ಶಿವಮೊಗ್ಗ; ನಾಗರಹಾವು ಹಿಡಿಯುತ್ತಿದ್ದಂತೆ ಮಹಿಳೆಯರ ಮೈಮೇಲೆ ಬಂದ ನಾಗ ದೇವತೆ?
ಶಿವಮೊಗ್ಗ, ಸೆಪ್ಟೆಂಬರ್ 30; ನಾಗರ ಹಾವು ಹಿಡಿಯಲು ಹೋದಾಗ ಇಬ್ಬರು ಮಹಿಳೆಯರ ಮೈಮೇಲೆ ದೇವರು ಬಂದಿದೆ. ನಾಗರ ಹಾವನ್ನು ಹಿಡಿಯಬಾರದು, ಅದನ್ನು ಅಲ್ಲಿಯೆ ಬಿಡಬೇಕು ಎಂದು ಉರಗ ರಕ್ಷಕ ಸ್ನೇಕ್ ಕಿರಣ್ ಅವರಿಗೆ ಸೂಚನೆ ನೀಡಿದ ಘಟನೆ ಶಿವಮೊಗ್ಗದ ಹೊನ್ನಾಳಿ ರಸ್ತೆಯ ಫ್ಲೈ ಓವರ್ ಪಕ್ಕದ ಚೌಡೇಶ್ವರಿ ಕಾಲೋನಿಯಲ್ಲಿರುವ ಶಂಕರ ರೇಂಜ್ ನರ್ಸರಿಯಲ್ಲಿ ಸಂಭವಿಸಿದೆ.
ನರ್ಸರಿಯಲ್ಲಿ ಹಾವು ಕಾಣಿಸಿಕೊಂಡಿದೆ ಎಂದು ನಾಗರಾಜ್ ಎಂಬುವವರು ಶಿವಮೊಗ್ಗದ ಉರಗ ರಕ್ಷಕ ಸ್ನೇಕ್ ಕಿರಣ್ ಅವರಿಗೆ ಕರೆ ಮಾಡಿದ್ದರು. ನರ್ಸರಿಯಲ್ಲಿ ಹಾವು ಕಾಣಿಸಕೊಂಡ ಜಾಗದಲ್ಲಿ ಹುಡುಕಿದಾಗ ಸುಮಾರು ಒಂದು ಅಡಿ ಉದ್ದದ ನಾಗರ ಹಾವು ಸಿಕ್ಕಿದೆ. ಸ್ನೇಕ್ ಕಿರಣ್ ಅವರು ಹಾವನ್ನು ರಕ್ಷಣೆ ಮಾಡಿ, ಕಾಡಿಗೆ ಕೊಂಡೊಯ್ದು ಬಿಡಲು ಸಿದ್ಧವಾಗಿದ್ದರು.
ಸ್ನೇಕ್ ಕಿರಣ್ ಅವರು ಹಾವನ್ನು ರಕ್ಷಣೆ ಮಾಡುವುದನ್ನು ನರ್ಸರಿಯಲ್ಲಿ ಕೆಲಸ ಮಾಡುವ ಮಹಿಳೆಯರು ಸುತ್ತುವರೆದು ನೋಡುತ್ತಿದ್ದರು. ಈ ವೇಳೆ ಮಹಿಳೆಯರ ಗುಂಪಿನಲ್ಲಿದ್ದ ವಾಸುಕಿ ಮತ್ತು ನೇತ್ರಾ ಎಂಬ ಮಹಿಳೆಯರ ವರ್ತನೆ ಇದ್ದಕ್ಕಿದ್ದಂತೆ ಬದಲಾಗಿದೆ. ಇಬ್ಬರು ಜೋರಾಗಿ ಕೂಗಿಕೊಂಡು, ಹಾವಿನಂತೆ ವರ್ತಿಸುತ್ತಾ, ನೆಲದ ಬಿದ್ದು ಹೊರಳಾಡಿದರು. ಇದನ್ನು ನೋಡಿದ ಅಕ್ಕಪಕ್ಕದಲ್ಲಿದ್ದ ಉಳಿದ ಮಹಿಳೆಯರು ಹೆದರಿಕೊಂಡು ಓಡಿದ್ದಾರೆ.

ಹಾವನ್ನು ಅಲ್ಲಿಯೆ ಬಿಟ್ಟುಬಿಡಲು ಸಂದೇಶ:
ಮೈ ಮೇಲೆ ದೇವರು ಬಂದಂತೆ ವರ್ತಿಸುತ್ತಿದ್ದನ್ನು ಕಂಡು ಸ್ನೇಕ್ ಕಿರಣ್ ಸಹಿತ ಅಲ್ಲಿದ್ದವರು ಆತಂಕಗೊಂಡಿದ್ದಾರೆ. ಸ್ನೇಕ್ ಕಿರಣ್ ಹಿಡಿದಿರುವ ಹಾವನ್ನು ಎಲ್ಲೂ ಕೊಂಡೊಯ್ಯಬಾರದು. ಇಲ್ಲಿಯೇ ಸಮೀಪದಲ್ಲಿರುವ ಜಾಗದಲ್ಲಿ ಬಿಡಬೇಕು ಎಂದು ಸೂಚನೆ ನೀಡಿದ್ದಾರೆ. ಬಳಿಕ ಮಹಿಳೆಯರು ಹೇಳಿದ ಜಾಗದಲ್ಲೇ ಸ್ನೇಕ್ ಕಿರಣ್ ನಾಗರ ಹಾವನ್ನ ಬಿಟ್ಟಿದ್ದಾರೆ.
ಹಾವು ಹಿಡಿದ ಸಂದರ್ಭ ಮೈಮೇಲೆ ದೇವರು ಬಂದಿದ್ದನ್ನು ಕಂಡ ಸ್ನೇಕ್ ಕಿರಣ್, ನಾಗರಾಜ್ ಮತ್ತು ಮಹಿಳೆಯರು ಕೆಲಕಾಲ ಆತಂಕಗೊಂಡಿದ್ದರು. ನಂತರ ಮಹಿಳೆಯರಿಗೆ ಪೂಜೆ ಮಾಡಿದ ನಂತರ ಮಹಿಳೆಯರು ಶಾಂತವಾಗಿದ್ದಾರೆ.
-
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
South India: ದಕ್ಷಿಣ ಭಾರತದಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಭಾವ: ತಮಿಳುನಾಡು ಮುನ್ನಡೆ, ಕರ್ನಾಟಕದಲ್ಲಿ ಏಕೆ ಹಿನ್ನಡೆ -
Middle East War: ಗಲ್ಫ್ ದೇಶಗಳಿಗೆ ರಫ್ತು ಸ್ಥಗಿತ; ರಾಜ್ಯದಲ್ಲೇ ಉಳಿದ ತರಕಾರಿ, ಮೊಟ್ಟೆ, ಹಾಲಿನ ಉತ್ಪನ್ನ- ರೈತರು ಕಂಗಾಲು -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ












Click it and Unblock the Notifications