"ಬ್ಯಾಡಾ ಸ್ವಾಮಿ.. ಬಾರ್ ಆಂಡ್ ರೆಸ್ಟೋರೆಂಟ್", ಇದು ಮೌನ ಪ್ರತಿಭಟನೆ
ಶಿವಮೊಗ್ಗ, ಫೆಬ್ರವರಿ.18: 'ಮದ್ಯಪಾನ ಆರೋಗ್ಯಕ್ಕೆ ಹಾನಿಕರ'.. ಹೀಗೆಂದು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ಸರ್ಕಾರವೇ ಸಾಲು ಸಾಲಾಗಿ ಎಣ್ಣೆ ಅಂಗಡಿಗಳನ್ನು ತೆರೆಯಲು ಅನುಮತಿ ನೀಡುತ್ತಿವೆ. ಗಲ್ಲಿ ಗಲ್ಲಿಗೂ ಬಾರ್ ಆಂಡ್ ರೆಸ್ಟೋರೆಂಟ್ ಗಳು ತೆರೆದುಕೊಳ್ಳುತ್ತಿವೆ.
ನಮ್ಮ ಊರಿಗೆ ಬಾರ್ ಆಂಡ್ ರೆಸ್ಟೋರೆಂಟ್ ಬೇಡ ಸ್ವಾಮಿ ಎಂದು ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ತಾಳಗುಪ್ಪ ಗ್ರಾಮ ಸ್ತ್ರೀಶಕ್ತಿ ಸಂಘ ಹಾಗೂ ಸಂಸ್ಥೆಗಳು ಮತ್ತು ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮತ್ತೊಮ್ಮೆ ಸಹಿ ಸಂಗ್ರಹಿಸಿ ಮನವಿ ಸಲ್ಲಿಸಿದ್ದಾರೆ.
ಕಳೆದ 2019ರ ಡಿಸೆಂಬರ್.16ರಂದು ತಾಳಗುಪ್ಪ ಗ್ರಾಮದ ಜೆ.ಜೆ.ಪಾಲಾಕ್ಷಪ್ಪ ಅವರ ಜಾಗದಲ್ಲಿ ಶಿವಮೊಗ್ಗ ಶರಾವತಿ ನಗರ ನಿವಾಸಿ ಆರ್.ಎಸ್. ರಮೇಶ್ ರಾವ್ ಅವರು ಬಾರ್ ಆಂಡ್ ರೆಸ್ಟೋರೆಂಟ್ ತೆರೆಯಲು ಅನುಮತಿಯನ್ನು ನಿರಾಕರಿಸಲಾಗಿತ್ತು.

ತಾಳಗುಪ್ಪದ ರಂಗನಾಥ್ ಕಾಲೋನಿಯು ಜನವಸತಿ ಪ್ರದೇಶವಾಗಿದ್ದು, ನಿತ್ಯ ಈ ಮಾರ್ಗದಲ್ಲಿ ವಿದ್ಯಾರ್ಥಿನಿಯರು, ಮಹಿಳೆಯರು ಓಡಾಡುತ್ತಾರೆ. ಅಲ್ಲದೇ ಈ ಪ್ರದೇಶವು ಗ್ರೀನ್ ಬೆಲ್ಟ್ ವ್ಯಾಪ್ತಿಗೆ ಬರಲಿದ್ದು, ಇಲ್ಲಿ ಬಾರ್ ಆಂಡ್ ರೆಸ್ಟೋರೆಂಟ್ ತೆರೆಯದಂತೆ ಈ ಹಿಂದೆಯೂ ಕೂಡಾ ಮೌನ ಪ್ರತಿಭಟನೆ ನಡೆಸಲಾಗಿತ್ತು. ಜೊತೆಗೆ ರಾಜ್ಯದ ಮುಖ್ಯಮಂತ್ರಿ, ಅಬಕಾರಿ ಸಚಿವರು, ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿತ್ತು. ನಂತರದಲ್ಲಿ ಬಾರ್ ಆಂಡ್ ರೆಸ್ಟೋರೆಂಟ್ ತೆರೆಯಲು ಅನುಮತಿ ನಿರಾಕರಿಸಲಾಗಿತ್ತು.

ಆದರೆ, ಇತ್ತೀಚಿಗೆ ಸಿಕ್ಕ ಮಾಹಿತಿಯಂತೆ ದಿನಾಂಕ ಫೆಬ್ರವರಿ.16 ರಿಂದ ಫೆಬ್ರವರಿ.23ರೊಳಗೆ ಮತ್ತೆ ತಾಳಗುಪ್ಪದ ಅದೇ ರಂಗನಾಥ ಕಾಲೋನಿಯಲ್ಲಿ ಬಾರ್ ಆಂಡ್ ರೆಸ್ಟೋರೆಂಟ್ ತೆರೆಯಲು ಅವಕಾಶ ನೀಡಲಾಗಿದೆ. ಇದನ್ನು ತಡೆಯುವಂತೆ ಇದೀಗ ಸ್ತೀಶಕ್ತಿ ಸಂಘ ಮತ್ತು ಸಂಸ್ಥೆಯ ಕಾರ್ಯಕರ್ತರು ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications