Mohammed Shariq : ಮಂಗಳೂರು ಸ್ಪೋಟ ಪ್ರಕರಣ: ತೀರ್ಥಹಳ್ಳಿಯ ಶಾರಿಕ್ ಹಿನ್ನೆಲೆ ಏನು?

ಮಂಗಳೂರು, ನವೆಂಬರ್ 21: ಮಂಗಳೂರಿನ ಆಟೋದಲ್ಲಿ ಕುಕ್ಕರ್ ಸ್ಪೋಟ ಪ್ರಕರಣದಲ್ಲಿ ತೀರ್ಥಹಳ್ಳಿಯ ಶಾರಿಕ್ ಎಂಬಾತನಿಗೆ ಶೇ.40ರಷ್ಟು ಸುಟ್ಟ ಗಾಯವಾಗಿದೆ. ಈಗಾಗಲೇ ಶಿವಮೊಗ್ಗದಲ್ಲಿ ಟ್ರಯಲ್ ಬ್ಲಾಸ್ಟ್‌ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಶಾರಿಕ್‌ಗಾಗಿ ಪೊಲೀಸರು, ರಾಷ್ಟ್ರೀಯ ತನಿಖಾ ಸಂಸ್ಥೆ, ಗುಪ್ತಚರ ಇಲಾಖೆ ಅಧಿಕಾರಿಗಳು ಶೋಧ ಮಾಡುತ್ತಿದ್ದರು.

ಶಂಕಿತ ಉಗ್ರ ವಿಧ್ವಂಸಕರ ಜೊತೆ ಸೇರಿ ಹಲವುಕಡೆ ಕುಕೃತ್ಯ ನಡೆಸುವ ಸದ್ಯತೆ ಇತ್ತು. ಇದೆ ಕಾರಣಕ್ಕೆ ತೀರ್ಥಹಳ್ಳಿಯ ಶಾರಿಕ್ ಪೊಲೀಸರ ಪಾಲಿಗೆ ಮೋಸ್ಟ್ ವಾಂಟೆಡ್ ಆಗಿದ್ದ. ಅಲ್ಲಿಲ್ಲ ತಲೆಮರೆಸಿಕೊಂಡು ತಿರುಗುತ್ತಿದ್ದ. ಹುಬ್ಬಳ್ಳಿಯ ರೈಲ್ವೆ ಉದ್ಯೋಗಿಯಾಗಿರುವ ಎಂಬುವವರ ಆಧಾರ್‌ ಕಾರ್ಡ್‌ಗೆ ತನ್ನ ಫೋಟೋ ಹಾಕಿಕೊಂಡು ಮೈಸೂರಿನಲ್ಲಿ ಅದೇ ವಿಳಾಸ ನೀಡಿ ರೂಮ್‌ ಬಾಡಿಗೆ ತೆಗೆದುಕೊಂಡಿದ್ದ. ಈತ ಇದೀಗ ಮಂಗಳೂರಲ್ಲಿ ಶನಿವಾರ ನಡೆದ ಕುಕ್ಕರ್ ಬ್ಲಾಸ್ಟ್‌ ಪ್ರಕರಣದಲ್ಲಿ ಮತ್ತೆ ಸುದ್ದಿಯಾಗಿದ್ದಾನೆ.

ಶಾರಿಕ್ ಮೂಲತಃ ತೀರ್ಥಹಳ್ಳಿಯ ಸೊಪ್ಪು ಗುಡ್ಡೆಯವನು. ಶಾಲಾ ವಿದ್ಯಭ್ಯಾಸದ ನಂತರ ಮಂಗಳೂರಿಗೆ ತೆರಳಿ ನೆಲೆಸಿದ್ದ. ತಾಯಿ ತೀರಿಕೊಂಡಿದ್ದರಿಂದ ಶಾರಿಕ್ ತಂದೆ ಮರು ವಿವಾಹವಾಗಿದ್ದರು. ಸ್ವಲ್ಪ ಸಮಯದ ಬಳಿಕ ಶಾರಿಕ್ ಮಂಗಳೂರಿನಿಂದ ತೀರ್ಥಹಳ್ಳಿಗೆ ಬಂದು ತಂದೆಯ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ. ಮತ್ತೆ ಸ್ವಲ್ಪ ದಿನಗಳ ನಂತರ ಊರು ಬಿಟ್ಟಿದ್ದ.

ಉಗ್ರ ಸಂಘಟನೆ ಪರ ಗೋಡೆ ಬರಹ ಪ್ರಕರಣದಲ್ಲಿ ಬಂಧನ

ಉಗ್ರ ಸಂಘಟನೆ ಪರ ಗೋಡೆ ಬರಹ ಪ್ರಕರಣದಲ್ಲಿ ಬಂಧನ

2020ರ ನವೆಂಬರ್ ತಿಂಗಳ ಮಂಗಳೂರಿನ ಗೋಡೆ ಬರಹ ಪ್ರಕರಣದಲ್ಲಿ ಮೊಹಮ್ಮದ್ ಶಾರಿಕ್ ಪ್ರಮುಖ ಆರೋಪಿಯಾಗಿದ್ದ. ಲಷ್ಕರ್-ಎ-ತೊಯ್ಬ ಉಗ್ರ ಸಂಘಟನೆ ಪರವಾಗಿ ಗೋಡೆ ಬರಹ ಬರೆದಿದ್ದು ರಾಜ್ಯದಲ್ಲಿ ಸಂಚಲನ ಸೃಷ್ಟಿಸಿತ್ತು. ತನಿಖೆ ನಡೆಸಿದ್ದ ಪೊಲೀಸರು ತೀರ್ಥಹಳ್ಳಿಯ ಮೊಹಮ್ಮದ್ ಶಾರಿಕ್, ಆತನ ಸಹವರ್ತಿ ಇಂಜಿನಿಯರಿಂಗ್ ವಿದ್ಯಾರ್ಥಿ ಮಾಜ್ ಮುನೀರ್ ಅಹಮ್ಮದ್ ಎಂಬಾತನನ್ನು ಬಂಧಿಸಿದ್ದರು. ಇವರ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳು ತಡೆ ಕಾಯ್ದೆ (ಯುಎಪಿಎ) ಅಡಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣದ ತನಿಖೆ ಇನ್ನೂ ನಡೆಯುತ್ತಿದ್ದು, ಆರೋಪಿಗಳಿಗೆ ಜಾಮೀನು ಲಭಿಸಿತ್ತು.

ಶಿವಮೊಗ್ಗದಲ್ಲಿ ಟ್ರಯಲ್ ಬ್ಲಾಸ್ಟ್‌ ನಂತರ ಮತ್ತೆ ಎಸ್ಕೇಪ್‌

ಶಿವಮೊಗ್ಗದಲ್ಲಿ ಟ್ರಯಲ್ ಬ್ಲಾಸ್ಟ್‌ ನಂತರ ಮತ್ತೆ ಎಸ್ಕೇಪ್‌

2022ರ ಆಗಸ್ಟ್ ತಿಂಗಳಲ್ಲಿ ಸಾರ್ವಕರ್ ಫ್ಲೆಕ್ಸ್ ವಿವಾದದ ಬೆನ್ನಿಗೆ ಶಿವಮೊಗ್ಗದ ಗಾಂಧಿ ಬಜಾರ್‌ನಲ್ಲಿ ಪ್ರೇಮ್ ಸಿಂಗ್ ಎಂಬಾತನಿಗೆ ಚಾಕು ಇರಿಯಲಾಗಿತ್ತು. ಪ್ರಕರಣದ ವಿಚಾರಣೆ ವೇಳೆ ಮೊಹಮ್ಮದ್ ಶಾರಿಕ್ ಹೆಸರು ಮುನ್ನಲೆಗೆ ಬಂದಿತ್ತು. ತನಿಖೆ ನಡೆಸಿದಾಗ ಶಿವಮೊಗ್ಗದಲ್ಲಿ ಬಾಂಬ್ ತಯಾರಿ, ಪ್ರಯೋಗಿಕ ಸ್ಪೋಟ ನಡೆಸುತ್ತಿದ್ದದ್ದು ಬೆಳಕಿಗೆ ಬಂದಿತ್ತು. ಘಟನೆ ಸಂಬಂಧ ಶಾರಿಕ್ ಸಹಚರರಾದ ತೀರ್ಥಹಳ್ಳಿಯ ಮಾಜ್ ಮುನೀರ್ ಅಹಮ್ಮದ್ ಮತ್ತು ಶಿವಮೊಗ್ಗದ ಸಯ್ಯದ್ ಯಾಸೀನ್ ಎಂಬಾತನನ್ನು ಬಂಧಿಸಲಾಗಿತ್ತು. ತಲೆಮರೆಸಿಕೊಂಡಿದ್ದ ಶಾರಿಕ್‌ಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದರು.

ಅಲ್ ಹಿಂದ್ ಘಟಕದ ಸಕ್ರಿಯ ಸದಸ್ಯ

ಅಲ್ ಹಿಂದ್ ಘಟಕದ ಸಕ್ರಿಯ ಸದಸ್ಯ

ಇಸ್ಲಾಮಿಕ್ ಸ್ಟೇಟ್ (ಐಎಸ್ಐಎಸ್) ಉಗ್ರ ಸಂಘಟನೆಯಿಂದ ಮೊಹಮ್ಮದ್ ಶಾರಿಕ್ ಪ್ರಭಾವಿತನಾಗಿದ್ದ ಎಂದು ಹೇಳಲಾಗುತ್ತಿದೆ. ತೀರ್ಥಹಳ್ಳಿಯ ಮತೀನ್ ಅಹಮ್ಮದ್ ತಾಹ ಎಂಬಾತನ ಸಹಚರ ಎಂದು ಶಂಕಿಸಲಾಗಿದೆ. ತಲೆಮರೆಸಿಕೊಂಡಿರುವ ಮತೀನ್ ಅಹಮ್ಮದ್ ಐಎಸ್ಐಎಸ್ ಸಂಘಟನೆಯಿಂದ ಪ್ರಭಾವಿತನಾಗಿದ್ದ. ಸಂಘಟನೆಯ ಅಲ್ ಹಿಂದ್ ಘಟಕದ ಪ್ರಮುಖ ಸದಸ್ಯನಾಗಿದ್ದಾನೆ. ಕರ್ನಾಟಕ, ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಅಲ್ ಹಿಂದ್ ಘಟಕ ಸಕ್ರಿಯವಾಗಿದೆ. ಇದೆ ಘಟಕದ ಭಾಗವಾಗಿ ಮೊಹಮ್ಮದ್ ಶಾರಿಕ್ ಕೆಲಸ ಮಾಡುತ್ತಿದ್ದ ಎಂಬ ಅನುಮಾನವಿದೆ.

ಮಂಗಳೂರಲ್ಲಿ ದೊಡ್ಡ ಮಟ್ಟದ ಸ್ಫೋಟಕ್ಕೆ ಪ್ಲಾನ್

ಮಂಗಳೂರಲ್ಲಿ ದೊಡ್ಡ ಮಟ್ಟದ ಸ್ಫೋಟಕ್ಕೆ ಪ್ಲಾನ್

ಶಿವಮೊಗ್ಗ ಟ್ರಯಲ್‌ ಬ್ಲಾಸ್ಟ್‌ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ತಲೆ ಮರೆಸಿಕೊಂಡಿದ್ದ ಶಾರಿಕ್‌ ತಮಿಳುನಾಡು, ಕೇರಳದಲ್ಲೆಲ್ಲಾ ತಲೆಮರಿಸಿಕೊಂಡಿದ್ದ. ತಮಿಳುನಾಡಿನ ಕೊಯಮತ್ತೂರಲ್ಲಿ ತಲೆಮರೆಸಿಕೊಂಡಿದ್ದ ಈತ ಅಲ್ಲಿ ಸಿಮ್‌ ಖರೀದಿಸಿದ್ದ, ನಂತರ ಮೈಸೂರಿಗೆ ಬಂದು ಮೇಟಗಳ್ಳಿ ಬಳಿಯ ಲೋಕನಾಯಕ ನಗರದಲ್ಲಿ ರೂಮ್‌ ಒಂದನ್ನು ಬಾಡಿಗೆಗೆ ತೆಗೆದುಕೊಂಡಿದ್ದ. ಅಲ್ಲೆ ಮೊಬೈಲ್ ರಿಪೇರಿ ಮಾಡುವ ತರಬೇತಿ ಪಡೆದಿದ್ದ. ನಂತರ ಮಂಗಳೂರಿನಲ್ಲಿ ದೊಡ್ಡ ಮಟ್ಟದ ಭೀತಿ ಹುಟ್ಟಿಸುವ ಕೃತ್ಯ ಎಸೆಗಲು ಸಜ್ಜಾಗಿದ್ದ ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೆ ಮೈಸೂರು, ಮಂಗಳೂರು ಸೇರಿ ನಾಲ್ವರು ಶಂಕಿತರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+