ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭದ್ರಾವತಿಯ ಯುಜಿಡಿ ಶುದ್ಧೀಕರಣ ಘಟಕದಲ್ಲಿ ಎರಡು ಮೃತದೇಹಗಳು ಪತ್ತೆ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಜೂನ್ 14: ಭದ್ರಾವತಿಯ ಸಿದ್ಧರೂಢ ಬಡಾವಣೆಯಲ್ಲಿ ಶೃಂಗೇರಿ ಶಂಕರ ಮಠದ ಬಳಿಯಿರುವ ಯುಜಿಡಿ ಶುದ್ಧೀಕರಣ ಘಟಕದಲ್ಲಿ ಎರಡು ಮೃತದೇಹಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ.

Recommended Video

ಯಡಿಯೂರಪ್ಪನನ್ನ ಅಲುಗಾಡಿಸಲು ಯಾರಿಂದಲೂ ಆಗಲ್ಲ | State Government is safe dont worry : M P Renukacharya

ಓರ್ವ ಪುರುಷ ಹಾಗೂ ಓರ್ವ ಮಹಿಳೆಯ ಮೃತದೇಹಗಳು ಈ ಯುಜಿಡಿಯ ಬಾವಿಯಲ್ಲಿ ಪತ್ತೆಯಾಗಿದ್ದು, ಮಹಿಳೆಯನ್ನು ಹಳೆನಗರ ನಿವಾಸಿ ಭಾಗ್ಯಮ್ಮ (40) ಎಂದು ಗುರುತಿಸಲಾಗಿದೆ. ಆದರೆ ಪುರುಷನ ದೇಹದ ಗುರುತು ಇನ್ನೂ ಪತ್ತೆಯಾಗಿಲ್ಲ. ಈ ಇಬ್ಬರೂ ಸಾವನ್ನಪ್ಪಿ ನಾಲ್ಕೈದು ದಿನಗಳು ಕಳೆದಿರಬಹುದು ಎನ್ನಲಾಗಿದೆ. ಇಬ್ಬರ ಮೃತದೇಹವೂ ನಿನ್ನೆ ರಾತ್ರಿ ಪತ್ತೆಯಾಗಿದೆ. ಹಳೇನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Two Dead Bodies Found In Ugd Purification Plant Near Sringeri Sankara Mutt Of Bhadravathi

 ಹಾಸನ; ಸುತ್ತಾಡಲು ಹೋಗಿದ್ದ ನವದಂಪತಿ ಶವವಾಗಿ ಪತ್ತೆ ಹಾಸನ; ಸುತ್ತಾಡಲು ಹೋಗಿದ್ದ ನವದಂಪತಿ ಶವವಾಗಿ ಪತ್ತೆ

ಮೃತದೇಹಗಳನ್ನು ಪರಿಶೀಲನೆ ಮಾಡಲಾಗಿದೆ. ಈ ಯುಜಿಡಿ ಶುದ್ಧೀಕರಣ ಘಟಕದಲ್ಲಿ ಅನೈತಿಕ ಚಟುವಟಿಕೆ, ಕುಡಿತ ಹಾಗೂ ಇತರೆ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆಯೂ ಮಾತುಗಳು ಕೇಳಿಬಂದಿವೆ.

English summary
Two dead bodies found in UGD purification plant near Sringeri Sankara Mutt of bhadravathi
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X