'ಶಿವಮೊಗ್ಗದಲ್ಲಿ ಈ ಬಾರಿ ಹೋರಿ ಬೆದರಿಸುವ ಸ್ಪರ್ಧೆ ನಿಷೇಧ'
ಶಿವಮೊಗ್ಗ, ಅಕ್ಟೋಬರ್ 21 : "ಜಿಲ್ಲೆಯಲ್ಲಿ ಹೋರಿ ಬೆದರಿಸುವ ಸ್ಪರ್ದೆಯನ್ನು ನಿಷೇಧಿಸಲಾಗಿದೆ. ಆಚರಿಸಲು ಮುಂದಾದವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು" ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ ಖರೆ ಎಚ್ಚರಿಕೆ ನೀಡಿದ್ದಾರೆ.
ಹೋರಿ ಬೆದರಿಸುವ ಸ್ಪರ್ಧೆಗೆ ಶಿವಮೊಗ್ಗ ಜಿಲ್ಲಾಡಳಿತ ಬ್ರೇಕ್
ಕಳೆದ ವರ್ಷ ಜಿಲ್ಲೆಯಲ್ಲಿ ಇದೇ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಇಬ್ಬರು ಸಾವನ್ನಪ್ಪಿದ್ದರಿಂದ ಇಲ್ಲಿನ ಜಿಲ್ಲಾಡಳಿತ ಈ ಕ್ರಮಕೈಗೊಂಡಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ, "ದೀಪಾವಳಿ ಹಬ್ಬದ ನಂತರ ಸಂಕ್ರಾಂತಿ ಹಬ್ಬದ ಒಳಗೆ ನಡೆಯುವ ಹೋರಿ ಬೆದರಿಸಿವ ಹಬ್ಬ ಶಿಕಾರಿಪುರ, ಶಿರಾಳಕೊಪ್ಪ ಮತ್ತು ಸೊರಬ ತಾಲೂಕಿನಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ. ಈ ಕುರಿತು ಶಿಕಾರಿಪುರದಲ್ಲಿ ಸಭೆ ನಡೆಸಿ ಗ್ರಾಮದ ಮುಖಂಡರಿಗೆ ಹಬ್ಬ ನಡೆಸದಂತೆ ಮನವರಿಕೆ ಮಾಡಿಕೊಡಲಾಗಿದೆ. ಒಂದು ವೇಳೆ ಆಚರಿಸಲು ಮುಂದಾದವರನ್ನೇ ನೇರ ಹೊಣೆ ಮಾಡಿ ಸ್ವಯಂ ಪ್ರಕರಣವನ್ನು ದಾಖಲಿಸಲಾಗುವುದು ಎಂದು ತಿಳಿಸಿದರು.
ಈ ಬಗ್ಗೆ ಕಳೆದ ವರ್ಷ ಆಯನೂರು ಆನವಟ್ಟಿ ಮತ್ತು ಸೊರಬಗಳಲ್ಲಿ ಅನಾಹುತಗಳಾಗಿತ್ತು. ಹಾಗಾಗಿ ಈ ಬಾರಿಯೂ ಹೋರಿ ಹಬ್ಬದ ಆಚರಣೆ ನಿಷೇಧಿಸಲಾಗಿದೆ ಎಂದರು.
ಏನಿದು ಹೋರಿ ಬೆದರಿಸುವ ಸ್ಪರ್ಧೆ: ರಸ್ತೆಯ ಮಧ್ಯೆ ಶೃಂಗರಿಸಲಾದ ಹೋರಿಗಳನ್ನು ಒಂದೊಂದಾಗಿ ಬಿಡಲಾಗುತ್ತದೆ. ಆ ಹೋರಿಯು ತನ್ನ ಕೊರಳಿನಲ್ಲಿರುವ ಕೊಬ್ಬರಿಯ ಮಾಲೆಯನ್ನು ಕಳೆದುಕೊಳ್ಳಬಾರದು. ಕಳೆದುಕೊಂಡರೆ ಆ ಸ್ಪರ್ಧೆಯಲ್ಲಿ ಆ ಹೋರಿ ಸೋತಂತೆ.
ಹೆಚ್ಚು ಬಾರಿ ಗೆದ್ದ ಹೋರಿಗೆ ಬಹುಮಾನ ನೀಡಲಾಗುತ್ತದೆ. ಈ ಹೋರಿಗಳನ್ನು ಹಿಡಿಯಲು ನೂರಾರು ಯುವಕರ ದಂಡೇ ಸೇರಿರುತ್ತದೆ. ಹೆಚ್ಚು ಕೊಬ್ಬರಿ ಮಾಲೆಯನ್ನು ಕಿತ್ತುಕೊಂಡವರಿಗೆ ಬಹುಮಾನ ಕೊಡಲಾಗುತ್ತದೆ.
ಸುತ್ತಮುತ್ತಲಿನ ಗ್ರಾಮದ ನೂರಾರು ಹೋರಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸುತ್ತವೆ. ರೈತರು ಎತ್ತುಗಳಿಗೆ ರಿಬ್ಬನ್, ಬಲೂನ್ ಹಾಗೂ ಕೊಬ್ಬರಿ ಕಟ್ಟಿ ಹೋರಿಯನ್ನ ಓಡಲು ಬಿಡುತ್ತಾರೆ.
ನೂರಾರು ಯುವಕರ ದಂಡು ಜಿಂಕೆಯಂತೆ ಓಡುವ ಹೋರಿಗಳನ್ನ ಹಿಡಿಯಲು ಮುಂದಾಗುತ್ತಾರೆ. ಹೋರಿಯ ಬಾಲವನ್ನ ಹಿಡಿದು ಓಡುವ ದೃಶ್ಯ ನೋಡಿಗರನ್ನ ಅಯೋ ಪಾಪಾ ಎನ್ನುವಂತೆ ಮಾಡುತ್ತದೆ.
ಮೈ ಮೇಲೆ ಜಿಗಿದು ಬರುವ ಹೋರಿಗಳಿಗೆ ಹೆದರಿ ಜೀವವನ್ನೇ ಕೈಯಲ್ಲಿ ಹಿಡಿದುಕೊಂಡು ನಿಂತಿರುವ ಪ್ರೇಕ್ಷಕರು, ಹೋರಿಗಳನ್ನ ಹಿಡಿದುಕೊಂಡು ಓಡುವ ದೃಶ್ಯಗಳು, ಹೋರಿಯ ಕಾಲಿನ ಕೆಳಗೆ ಸಿಕ್ಕಿಹಾಕಿಕೊಳ್ಳವ ಯುವಕರು, ಹೋರಿಗಳನ್ನ ಹಿಡಿದು ಕೊಬ್ಬರಿ ಮಾಲೆಯನ್ನು ಕಿತ್ತುಕೊಳ್ಳುವ ಯುವಕರು ಹೀಗೆ ಎಲ್ಲಾ ದೃಶ್ಯಗಳು ನೋಡುಗರ ಮೈ ಜುಮ್ಮೆನಿಸುತ್ತದೆ.
ಯಾರ ಕೈಗೂ ಸಿಗದೇ ಅಖಾಡದಿಂದ ಎಲ್ಲರನ್ನೂ ರಂಜಿಸಿ, ಹೆದರಿಸಿ ಮುನ್ನುಗ್ಗಿ ಬಹುಮಾನ ಪಡೆದುಕೊಳ್ಳವ ಹೋರಿಗಳು ನೋಡುಗರನ್ನು ರೋಮಾಂಚನಗೊಳಿಸುತ್ತವೆ.
ಈ ಹೋರಿ ಓಡಿಸುವ ಸ್ಪರ್ಧೆಗೆ ಆಗಮಿಸಿದ ಎಲ್ಲಾ ಪ್ರೇಕ್ಷಕರು ಶಿಳ್ಳೆ ಹೊಡೆದು ಕುಣಿದು ಕುಪ್ಪಳಿಸುತ್ತಾರೆ. ಆದರೆ, ಇದೆಲ್ಲದಕ್ಕೆ ಇದೀಗ ಜಿಲ್ಲಾಡಳಿತ ಬ್ರೇಕ್ ಹಾಕಿದ್ದು, ಜನರಲ್ಲಿ ನಿರಾಸೆ ಮೂಡಿಸಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications