Get Updates
Get notified of breaking news, exclusive insights, and must-see stories!

ತೀರ್ಥಹಳ್ಳಿ-ವಿಧಾನಸೌಧ ಪಾದಯಾತ್ರೆ ಹೊರಟ ಅತಿಥಿ ಉಪನ್ಯಾಸಕರು

ಶಿವಮೊಗ್ಗ, ಡಿಸೆಂಬರ್ 30; ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಶಿವಮೊಗ್ಗದ ತೀರ್ಥಹಳ್ಳಿಯಿಂದ ಬೆಂಗಳೂರಿನ ವಿಧಾನಸೌಧದವರೆಗೆ ಪಾದಯಾತ್ರೆ ನಡೆಸುತ್ತಿದ್ದಾರೆ. ಇವತ್ತು ಪಾದಯಾತ್ರೆ ಎರಡನೇ ದಿನ ಪೂರ್ಣಗೊಳಿಸಿದ್ದು, ಶುಕ್ರವಾರ ಶಿವಮೊಗ್ಗಕ್ಕೆ ಪ್ರವೇಶಿಸಲಿದೆ.

ಅತಿಥಿ ಉಪನ್ಯಾಸಕರ ಸಂಘಟನೆಗಳ ಒಕ್ಕೂಟದ ವತಿಯಿಂದ ಪಾದಯಾತ್ರೆ ನಡೆಸಲಾಗುತ್ತಿದೆ. ತೀರ್ಥಹಳ್ಳಿಯಲ್ಲಿ ಹಲವು ವಿದ್ಯಾರ್ಥಿ ಸಂಘಟನೆಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಪಾದಯಾತ್ರೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಸೇವಾ ಭದ್ರತೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಹಲವು ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಈತನಕ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಇತ್ತೀಚೆಗೆ ಅತಿಥಿ ಉಪನ್ಯಾಸಕ ಹರ್ಷಾ ಶಾನುಭೋಗ್ ಆರ್ಥಿಕ ಸಮಸ್ಯೆಯಿಂದಾಗಿ ನೊಂದು ಅತ್ಮಹತ್ಯೆ ಮಾಡಿಕೊಂಡಿದ್ದರು. ಹಾಗಾಗಿ ಸೇವಾ ಭದ್ರತೆ ಮತ್ತು ಹರ್ಷ ಶಾನುಭೋಗ್ ಕುಟುಂಬಕ್ಕೆ ನೆರವು ನೀಡಬೇಕು ಎಂದು ಆಗ್ರಹಿಸಿ ಪಾದಯಾತ್ರೆ ಆರಂಭಿಸಲಾಗಿದೆ.

ತೀರ್ಥಹಳ್ಳಿಯಿಂದ ವಿಧಾನಸೌಧದವರೆಗಿನ ಪಾದಯಾತ್ರೆಯಲ್ಲಿ ರಾಜ್ಯದ ವಿವಿಧೆಡೆಯ ಅತಿಥಿ ಉಪನ್ಯಾಸಕರು ಪಾಲ್ಗೊಳ್ಳಲಿದ್ದಾರೆ. ತೀರ್ಥಹಳ್ಳಿ, ಶಿವಮೊಗ್ಗದ ಅತಿಥಿ ಉಪನ್ಯಾಸಕರ ಜೊತೆಗೆ, ಕಲಬುರಗಿ, ಬೀದರ್, ಬಿಜಾಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪ, ಬಳ್ಳಾರಿ, ಚಿಕ್ಕಮಗಳೂರು, ಹಾವೇರಿ, ಉತ್ತರ ಕನ್ನಡ, ದಾವಣಗೆರೆ, ಹಾಸನ, ಚಿತ್ರದುರ್ಗ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಬಳ್ಳಾಪುರ, ವಿಜಯಪುರ, ಮಂಡ್ಯ, ತುಮಕೂರು, ಕೋಲಾರ, ರಾಮನಗರ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದ ಅತಿಥಿ ಉಪನ್ಯಾಸಕರು ಹಂತ ಹಂತವಾಗಿ ಪಾದಯಾತ್ರೆಯಲ್ಲಿ ಜೊತೆಯಾಗಲಿದ್ದಾರೆ.

ಯಡೂರಿನಿಂದ ಪಾದಯಾತ್ರೆ ಶುರು

ಯಡೂರಿನಿಂದ ಪಾದಯಾತ್ರೆ ಶುರು

ಆತ್ಮಹತ್ಯೆ ಮಾಡಿಕೊಂಡ ಅತಿಥಿ ಉಪನ್ಯಾಸಕ ಹರ್ಷ ಶಾನುಭೋಗ್ ಮನೆಯಿಂದ ಪಾದಯಾತ್ರೆ ಆರಂಭಿಸಲಾಯಿತು. ಮಾಸ್ತಿಕಟ್ಟೆ ಸಮೀಪದ ಯಡೂರಿನಿಂದ ಪಾದಯಾತ್ರೆ ಶುರುವಾಗಿದೆ. ಮೊದಲ ದಿನ ಪಾದಯಾತ್ರೆ ತೀರ್ಥಹಳ್ಳಿ ತಲುಪಿತು. ಇವತ್ತು ತೀರ್ಥಹಳ್ಳಿಯಿಂದ ಮಂಡಗದ್ದೆವರೆಗೆ ಪಾದಯಾತ್ರೆ ನಡೆಯಿತು.

ಡಿಸೆಂಬರ್ 31ರಂದು ಪಾದಯಾತ್ರೆ ಶಿವಮೊಗ್ಗಕ್ಕೆ ತಲುಪಲಿದೆ. ಮರುದಿನ ಶಿವಮೊಗ್ಗದಿಂದ ಭದ್ರಾವತಿವರೆಗೆ, ಬಳಿಕ ತರೀಕೆರೆ, ಕಡೂರು, ಬಾಣವರ, ಅರಸೀಕೆರೆ, ತಿಪಟೂರು, ಕೆ. ಬಿ. ಕ್ರಾಸ್, ಗುಬ್ಬಿ, ತುಮಕೂರು, ನಂದಿಗ್ರಾಮ, ನೆಲಮಂಗಲ, ಯಶವಂತಪುರ ತಲುಪಲಿದೆ. ಜನವರಿ 13ರಂದು ಪಾದಯಾತ್ರೆ ವಿಧಾನಸೌಧಕ್ಕೆ ತಲುಪಲಿದೆ.

ತೀರ್ಥಹಳ್ಳಿಯಲ್ಲಿ ವಿದ್ಯಾರ್ಥಿಗಳ ಬೆಂಬಲ

ತೀರ್ಥಹಳ್ಳಿಯಲ್ಲಿ ವಿದ್ಯಾರ್ಥಿಗಳ ಬೆಂಬಲ

ಇವತ್ತು ತೀರ್ಥಹಳ್ಳಿಯಿಂದ ಮಂಡಗದ್ದೆವರೆಗೆ ಪಾದಯಾತ್ರೆ ನಡೆಯಿತು. ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು, ಎಬಿವಿಪಿ ಸಂಘಟನೆಯ ಕಾರ್ಯಕರ್ತರು, ನಾಗರೀಕರು ಕೂಡ ಅತಿಥಿ ಉಪನ್ಯಾಸಕರ ಪಾದಯಾತ್ರೆಯಲ್ಲಿ ಜೊತೆಯಾದರು. ಸರ್ಕಾರ ಕೂಡಲೇ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆ, ತರಗತಿಗಳು ಸ್ಥಗಿತ

ಪ್ರತಿಭಟನೆ, ತರಗತಿಗಳು ಸ್ಥಗಿತ

ಕರ್ನಾಟಕದಲ್ಲಿ ಸುಮಾರು 14 ಸಾವಿರ ಅತಿಥಿ ಉಪನ್ಯಾಸರು ವಿವಿಧ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸೇವಾ ಭದ್ರತೆಗೆ ಆಗ್ರಹಿಸಿ ಕಳೆದ 20 ದಿನದಿಂದ ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ. ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿರುವುದರಿಂದ, ವಿದ್ಯಾರ್ಥಿಗಳಿಗೆ ಪಾಠಗಳು ಮುಂದುವರೆಯುತ್ತಿಲ್ಲ. ಪರೀಕ್ಷೆಗಳು ಹತ್ತಿರವಾಗುತ್ತಿದ್ದರೂ ತರಗತಿ ನಡೆಯುದೇ ಶಿಕ್ಷಣ ವಂಚಿತರಾಗುತ್ತಿದ್ದಾರೆ.

ಸದನದಲ್ಲಿ ಚರ್ಚೆ ನಡೆದಿಲ್ಲ

ಸದನದಲ್ಲಿ ಚರ್ಚೆ ನಡೆದಿಲ್ಲ

ಬೆಳಗಾವಿ ಅಧಿವೇಶನದ ಸಂದರ್ಭ ಸುವರ್ಣ ವಿಧಾನಸೌಧದ ಮುಂದೆಯು ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದ್ದರು. ಆದರೆ ಇವರ ಬೇಡಿಕೆಗಳು ಈಡೇರಿಸುವತ್ತ ಸರ್ಕಾರ ಸದನದಲ್ಲಿ ಚರ್ಚೆ ನಡೆಸಲಿಲ್ಲ. ಇದೆ ಕಾರಣಕ್ಕೆ ಅತಿಥಿ ಉಪನ್ಯಾಸಕರು ನಿತ್ಯ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮಧ್ಯೆ ಅತಿಥಿ ಉಪನ್ಯಾಸಕ ಹರ್ಷ ಶಾನುಭೋಗ್ ಅತ್ಮಹತ್ಯೆ ಪ್ರಕರಣ ಹೋರಾಟದ ದಿಕ್ಕು ಬದಲಿಸಿದೆ. ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕರಿಸಿ ಬೆಂಗಳೂರಿನವರೆಗೆ ಪಾದಯಾತ್ರೆ ನಡೆಸುತ್ತಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+