ಮಂಗನ ಕಾಯಿಲೆ ಬಳಿಕ ಶಿವಮೊಗ್ಗದಲ್ಲಿ ಹಂದಿ ಜ್ವರದ ಸೋಂಕು ಪತ್ತೆ
ಶಿವಮೊಗ್ಗ, ಫೆಬ್ರವರಿ 26 : ಮಂಗನ ಕಾಯಿಲೆ ಭೀತಿಯ ನಡುವೆಯೇ ಶಿವಮೊಗ್ಗದಲ್ಲಿ ಎಚ್1 ಎನ್1 ಕಾಣಿಸಿಕೊಂಡಿದೆ. ನಾಲ್ಕು ಜನರಲ್ಲಿ ಶಂಕಿತ ಸೋಂಕು ಕಾಣಿಸಿಕೊಂಡಿದ್ದು, ಇಬ್ಬರಲ್ಲಿ ವೈರಸ್ ಇರುವುದು ಖಚಿತವಾಗಿದೆ.
ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ಎಚ್ 1 ಎನ್1 ಸೋಂಕು ಕಾಣಿಸಿಕೊಂಡಿದೆ. ಜಿಲ್ಲಾ ಆರೋಗ್ಯಾಧಿಕಾರಿಗಳು ಈ ಕುರಿತು ಮಾಹಿತಿ ನೀಡಿದ್ದು, ನಾಲ್ವರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಇಬ್ಬರಲ್ಲಿ ಸೋಂಕು ಇರುವುದು ದೃಡಪಟ್ಟಿದೆ ಎಂದು ಹೇಳಿದ್ದಾರೆ.
ವಜನಲಕ್ಷ್ಮೀ (40), ಹೇಮಾವತಿ (39) ಇಬ್ಬರಲ್ಲಿ ಹಂದಿ ಜ್ವರದ ಸೋಂಕು ಇರುವುದು ಖಚಿತವಾಗಿದೆ. 6 ಮತ್ತು 7 ವರ್ಷದ ಇಬ್ಬರು ಮಕ್ಕಳ ರಕ್ತವನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಎಲ್ಲರೂ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.

ಹಂದಿ ಜ್ವರದ ಸೋಂಕು ಪತ್ತೆಯಾದ ಪ್ರಕರಣವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ. ರೋಹ ಹರಡದಂತೆ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲೆಯ ಬೇರೆ ತಾಲೂಕುಗಳಲ್ಲಿ ಸೋಂಕು ಕಾಣಿಸಿಕೊಂಡಿದೆಯೇ? ಎಂದು ಜಿಲ್ಲಾಡಳಿತ ಪರಿಶೀಲನೆ ನಡೆಸುತ್ತಿದೆ.
ಡಿಎಸ್ಓ ಬಿ.ಎಸ್.ಶಂಕ್ರಪ್ಪ ಅವರು ಈ ಕುರಿತು ಮಾಹಿತಿ ನೀಡಿದ್ದು, 'ಎರಡು ಎಚ್1 ಎನ್ 1 ಪ್ರಕರಣಗಳು ದೃಢಪಟ್ಟಿವೆ. ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಣೆ ಮಾಡಿದೆ. ಶಂಕಿತರು ಪತ್ತೆಯಾದರೆ ತಕ್ಷಣ ಮಾಹಿತಿ ನೀಡುವಂತೆ ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ' ಎಂದು ಹೇಳಿದ್ದಾರೆ.
'ಜಿಲ್ಲೆಯಲ್ಲಿ ಎಚ್ 1 ಎನ್1 ರೋಗಿಗಳಿಗೆ ನೀಡುವಷ್ಟು ವಿವಿಧ ಡೋಸೆಜ್ಗಳ ಮಾತ್ರೆಗಳು ಲಭ್ಯವಿದೆ. ಜನರು ಆತಂಕಗೊಳ್ಳುವ ಅಗತ್ಯವಿಲ್ಲ. ಸೋಂಕು ಇರುವ ರೋಗಿಗಳು ಕಂಡು ಬಂದರೆ ಪ್ರತ್ಯೇಕವಾದ ವಾರ್ಡ್ ವ್ಯವಸ್ಥೆ ಮಾಡುವಂತೆ ಎಲ್ಲಾ ಆಸ್ಪತ್ರೆಗಳಿಗೆ ಸೂಚನೆ ನೀಡಲಾಗಿದೆ' ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯಾದ್ಯಂತ ಮಂಗನ ಕಾಯಿಲೆ ಭೀತಿ ಇದೆ. ಸಾಗರ ತಾಲೂಕಿನಲ್ಲಿ 5ಕ್ಕೂ ಹೆಚ್ಚು ಜನರು ಇದರಿಂದಾಗಿ ಮೃತಪಟ್ಟಿದ್ದಾರೆ. ಈಗ ಹಂದಿ ಜ್ವರದ ಸೋಂಕು ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಮೂಡಿಸಿದೆ.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ











Click it and Unblock the Notifications