ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿಎಂ ಗುಣಮುಖರಾಗಲು ಶಿವಮೊಗ್ಗ ತಮಿಳು ಸಮಾಜದಿಂದ ವಿಶೇಷ ಪೂಜೆ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಆಗಸ್ಟ್‌ 05: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಆದಷ್ಟು ಬೇಗ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಬರಲಿ ಎಂದು ಹಾರೈಸಿ ಶಿವಮೊಗ್ಗ ತಮಿಳು ಸಮಾಜದಿಂದ ಇಂದು ವಿಶೇಷ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು.

Recommended Video

Ayodhya ರಾಮನ ದೇವಸ್ಥಾನ ನಿರ್ಮಾಣಕ್ಕೆ ಮೊದಲ ಇಟ್ಟಿಗೆ ಇಟ್ಟ ಮೋದಿ. | Oneindia Kannada

ಸಮುದಾಯ ಭವನದ ಗಣಪತಿ ದೇವಸ್ಥಾನದಲ್ಲಿ ಇಂದು ಸಮಾಜದ ಸದಸ್ಯರು ಸಿಎಂ ಗುಣಮುಖರಾಗಲೆಂದು ಹೋಮವನ್ನು ಹಮ್ಮಿಕೊಂಡು, ಪ್ರಾರ್ಥನೆಯನ್ನು ಸಲ್ಲಿಸಿದರು. ಎರಡು ದಿನಗಳ ಹಿಂದಷ್ಟೇ ಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಅವರು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ಇರುವುದು ತಿಳಿಯುತ್ತಿದ್ದಂತೆ, ಅವರು ಶೀಘ್ರ ಗುಣಮುಖಲಾಗಲೆಂದು ವಿವಿಧ ಜಿಲ್ಲೆಗಳಲ್ಲಿ ಕಾರ್ಯಕರ್ತರು, ಪಕ್ಷದ ಮುಖಂಡರು ಪ್ರಾರ್ಥನೆ ಸಲ್ಲಿಸಿದ್ದರು. ಪ್ರಮುಖ ರಾಜಕೀಯ ಮುಖಂಡರೂ ಸಿಎಂ ಗುಣಮುಖರಾಗಲೆಂದು ಹಾರೈಸಿದ್ದರು.

Tamil sangam in Shivamogga Pray For Speedy Recovery Of Yediyurappa From Coronavirus

 ಶಿವಮೊಗ್ಗ: ಯಡಿಯೂರಪ್ಪ, ಸಿದ್ದರಾಮಯ್ಯ ಗುಣಮುಖರಾಗಲು ಕಾಂಗ್ರೆಸ್ ನಿಂದ ವಿಶೇಷ ಪೂಜೆ ಶಿವಮೊಗ್ಗ: ಯಡಿಯೂರಪ್ಪ, ಸಿದ್ದರಾಮಯ್ಯ ಗುಣಮುಖರಾಗಲು ಕಾಂಗ್ರೆಸ್ ನಿಂದ ವಿಶೇಷ ಪೂಜೆ

ಈ ಸಂದರ್ಭದಲ್ಲಿ ಸಮಾಜದ ಅಧ್ಯಕ್ಷರಾದ ಡಿ. ರಾಜಶೇಖರ್, ಉಪಾಧ್ಯಕ್ಷ ಎನ್. ಮಂಜುನಾಥ್, ಹಿರಿಯರು ಮುಖಂಡರಾದ ಎಂ.ಪಿ. ಸಂಪತ್ತು, ತಮಿಳು ಸಂಘದ ಕಾರ್ಯದರ್ಶಿಗಳಾದ ದಂಡಪಾಣಿ, ಯುವ ಮುಖಂಡರಾದ ಗಣೇಶ್, ಎಸ್. ಮಂಜುನಾಥ ಉಪಸ್ಥಿತರಿದ್ದರು.

English summary
Tamil sangam of Shivamogga district performed special homa and prayed for speedy recovery of Yediyurappa from coronavirus
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X