ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ದೇಶದ್ರೋಹಿ ಕೃತ್ಯ ಹೆಚ್ಚಳ: ಈಶ್ವರಪ್ಪಗೆ ಬೆದರಿಕೆ ಕರೆ
ಶಿವಮೊಗ್ಗ, ಮೇ 15: ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರ ಬರುತ್ತಿದ್ದಂತೆ ದೇಶ ವಿರೋಧಿ ಚುಟುವಟಿಕೆಗಳ ಸಹ ಹೆಚ್ಚುತ್ತಿವೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ. ನನಗೆ ನೆನ್ನೆ ರಾತ್ರಿ ಕಝಕಿಸ್ತಾನ್ ನಿಂದ ಬೆದರಿಕೆ ಕರೆ ಬಂದಿದೆ ಎಂದು ಅವರು ತಿಳಿಸಿದ್ದಾರೆ.
ಜಿಲ್ಲೆಯ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಕಾಂಗ್ರೆಸ್ಗೆ ಬಹುಮತ ಬಂದಿದ್ದೇ ತಡ ದೇಶದ್ರೋಹಿ ಕೃತ್ಯಗಳು ಹೆಚ್ಚಾಗುತ್ತಿವೆ. ಮತ ಎಣಿಕೆ ದಿನ ಕಾಂಗ್ರೆಸ್ ವಿಜಯೋತ್ಸವದಂದು ಬೆಳಗಾವಿಯ ತಿಲಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪಾಕಿಸ್ತಾನ್ ಪರ ಕಿಡಿಗೇಡಿಗಳು ಘೋಷಣೆ ಕೂಗಿದ್ದಾರೆ. ಈ ಕುರಿತು ಪೊಲೀಸ್ ಅಧಿಕಾರಿಗಳೇ ದೂರು ನೀಡಿದ್ದಾರೆ. ಮಲೆನಾಡಿನ ಶಿರಸಿಯಲ್ಲಿ ಸಹ ಪಾಕ್ ಭಾವುಟ ಹಾರಾಡಿದೆ ಎಂದು ಕಾಂಗ್ರೆಸ್ ವಿರುದ್ಧ ಅವರು ಆಕ್ರೋಶ ಹೊರ ಹಾಕಿದ್ದಾರೆ.

ಬೆದರಿಕೆ ಕರೆ ಕುರಿತು ದೂರು
ಭಾನುವಾರ ತಡರಾತ್ರಿ ಕಝಕಿಸ್ತಾನ್ ದಿಂದ ಈ +7 (678)815 415 ನಂಬರ್ ನಿಂದ ಬೆದರಿಕೆ ಕರೆ ಬಂದಿದೆ. ಮೊಬೈಲ್ ಸೈಲೆಂಟ್ ಮೂಡಿನಲ್ಲಿಟ್ಟಿದ್ದೆ. ಹೀಗಾಗಿ ಕಾಲ್ ರಿಸೀವ್ ಮಾಡಿಲ್ಲ. ಇತ್ತೀಚೆಗೆ ಮಹಾರಾಷ್ಟ್ರ ವ್ಯಕ್ತಿ ಬಂಧಿಸಿದ ನಂತರ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ ಹೋಗಿತ್ತು. ಅವರಿಗೆ ಕರೆ ಮಾಡಿ ಬೆದರಿದವನ ಹೆಸರು ಶಾಹೀರ್ ಶೇಖ್. ಈ ದುಷ್ಕರ್ಮಿ ಡೈರಿಯಲ್ಲಿ ನನ್ನ ಹೆಸರು ಸಹ ಇರುವುದನ್ನು ಪೊಲೀಸ್ ಮೂಲಗಳು ದೃಢಪಡಿಸಿದ್ದವು ಎಂದು ಅವರು ವಿವರಿಸಿದರು.
ಕ್ಷೇತ್ರದಲ್ಲಿನ ನಮ್ಮ ಪಕ್ಷ ಸಂಘಟನೆ, ಕೇಂದ್ರ ನಾಯಕರ ರೋಡ್ ಶೋ, ಇನ್ನಿತರ ಕಾರ್ಯಕ್ರಮಗಳಿಂದಾಗಿ ಇಲ್ಲಿ ಜನರು ಜಾತಿ ಬೇಧ ಮಾಡದೇ ಗೆಲುವು ನೀಡಿದ್ದಾರೆ ಎಂದರು.
2018ರಲ್ಲಿ ಶೇಕಡಾ 36 ರಷ್ಟು ಮತ ಬಂದಿತ್ತು. ಈ ಸಲ ಶೇಕಡಾ 36.4 ರಷ್ಟು ಮತ ಬಂದಿದೆ. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಮತದಾರರು ಬೆಂಬಲಿಸಿದ್ದಾರೆ. ಮುಂಬರುವ ದಿನಗಳಲ್ಲಿ ನಾವು (ಬಿಜೆಪಿ) ಕಾವಲು ನಾಯಿ ರೀತಿಯಲ್ಲಿ ವಿಪಕ್ಷದಲ್ಲಿದ್ದುಕೊಂಡು ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ
ಬಿಜೆಪಿಗೆ ಕೋಮುವಾದಿ ಪಕ್ಷ ಎನ್ನುವ ಸಿದ್ದರಾಮಯ್ಯನವರ ಪರ ಕುರುಬರು ಮತ್ತು ಡಿಕೆ ಶಿವಕುಮಾರ್ ಅವರ ಪರ ಒಕ್ಕಲಿಗರು ಲಾಬಿ ಮಾಡುತ್ತಿದ್ದಾರೆ. ಅಂದರೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ಜಾತಿವಾದ ರಾಜಕರಾಣ ಮಾಡುತ್ತಿದ್ದಾರೆ ಎಂಬದು ಇದರಿಂದ ತಿಳಿದುಬರುತ್ತದೆ ಎಂದು ಹರಿಹಾಯ್ದರು.
ಜೆಡಿಎಸ್ ಅಭ್ಯರ್ಥಿ ವಿರುದ್ಧ ಚಿಕ್ಕಮಗಳೂರಿನ ಭೋಜೇಗೌಡ ಕೆಲಸ ಮಾಡಿದ್ದು ಅವರು ಇಂದು ಹಾಲಿನ ಅಭಿಷೇಕ ಮಾಡಿಸಿಕೊಂಡಿದ್ದಾರೆ. ಅವರ ಈ ವರ್ತನೆ ಲಜ್ಜೆಗೇಡಿತನದಿಂದ ಕೂಡಿದೆ. ಇದೆಲ್ಲವನ್ನು ಜೆಡಿಎಸ್ ನಾಯಕರು ಹೇಗೆ ಸಹಿಸಿಕೊಳ್ಳುತ್ತಾರೋ ಗೊತ್ತಿಲ್ಲ ಎಂದು ತಿಳಿಸಿದರು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications