ರಂಜಾನ್ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ: ಈಜಲು ಹೋಗಿದ್ದ ಮೂವರು ಬಾಲಕರು ನೀರು ಪಾಲು
ಶಿವಮೊಗ್ಗ, ಏಪ್ರಿಲ್ 02: ಇನ್ನೇನು ಕೆಲವೇ ದಿನಗಳಲ್ಲಿ ರಂಜಾನ್ ಹಬ್ಬ ಬರಲಿದ್ದು, ಈ ಸಂಭ್ರದಲ್ಲಿದ್ದ ತೀರ್ಥಹಳ್ಳಿಯ ಗ್ರಾಮವೊಂದರ ಮನೆಯಲ್ಲಿ ಇದೀಗ ಸೂತಕದ ಛಾಯೆ ಆವರಿಸಿದೆ.
ರಂಜಾನ್ ಉಪವಾಸ ಮುಗಿಸಿ ಸ್ನೇಹಿತರ ಜೊತೆ ಸೇರಿ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲಾದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತುಂಗಾ ನದಿಯ ರಾಮ ಮಂಟಪದ ಬಳಿ ನಡೆದಿದೆ. ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಾದ ರಫನ್, ಇಯನ್ ಮತ್ತು ಅರ್ಫದ್ ಮೃತ ಬಾಲಕರು ಎಂದು ಗುರುತಿಸಲಾಗಿದೆ.

ನಿನ್ನೆ ರಂಜಾನ್ ಉಪವಾಸ ಮುಗಿಸಿ ಮೂವರು ಜೊತೆಯಾಗಿ ತುಂಗಾ ನದಿಗೆ ರಾಮ ಮಂಟಪದ ಬಳಿ ಈಜಲು ತೆರಳಿದ್ದಾರೆ. ಈ ವೇಳೆ ಆಯತಪ್ಪಿ ಒಬ್ಬರಾದ ಮೇಲೆ ಒಬ್ಬರು ನೀರಿನಲ್ಲಿ ಮುಳುಗಿ ನೀರು ಪಾಲಾಗಿದ್ದಾರೆ. ಪೋಷಕರು ಬಾಲಕರ ಬಗ್ಗೆ ಹುಡುಕಾಟ ನಡೆಸಿದಾಗ ಈ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಕೂಡಲೇ ಸ್ಥಳೀಯರು ಘಟನಾ ಸ್ಥಳಕ್ಕೆ ತೆರಳಿದ್ದಾರೆ.
ಇತ್ತ ಸ್ಥಳೀಯ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ಕಾರ್ಯಾಚರಣೆ ನಡೆಸಿ ಮೂವರು ಬಾಲಕರ ಮೃತದೇಹವನ್ನು ಹೊರತೆಗೆದಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ. ರಫನ್, ಇಯನ್ ಮತ್ತು ಅರ್ಫದ್ ಮೃತ ದೇಹಗಳನ್ನು ಹೊರ ತೆಗೆಯುತ್ತಿದ್ದಂತೆ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ಸಂಬಂಧ ತೀರ್ಥಹಳ್ಳಿ ಪೂಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ












Click it and Unblock the Notifications