ಕೊರೊನಾ ವೈರಸ್ ಹಿನ್ನೆಲೆ ಹುಟ್ಟುಹಬ್ಬ ಆಚರಣೆ ಇಲ್ಲ: ಸಂಸದ ಬಿ.ವೈ ರಾಘವೇಂದ್ರ
ಶಿವಮೊಗ್ಗ, ಆಗಸ್ಟ್ 14: ರಾಜಕಾರಣಿಗಳ ಹುಟ್ಟುಹಬ್ಬ ಎಂದರೆ ಆಯಾ ಪಕ್ಷದ ಕಾರ್ಯಕರ್ತರಲ್ಲಿ ಸಡಗರ ಸಂಭ್ರಮ ಮನೆ ಮಾಡಿರುತ್ತದೆ. ಅದ್ಧೂರಿಯಾಗಿ ಆಚರಣೆ ಮಾಡಿ, ಪಟಾಕಿ ಸಿಡಿಮದ್ದು ಸಿಡಿಸಿ, ಸಿಹಿ ವಿತರಣೆ ಈ ರೀತಿಯಾಗಿ ಅನೇಕ ಆಚರಣೆಗಳನ್ನು ನಡೆಸಲಾಗುತ್ತದೆ.
ಆದರೆ ಈ ಕೊರೊನಾ ವೈರಸ್ ಸಂಕಷ್ಟ ಸಮಯದಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡದಂತೆ ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ತಮ್ಮ ಪಕ್ಷದ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.
ಅಂಬ್ಲಿಗೊಳ್ಳ ಜಲಾಶಯ ಭರ್ತಿ; ಸಂಸದ ಬಿ.ವೈ.ರಾಘವೇಂದ್ರ ಬಾಗಿನ ಅರ್ಪಣೆ
ಕೋವಿಡ್-19 ಕಾಯಿಲೆಯಿಂದ ಇಡೀ ವಿಶ್ವವೇ ಜಾಗತಿಕ ಮಟ್ಟದಲ್ಲಿ ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ ಸುಸ್ಥಿರ ಸಮಾಜ ನಿರ್ಮಾಣ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ.
ಪ್ರಸ್ತುತ ಸಂದರ್ಭದಲ್ಲಿ ಯಾವುದೇ ಸಭೆ-ಸಮಾರಂಭವನ್ನು ನಡೆಸದಂತೆ ಕಾನೂನುಗಳನ್ನು ಪಾಲಿಸಲು ಅತ್ಯಂತ ಅವಶ್ಯವಾಗಿದೆ ಎಂದು ವಿನಂತಿಸಿದ್ದಾರೆ.
""ಪತ್ರದಲ್ಲಲಿ ತಿಳಿಸಿರುವಂತೆ ಆಗಸ್ಟ್ ೧೬ ರ ಭಾನುವಾರದಂದು ನನ್ನ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದಿರಲು ತೀರ್ಮಾನಿಸಿದ್ದೇನೆ. ಆದ್ದರಿಂದ ಅಭಿಮಾನಿಗಳು, ಹಿತೈಷಿಗಳು, ಸ್ನೇಹಿತರು ಹಾಗೂ ಕಾರ್ಯಕರ್ತರು ಯಾವುದೇ ಕಾರ್ಯಕ್ರಮವನ್ನು ಆಯೋಜಿಸದೇ, ಸರ್ಕಾರದ ನಿರ್ದೇಶನಗಳನ್ನು ಪಾಲಿಸಲು ಹಾಗೂ ಸಹಕರಿಸಲು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ'' ಎಂದಿದ್ದಾರೆ.