ಸಾಗರ; ಅಡಿಕೆ ಬೆಳೆಗಾರರ ನಿದ್ದೆಗೆಡಿಸಿದ್ದ 8 ಕಳ್ಳರ ಬಂಧನ
ಶಿವಮೊಗ್ಗ, ಜೂನ್ 7: ಸಾಗರ ತಾಲೂಕಿನ ಅಡಿಕೆ ಬೆಳೆಗಾರರಲ್ಲಿ ಆತಂಕ ಮೂಡಿಸಿದ್ದ ಎಂಟು ಕಳ್ಳರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ರೈತರು ಪಾಲಿಗೆ ಕಂಟಕಪ್ರಾಯವಾಗಿದ್ದ ಬಂಧಿತರಿಂದ 5 ಲಕ್ಷ ಮೌಲ್ಯದ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ.
ಸಾಗರ ತಾಲೂಕಿನ ವಿವಿಧೆಡೆ ಈ ಕಳ್ಳರು ಅಡಿಕೆ ಕಳ್ಳತನ ಮಾಡುತ್ತಿದ್ದ 8 ಕಳ್ಳರನ್ನು ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಇದರಿಂದ 7 ಕಳ್ಳತನ ಪ್ರಕರಣವನ್ನು ಭೇದಿಸಿದಂತಾಗಿದೆ.
ಮೇ 31ರ ರಾತ್ರಿ ಸಾಗರ ತಾಲೂಕು ದೊಂಬೆ ಗ್ರಾಮದಲ್ಲಿ ಅಡಿಕೆ ಕಳ್ಳತನವಾಗಿತ್ತು. ಗಜಾನನ ಎಂಬುವವರು ತಮ್ಮ ಮನೆ ಸಮೀಪದ ಗೋಡೋನ್ನಲ್ಲಿ 2.40 ಲಕ್ಷ ರೂ. ಮೌಲ್ಯದ ಅಡಕೆಯನ್ನು ಸಂಗ್ರಹಿಸಿಟ್ಟಿದ್ದರು. ರಾತ್ರೋರಾತ್ರಿ ಗೋಡೋನ್ಗೆ ನುಗ್ಗಿದ ಖದೀಮರು ಅಡಿಕೆಯನ್ನು ಕದ್ದೊಯ್ದಿದ್ದರು. ಕೆಂಪು ಅಡಿಕೆ, ಬಿಳಿ ಗೋಟು, ಕಲವಾರು ಅಡಿಕೆ, ಹಂಡೆಬೆಟ್ಟೆ ಮಾದರಿಯ ಸುಮಾರು 675 ಕೆ.ಜಿ ಅಡಕೆ ಕಳ್ಳತನವಾಗಿದೆ ಎಂದು ಗಜಾನನ ದೂರು ನೀಡಿದ್ದರು.

ಸಿಕ್ಕಿಬಿದ್ದರು ಎಂಟು ಕಳ್ಳರು; ಈ ಪಕ್ರರಣದ ತನಿಖೆ ನಡೆಸಿದ್ದ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಒಟ್ಟು 8 ಆರೋಪಿಗಳನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಇವರು ಸಾಗರ ತಾಲೂಕಿನ ವಿವಿಧೆಡೆ ಅಡಿಕೆ ಕಳವು ಮಾಡಿರುವುದು ಬೆಳಕಿಗೆ ಬಂದಿದೆ.
ಬಂಧಿತರಿಂದ 805 ಕೆಜಿ ಸಿಪ್ಪೆ ಗೋಟು ಅಡಿಕೆ, 70 ಕೆಜಿ ಚಾಲಿ ಅಡಿಕೆ, 349 ಕೆಜಿ ಕೆಂಪು ಅಡಿಕೆ ಮತ್ತು 200 ಕೆಜಿ ಬಿಳಿ ಗೋಟು ಅಡಿಕೆ ವಶಕ್ಕೆ ಪಡೆಯಲಾಗಿದೆ. ಇದರ ಒಟ್ಟು ಮೌಲ್ಯ 5 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಇನ್ನು, ಕೃತ್ಯಕ್ಕೆ ಬಳಕೆ ಮಾಡಿದ ಮಾರುತಿ ಓಮ್ನಿ ಕಾರು, ಎರಡು ಬೈಕುಗಳನ್ನು ಕೂಡ ವಶಕ್ಕೆ ಪಡೆಯಲಾಗಿದೆ. ಈ ಆರೋಪಿಗಳ ಬಂಧನದಿಂದ ಸಾಗರ ತಾಲೂಕಿನ ಏಳು ಕಡೆ ಅಡಕೆ ಕಳವು ಪ್ರಕರಣವನ್ನು ಭೇದಿಸಿದಂತಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬಂಧಿತರೆಲ್ಲ ಸಾಗರ ತಾಲೂಕಿನವರೆ ಆಗಿದ್ದಾರೆ. ಯಶೋಧರ (23), ಮಂಜುನಾಥ (28), ಅರುಣ (27), ಸಂದೇಶ (22), ಸಾಗರ ಪಟ್ಟಣದ ಶಶಾಂತ್ (21), ಕಾರ್ತಿಕ್ (20), ಅದರಂತೆ ಗ್ರಾಮದ ಸಂದೀಪ (24), ಅಣಲೆಕೊಪ್ಪದ ಶಾರೂಕ್ ಅಲಿ (24)ಸಾಗರ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications