ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮ: ಪ್ರವಾಸಿಗರ ಸಂಖ್ಯೆ ಹೆಚ್ಚಳ
ಶಿವಮೊಗ್ಗ, ಏಪ್ರಿಲ್ 01: ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿ ವಿವಿಧ ಪ್ರವಾಸಿ ತಾಣಗಳಿವೆ. ಇವುಗಳಲ್ಲಿ ಶಿವಮೊಗ್ಗ ನಗರದ ಹತ್ತಿರವಿರುವ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದ ಸಹ ಒಂದು. ಪ್ರತಿದಿನ ನೂರಾರು ಜನರು ಇಲ್ಲಿಗೆ ಭೇಟಿ ನೀಡುತ್ತಾರೆ. ದೇಶ-ವಿದೇಶದ ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಿದ್ದು, ಪ್ರವಾಸಿಗರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಲೇ ಇದೆ.
ಕರ್ನಾಟಕದ ಮೃಗಾಲಯ ಪ್ರಾಧಿಕಾರದ ಅಧೀನದಲ್ಲಿ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮ ಕಾರ್ಯ ನಿರ್ವಹಣೆ ಮಾಡುತ್ತಿದೆ. ಮೈಸೂರಿನಲ್ಲಿ ಮೃಗಾಲಯ ಮಾತ್ರವಿದೆ. ಆದರೆ ತ್ಯಾವರೆಕೊಪ್ಪದಲ್ಲಿ ಹುಲಿ ಮತ್ತು ಸಿಂಹಧಾಮದ ಜೊತೆಗ ಸಫಾರಿಯೂ ಇದ್ದು, ಹೆಚ್ಚು ಪ್ರವಾಸಿಗರನ್ನು ಇದು ಆಕರ್ಷಿಸುತ್ತಿದೆ.

ಮಾಹಿತಿಗಳ ಪ್ರಕಾರ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮಕ್ಕೆ ವಾರ್ಷಿಕ 3 ಲಕ್ಷ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ವಾರ್ಷಿಕ 5 ಕೋಟಿ ರೂ. ಆದಾಯ ಬರುತ್ತಿದ್ದು, ಈ ಹಣದಲ್ಲಿಯೇ ಇಲ್ಲಿನ ಪ್ರಾಣಿಗಳ ಆಹಾರ, ಔಷಧ, ಸಿಬ್ಬಂದಿಗಳ ವೇತನದ ಖರ್ಚು ಭರಿಸಲಾಗುತ್ತಿದೆ.
ಪ್ರತ್ಯೇಕ ಬಜೆಟ್: ಕರ್ನಾಟಕದ ಮೃಗಾಲಯ ಪ್ರಾಧಿಕಾರ ಇದರ ನಿರ್ವಹಣೆ ಮಾಡುತ್ತಿದೆ. ಆದರೆ ತ್ಯಾವರೆಕೊಪ್ಪದಲ್ಲಿ ಹುಲಿ ಮತ್ತು ಸಿಂಹಧಾಮಕ್ಕೆ ವಾರ್ಷಿಕ ಬಜೆಟ್ ಮಾಡಿಕೊಂಡು ಕಾರ್ಯ ನಿರ್ವಹಣೆ ಮಾಡಲಾಗುತ್ತಿದೆ. ಇಲ್ಲಿಗೆ ಆಗಮಿಸುವ ಪ್ರವಾಸಿಗರು ಸಫಾರಿ ಹೋಗಿ ಹುಲಿ ಮತ್ತು ಸಿಂಹವನ್ನು ವೀಕ್ಷಣೆ ಮಾಡುವುದು ಇಷ್ಟಪಡುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದ ಸಿಇಒ ಅಮರಾಕ್ಷರ, "ಈ ವರ್ಷ ಹುಲಿ ಮತ್ತು ಸಿಂಹಧಾಮಕ್ಕೆ 3 ಲಕ್ಷ ಪ್ರವಾಸಿಗರು ಆಗಮಿಸಿದ್ದಾರೆ. ಇದರಿಂದಾಗಿ 5 ಕೋಟಿ ರೂ. ಆದಾಯ ಬಂದಿದೆ. ಸಫಾರಿ ಹೋಗುವುದರಿಂದ ಹತ್ತಿರದಿಂದ ಪ್ರಾಣಿಗಳನ್ನು ನೋಡಬಹುದು. ಅದಕ್ಕಾಗಿ ಹೆಚ್ಚಿನ ಜನರು ಇಲ್ಲಿಗೆ ಆಗಮಿಸುತ್ತಿದ್ದು, ಆದಾಯವೂ ಹೆಚ್ಚಾಗುತ್ತಿದೆ" ಎಂದು ತಿಳಿಸಿದ್ದಾರೆ.
"ಈ ಹುಲಿ ಮತ್ತು ಸಿಂಹಧಾಮ ನೈಸರ್ಗಿಕವಾದ ಕಾಡಿನಲ್ಲಿದೆ. ಆದ್ದರಿಂದ ಜನರನ್ನು ಹೆಚ್ಚಾಗಿ ಆಕರ್ಷಿಸುತ್ತಿದೆ. ಇಲ್ಲಿ ಹೊಸ ಮಾದರಿ ಗೇಜ್ಗಳನ್ನು ಮಾಡಲಾಗುತ್ತಿದೆ. ಕೇರಳದಿಂದ ಗರಿಯಾಲ್ ಮತ್ತು ರಿಯಾ ಎಂಬ ಪ್ರಾಣಿಯನ್ನು ತರಲಾಗಿದೆ. ಮಹಾರಾಷ್ಟ್ರ ಮತ್ತು ಮಧ್ಯ ಪ್ರದೇಶದಿಂದ ಪ್ರಾಣಿಗಳನ್ನು ವಿನಿಯಮ ಮಾಡಿಕೊಳ್ಳುವ ಕುರಿತು ಚರ್ಚೆಗಳು ನಡೆಯುತ್ತಿವೆ" ಎಂದು ಹೇಳಿದ್ದಾರೆ.
ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ಮೊದಲು ಜಿಂಕೆ ಸಫಾರಿ ಇದೆ. ನಂತರ ಹುಲಿ ಮತ್ತು ಸಿಂಹವನ್ನು ನೋಡಬಹುದು. ಸಫಾರಿಯ ಅಂತಿಮದಲ್ಲಿ ಕಾಡುಕೋಣವನ್ನು ಪ್ರವಾಸಿಗರು ವೀಕ್ಷಣೆ ಮಾಡಲು ಅನುಕೂಲವಿದೆ.
ನೈಸರ್ಗಿಕವಾಗಿ ಬೆಳೆದ ಕಾಡಿನಲ್ಲಿಯೇ ಇಲ್ಲಿ ಪ್ರಾಣಿಗಳನ್ನು ಸಾಕಲಾಗುತ್ತಿದೆ. ಹುಲಿ ಮತ್ತು ಸಿಂಹಧಾಮದಲ್ಲಿ ಪ್ರಾಣಿಗಳಿಗೆ ನೀರು ಒದಗಿಸಲು 10 ಕೆರೆಗಳನ್ನು ಅಭಿವೃದ್ಧಿಗೊಳಿಸಲಾಗಿದೆ. ಇದರಿಂದಾಗಿ ಕನಿಷ್ಠ 5 ಕೋಟಿ ಲೀಟರ್ ನೀರಿನ ಸಂಗ್ರಹವಾಗುತ್ತಿದೆ.
ಇದು ಶಿವಮೊಗ್ಗ ನಗರಕ್ಕೆ ಹತ್ತಿರದಲಿದ್ದು, ಪ್ರವಾಸಿಗರು ಭೇಟಿ ನೀಡಲು ಅನುಕೂಲವಾದ ಸ್ಥಳದಲ್ಲಿದೆ. ಶಿವಮೊಗ್ಗ ತಾಲೂಕು ತ್ಯಾವರೆಕೊಪ್ಪ ಗ್ರಾಮದಲ್ಲಿ ಇದು ಇದ್ದು, ಶಿವಮೊಗ್ಗ ನಗರದಿಂದ ಸಾಗರ ರಸ್ತೆಯ ಮೂಲಕ 10 ಕಿ. ಮೀ. ಸಾಗಬೇಕು. ಸಾಗರ, ಹೊಸನಗರ, ಆಯನೂರು ಕಡೆ ಸಂಚಾರ ನಡೆಸುವ ಬಸ್ಗಳು ತ್ಯಾವರೆಕೊಪ್ಪದಲ್ಲಿ ನಿಲುಗಡೆ ಹೊಂದಿದ್ದು, ಸಾರಿಗೆ ಸಂಪರ್ಕ ಉತ್ತಮವಾಗಿದೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications