ಶಿವಮೊಗ್ಗ ಮೃಗಾಲಯಕ್ಕೆ ಬನ್ನೇರುಘಟ್ಟದಿಂದ ನೂತನ ಅತಿಥಿಗಳ ಆಗಮನ
ಶಿವಮೊಗ್ಗ, ಜುಲೈ 16: ನೈಸರ್ಗಿಕ ಕಾಡು ಹೊಂದಿರುವ ಶಿವಮೊಗ್ಗದ ತ್ಯಾವರೇಕೊಪ್ಪ ಮೃಗಾಲಯಕ್ಕೆ ನೂತನ ಅತಿಥಿಗಳ ಆಗಮನವಾಗಿದೆ. ಬನ್ನೇರುಘಟ್ಟ ಅಭಯಾರಣ್ಯದಿಂದ ಎರಡು ಸಿಂಹಗಳನ್ನು ಸಫಾರಿಗೆ ತರಲಾಗಿದೆ. ಇದರಿಂದ ಸಫಾರಿಯಲ್ಲಿ ಸಿಂಹಗಳ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ.
ಏಳು ವರ್ಷದ ಸುಚಿತ್ರಾ ಮತ್ತು ಯಶ್ವಂತ್ ಎಂಬ ಹೆಸರಿನ ಎರಡು ಸಿಂಹಗಳನ್ನು ಶಿವಮೊಗ್ಗ ಮೃಗಾಲಯಕ್ಕೆ ತರಲಾಗಿದ್ದು, ದೀರ್ಘಕಾಲದ ಒಡನಾಟ ಹೊಂದಿರುವುದರಿಂದ ಇವರೆಡು ಸಿಂಹಗಳನ್ನು ಒಂದೆ ಕ್ರಾಲ್ನಲ್ಲಿ ಇಡಲಾಗಿದೆ. ಕೆಲ ದಿನಗಳ ಬಳಿಕ ಇವುಗಳು ಸಫಾರಿಯಲ್ಲಿ ತಿರುಗಾಡಲು ಬಿಡಲಾಗುತ್ತದೆ.

ಸಂತಾನಾಭಿವೃದ್ಧಿಗೆ ಪೂರಕ
"1998ರಲ್ಲಿ ಸಿಂಹಧಾಮದ ಆರಂಭದಲ್ಲಿ ಮೈಸೂರು ಮೃಗಾಲಯದಿಂದ ನಾಲ್ಕು ಸಿಂಹಗಳನ್ನು ತರಲಾಗಿತ್ತು. 2016ರಲ್ಲಿ ಮಾನಿನಿ ಎಂಬ ಸಿಂಹ ಕಿಡ್ನಿ ವೈಫಲ್ಯದಿಂದ ಮೃತಪಟ್ಟಿತು. ಪ್ರಸ್ತುತ ಆರ್ಯ(12), ಮಾನ್ಯ (5), ಸುಷ್ಮಿತಾ ಮತ್ತು ಸರ್ವೇಶ್ (8) ಸಿಂಹಗಳು ಇದ್ದಾವೆ. ಈಗ ಸುಚಿತ್ರಾ ಮತ್ತು ಯಶ್ವಂತ್ ಸಿಂಹಗಳು ಬಂದಿರುವುದರಿಂದ ಸಂತಾನಾಭಿವೃದ್ಧಿಗೆ ಪೂರಕವಾಗಲಿದೆ,'' ಎಂದು ಮೃಗಾಲಯ ಅಧಿಕಾರಿಗಳು ಹೇಳುತ್ತಾರೆ.

ಗುಜರಾತ್ನಿಂದ ಸಿಂಹ ತರಲು ಪ್ರಯತ್ನ
ಗುಜರಾತಿನ ಗಿರ್ ಅರಣ್ಯದಿಂದ ಎರಡು ಸಿಂಹಗಳನ್ನು ತ್ಯಾವರೇಕೊಪ್ಪ ಸಿಂಹಧಾಮಕ್ಕೆ ತರಲು ಪ್ರಯತ್ನಿಸಲಾಯಿತು. ಅಧಿಕಾರಿಗಳು ಗಿರ್ ಅರಣ್ಯಕ್ಕೆ ತೆರಳಿ ಚರ್ಚೆ ಮಾಡಿದ್ದರು. ಪತ್ರ ವ್ಯವಹಾರವನ್ನು ನಡೆಸಲಾಗಿತ್ತು. ಆದರೆ ಗಿರ್ ಅರಣ್ಯದ ಅಧಿಕಾರಿಗಳು ವಿಶೇಷ ತಳಿಯ ಸಿಂಹಗಳು ಎಕ್ಸ್ಚೇಂಜ್ಗೆ ಬೇಕು ಎಂದು ಕೇಳಿದರು. ಆದರೆ ವಿಶೇಷ ತಳಿಗಳು ಇಲ್ಲದಿರುವುದರಿಂದ ಈ ಪ್ರಯತ್ನ ಸಾಧ್ಯವಾಗಿರಲಿಲ್ಲ.
ಈಗ ಬನ್ನೇರುಘಟ್ಟ ಅಭಯಾರಣ್ಯದಿಂದ ನೂತನ ಸಿಂಹಗಳು ಬಂದಿರುವುದರಿಂದ ಸಫಾರಿಗೆ ತೆರಳುವ ಪ್ರವಾಸಿಗರಿಗೆ ಮತ್ತಷ್ಟು ಖುಷಿ ಸಿಗಲಿದೆ. ಸಿಂಹಗಳನ್ನು ಇನ್ನಷ್ಟು ಹತ್ತಿರದಿಂದ ನೋಡುವ ಅವಕಾಶವು ಲಭ್ಯವಾಗಲಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications