Get Updates
Get notified of breaking news, exclusive insights, and must-see stories!

ಶಿವಮೊಗ್ಗ: ಭದ್ರಾ ನದಿಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರು ಪಾಲು

ಶಿವಮೊಗ್ಗ, ಅಕ್ಟೋಬರ್ 4: ಭದ್ರಾ ನದಿಯಲ್ಲಿ ಈಜಲು ಇಳಿದಿದ್ದ ಯುವಕರ ತಂಡದಲ್ಲಿದ್ದ ಇಬ್ಬರು ಸಾವನ್ನಪ್ಪಿರುವ ಘಟನೆ ಭದ್ರಾವತಿಯ ದೊಡ್ಡ ಗೋಪೇನಹಳ್ಳಿ ಬಳಿ ಶನಿವಾರ ಸಂಜೆ ವೇಳೆ ನಡೆದಿದೆ.

ಭದ್ರಾವತಿಯ ದೊಡ್ಡ ಗೋಪೇನಹಳ್ಳಿ ಬಳಿಯ ಗೋಂಧಿ ಚಾನಲ್ ಆಂಜನೇಯ ಬಂಡೆ ಸಮೀಪ ಈ ಘಟನೆ ನಡೆದಿದ್ದು, ಇಬ್ಬರು ಯುವಕರ ಶವವನ್ನು ಮೇಲಕ್ಕೆ ತೆಗೆಯಲಾಗಿದೆ. ಜನ್ನಾಪುರದ ರಾಜೇಶ್ (38) ಹಾಗೂ ಮನೋಜ್ (17) ಎನ್ನುವವರು ಸಾವಿಗೀಡಾದ ದುರ್ದೈವಿಗಳು ಎಂದು ಗುರುತಿಸಲಾಗಿದೆ.

ಒಟ್ಟು 9 ಯುವಕರು ಸೈಕಲಿಂಗ್'ಗೆ ತೆರಳಿದ್ದು, ಎಲ್ಲರೂ ಈಜಲು ನೀರಿಗೆ ಇಳಿದಿದ್ದಾರೆ. ಈ ಪ್ರದೇಶದಲ್ಲಿ ಭಾರೀ ಗಾತ್ರದ ಸುಳಿಯಿದ್ದು, ಮನೋಜ್ ಇದಕ್ಕೆ ಸಿಲುಕಿ ಮುಳುಗುವ ಹಂತಕ್ಕೆ ಬಂದಾಗ ಸಹಾಯಕ್ಕಾಗಿ ಕೂಗಿದ್ದಾನೆ. ಈ ವೇಳೆ ರಾಜೇಶ್ ಎನ್ನುವವರು ರಕ್ಷಣೆಗೆ ಧಾವಿಸಿ, ಬಟ್ಟೆ ಕಟ್ಟಿ ಎಳೆಯಲು ಪ್ರಯತ್ನಿಸಿದ್ದಾರೆ. ಆದರೆ, ಅವರೂ ಸಹ ನೀರಿನ ಸುಳಿಗೆ ಸಿಲುಕಿ ಬಲಿಯಾಗಿದ್ದಾರೆ.

Shivamogga: Two Youths Drown And Died Who Went Swimming In Bhadra River

ಇದೇ ವೇಳೆ ನೀರಿನಲ್ಲಿ ಸಿಲುಕಿದ್ದ 13 ವರ್ಷದ ಕಾರ್ತಿಕ್ ಎನ್ನುವ ಬಾಲಕನನ್ನು ರಕ್ಷಿಸಲಾಗಿದೆ. ಸ್ಥಳಕ್ಕೆ ಶಿವಮೊಗ್ಗ ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿಗಳು ಭೇಟಿ ನೀಡಿದ್ದು, ಸ್ಥಳೀಯ ಅಗ್ನಿಶಾಮಕ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದಾರೆ.

ಕಾಗದ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ನಡೆದ ನದಿಯ ಸ್ಥಳ ಅಪಾಯಕಾರಿ ಪ್ರದೇಶವಾಗಿದ್ದು, ಇಲ್ಲಿ ಈ ಹಿಂದೆಯೂ ಸಹ ಕೆಲವು ಮಂದಿ ನೀರಿನ ಸುಳಿಗೆ ಸಿಲುಕಿ ಜೀವ ಕಳೆದುಕೊಂಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+