ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ : ಮಳೆಗಾಗಿ ಶಿವನಿಗೆ 1008 ಎಳನೀರ ಅಭಿಷೇಕ

|
Google Oneindia Kannada News

ಶಿವಮೊಗ್ಗ, ಜೂನ್ 10 : ಮಲೆನಾಡು ಭಾಗಕ್ಕೆ ಈ ಬಾರಿ ಬರದ ಬಿಸಿ ತಟ್ಟಿದೆ. ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಿದೆ. ಜಿಲ್ಲೆಯ ಜೀವನದಿ ತುಂಗೆ ಬತ್ತಿ ಹೋಗಿದ್ದು, ಮರಳುಗಾಡಾಗಿದೆ. ಆದ್ದರಿಂದ, ಶಿವನನ್ನು ಜನರು ಬೇಡಿಕೊಳ್ಳುತ್ತಿದ್ದಾರೆ.

ಸೋಮವಾರ ಶಿವಮೊಗ್ಗ ನಗರದ ಹೊರವಲಯದ ಹರಕೆರೆಯ ಶಂಕರ ದೇವಾಲಯದಲ್ಲಿ ಶಿವನಿಗೆ 1008 ಎಳನೀರಿನ ಅಭಿಷೇಕ ಮಾಡಲಾಯಿತು. ರಾಜ್ಯದಲ್ಲಿ ಬೇಗ ಮಳೆ ಬರಲಿ, ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿ ಎಂದು ಪ್ರಾರ್ಥಿಸಲಾಯಿತು.

ಶಿವಮೊಗ್ಗ ಜಿಲ್ಲೆಯಲ್ಲಿ 93 ಗ್ರಾಮಗಳಿಗೆ ಟ್ಯಾಂಕರ್ ನೀರು ಪೂರೈಕೆಶಿವಮೊಗ್ಗ ಜಿಲ್ಲೆಯಲ್ಲಿ 93 ಗ್ರಾಮಗಳಿಗೆ ಟ್ಯಾಂಕರ್ ನೀರು ಪೂರೈಕೆ

ಸೌರಭ ಸಂಸ್ಥೆ ವತಿಯಿಂದ ಎಳನೀರ ಅಭಿಷೇಕ ಆಯೋಜಿಸಲಾಗಿತ್ತು. ಅಭಿಷೇಕದ ಜೊತೆ ಜೊತೆಗೆ ರುದ್ರಪಠಣ ಹಾಗೂ ವಿವಿಧ ಪೂಜಾ ಕಾರ್ಯಗಳು ನಡೆದವು. ಮಧ್ಯಾಹ್ನ ಪ್ರಸಾದ ವಿನಿಯೋಗವನ್ನು ಸಹ ಏರ್ಪಡಿಸಲಾಗಿತ್ತು.

ಕುಡಿಯುವ ನೀರಿನ ಸಮಸ್ಯೆಯೇ ಸಹಾಯವಾಣಿಗೆ ಕರೆ ಮಾಡಿಕುಡಿಯುವ ನೀರಿನ ಸಮಸ್ಯೆಯೇ ಸಹಾಯವಾಣಿಗೆ ಕರೆ ಮಾಡಿ

Tender coconut abhishekam for lord Shiva prayer for rain

ಸೌರಭ ಸಂಸ್ಥೆ ಅಧ್ಯಕ್ಷರಾದ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಮಾತನಾಡಿ, 'ಜಿಲ್ಲೆಯಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ನೀರಿನ ಕೊರತೆ ಉಂಟಾಗಿದೆ. ಹೀಗಾಗಿ ದೇವರನ್ನು ಸಾಮೂಹಿಕವಾಗಿ ಪ್ರಾರ್ಥಿಸುವ ಕಾಲ ಬಂದಿದೆ' ಎಂದು ಹೇಳಿದರು.

ಶಿವಮೊಗ್ಗ : ನೀರಿನ ಕೊರತೆ, ನಗರದಲ್ಲಿ ಜೂ.10ರಿಂದ 2 ದಿನಕ್ಕೊಮ್ಮೆ ನೀರುಶಿವಮೊಗ್ಗ : ನೀರಿನ ಕೊರತೆ, ನಗರದಲ್ಲಿ ಜೂ.10ರಿಂದ 2 ದಿನಕ್ಕೊಮ್ಮೆ ನೀರು

ತುಂಗಾ ನದಿ ಬತ್ತಿ ಹೋಗಿರುವ ಕಾರಣ ಶಿವಮೊಗ್ಗ ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಜೂನ್ 10ರಿಂದ ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು ಪೂರೈಕೆ ಮಾಡುತ್ತೇವೆ ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ಘೋಷಣೆ ಮಾಡಿದೆ.

ಶಿವಮೊಗ್ಗ ಜಿಲ್ಲೆಗೆ ಬರದ ಬಿಸಿ ತಟ್ಟಿದೆ 93 ಗ್ರಾಮಗಳಿಗೆ ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಸರಬರಾಜು ಮಾಡಲಾಗುತ್ತಿದೆ. ಶಿಕಾರಿಪುರ ತಾಲೂಕಿನಲ್ಲಿ 22, ಹೊಸನಗರ ತಾಲೂಕಿನಲ್ಲಿ 24 ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆಯಲಾಗಿದೆ.

English summary
1008 tender coconut abhishekam for lord Shivaa in Harakere Shivamogga on June 10, 2019 and devotes prayer for rain. Malnad region Shivamogga facing drought situation this year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X