ಧುಮ್ಮಿಕ್ಕುತ್ತಿರುವ ಜೋಗದ ವೈಭವ ನೋಡಲು ಮುಗಿಬಿದ್ದ ಪ್ರವಾಸಿಗರು
ಶಿವಮೊಗ್ಗ, ಜುಲೈ.15: ಜೋಗ ಜಲಪಾತ ಮತ್ತೆ ಧುಮ್ಮಿಕ್ಕುತ್ತಿದೆ. ಕಳೆದ ವರ್ಷ ಮಳೆಯಿಲ್ಲದೆ ಬರಡಾಗಿ ನಿಂತಿದ್ದ ಜೋಗದ ಗುಂಡಿ ಈ ವರ್ಷ ತನ್ನ ವೈಭವ ಮರಳಿ ಪಡೆದಿದ್ದು, ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಹೌದು, ಜೂನ್ ಮತ್ತು ಜುಲೈ ತಿಂಗಳ ಆರಂಭದಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗಿದ್ದು, ನದಿಗಳೆಲ್ಲ ತುಂಬಿ ಹರಿಯುತ್ತಿವೆ. 831 ಅಡಿಗಳ ಮೇಲಿಂದ ಧುಮ್ಮಿಕ್ಕುವ ಜೋಗ ಜಲಪಾತ ನೋಡಲು ಪ್ರವಾಸಿ ಮುಗಿಬೀಳುತ್ತಿದ್ದಾರೆ.
ದಿನದಿಂದ ದಿನಕ್ಕೆ ಪ್ರವಾಸಿಗರ ಸಂಖ್ಯೆ ಏರಿಕೆಯಾಗುತ್ತಿದ್ದು, ಕಳೆದ ಒಂದು ವಾರದಲ್ಲಿ ಅಂದಾಜು 30 ಸಾವಿರಕ್ಕೂ ಅಧಿಕ ಪ್ರವಾಸಿಗರು ಜೋಗಕ್ಕೆ ಭೇಟಿ ನೀಡಿದ್ದಾರೆ. ಶನಿವಾರ ಮತ್ತು ಭಾನುವಾರ ಸಂದರ್ಭದಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಜೋಗವನ್ನು ಕಣ್ತುಂಬಿಕೊಳ್ಳಲು ರಾಜ್ಯವಲ್ಲದೇ ಬೇರೆ ರಾಜ್ಯ ಮತ್ತು ದೇಶಗಳಿಂದಲೂ ಬರುತ್ತಿದ್ದಾರೆ.
ಮುಂಗಾರು ಮಳೆ ಭೋರ್ಗರೆದು ಸ್ವಲ್ಪ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವುದು ಮಾತ್ರವಲ್ಲ, ಪ್ರವಾಸಿಗರಿಗೂ ಜೋಗ ಜಲಪಾತ ವೀಕ್ಷಿಸಲು ಉತ್ತಮ ವಾತಾವರಣ ಕಲ್ಪಿಸಿಕೊಟ್ಟಿದೆ. ಮತ್ತೆ ಇಂಥ ವೈಭೋಗ ನೋಡಲು ಸಿಗುವುದೋ ಇಲ್ಲವೋ ಎಂದು ಪ್ರವಾಸಿಗರು ಜೋಗದತ್ತ ಪಯಣ ಬೆಳೆಸುತ್ತಿದ್ದಾರೆ. ಕಳೆದ ವರ್ಷ ಮುಂಗಾರು ದುರ್ಬಲವಾದ ಕಾರಣ ಜಲಪಾತಕ್ಕೆ ರಂಗೇರಿರಲಿಲ್ಲ.

ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಈ ವರ್ಷ ಸಾಕಷ್ಟು ಮಳೆಯಾಗಿದ್ದು, ಶರಾವತಿ ಧುಮ್ಮಿಕ್ಕಿ ಹರಿಯುತ್ತಿದ್ದಾಳೆ. ಲಿಂಗನಮಕ್ಕಿ ಅಣೆಕಟ್ಟೆಯಲ್ಲಿ ನೀರಿನ ಪ್ರಮಾಣ ಹೆಚ್ಚುತ್ತಿದೆ. ಈ ವರ್ಷ ಜುಲೈ ತಿಂಗಳ ಅಂತ್ಯದಲ್ಲಿ ಜಲಪಾತದ ವೈಭವ ಮತ್ತಷ್ಟು ಮರುಕಳಿಸುವ ಸಾದ್ಯತೆ ಇದೆ. ಕಳೆದ ಒಂದು ವಾರದಿಂದ ಸುಮಾರು 700-800 ಮಿಮಿ ಮಳೆಯಾದ ಕಾರಣ ಲಿಂಗನಮಕ್ಕಿ ಜಲಾನಯನ ಪ್ರದೇಶಗಳು ಮೈದುಂಬಿಕೊಂಡು ಭೋರ್ಗರೆಯುತ್ತಿದೆ.

ಅದರಂತೆ ಜೋಗ ಈಗ ನಯನ ಮನೋಹರ ದೃಶ್ಯಕ್ಕೆ ಸಾಕ್ಷಿಯಾಗಿದೆ. ಈ ನಯನ ಮನೋಹರ ದೃಶ್ಯ ನೋಡಲು ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ಸತತ ಮಳೆಯಿಂದಾಗಿ ಬೆಂಗಳೂರು, ದಾವಣಗೆರೆ, ಹುಬ್ಬಳ್ಳಿ, ಶಿರಸಿ, ಶಿವಮೊಗ್ಗ, ಗದಗ, ಬಾಗಲಕೋಟೆ ರಾಯಚೂರು ಮೊದಲಾದ ಭಾಗಗಳಿಂದ ಪ್ರವಾಸಿಗರು ದಂಡು ಹರಿದು ಬರುತ್ತಿದೆ. ಅಷ್ಟೇ ಅಲ್ಲ, ಸತತ ಮಳೆಯಿಂದಾಗಿ ಜೋಗದಲ್ಲಿ ಜಾರುವಿಕೆ ಹೆಚ್ಚಾಗಿದ್ದು, ಪ್ರವಾಸಿಗರು ಬಹಳ ಎಚ್ಚರಿಕೆಯಿಂದ ಓಡಾಡಬೇಕಿದೆ.
-
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications