಿ ನೀಡಿದ್ದಾರೆ.
ನೊಟೀಸ್ನಲ್ಲಿ ಏನಿದೆ?
ನಿಟ್ಟೂರು ಗ್ರಾಮ ಪಂಚಾಯಿತಿಯ ಗ್ರಾಮ ಲೆಕ್ಕಾಧಿಕಾರಿ ಡಿ.ಪಿ.ಮಂಜಪ್ಪಗೆ ಹೊಸನಗರ ತಹಶೀಲ್ದಾರ್ ವಿ.ಎಸ್.ರಾಜೀವ್ ಸಾದಮ್ಮರಿಗೆ ಮಂಜೂರಾತಿ ಪತ್ರವನ್ನು ನೀಡಲು ತಮಾಡಿದ್ದಕ್ಕೆ ಕಾರಣ ಕೇಳಿ ನೊಟೀಸ್ ಜಾರಿ ಮಾಡಿದ್ದಾರೆ. " ಪಿಂಚಣಿ ಮಾಡಿಸಲು ವೃದ್ಧೆ 7 ಕಿ.ಮೀ ನಡೆದು ಬಂದಿದ್ದಾರೆ. ಮದ್ಯಾಹ್ನ 1 ಗಂಟೆಯಾದರೂ ತಾವು ಗ್ರಾಮ ಕಚೇರಿಗೆ ಆಗಮಿಸಿರಲಿಲ್ಲ. ವೃದ್ಧೆ ಅಸ್ವಸ್ಥರಾಗಿದ್ದರಿಂದ ಗ್ರಾಮ ಪಂಚಾಯಿತಿ ಸದಸ್ಯರು, ಸಾರ್ವಜನಿಕರು ನಿಮ್ಮ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ನೀವು ನಿಮ್ಮ ಗ್ರಾಮ ಲೆಕ್ಕಾಧಿಕಾರಿ ವೃತ್ತದಲ್ಲಿ ಅನಧಿಕೃತ ಗೈರು ಹಾಜರಾಗಿರುವುದು ಮತ್ತು ಸರ್ಕಾರಿ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ್ದೀರಾ. ನಿಮ್ಮ ವಿರುದ್ಧ ಶಿಸ್ತು ಕ್ರಮಕ್ಕೆ ಮೇಲಧಿಕಾರಿಗಳಿಗೆ ಏಕೆ ಶಿಫಾರಸು ಮಾಡಬಾರದು ಎಂಬುದಕ್ಕೆ 24 ಗಂಟೆಯೊಳಗೆ ಉತ್ತರ ಕೊಡಿ" ಎಂದು ನೊಟೀಸ್ನಲ್ಲಿ ಪ್ರಶ್ನಿಸಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications