ಉಂಬ್ಳೆಬೈಲು; ಅನುಮಾನಾಸ್ಪದವಾಗಿ 10 ಮಂಗಗಳ ಸಾವು, ಕಣಗಲಸರ ಗ್ರಾಮಸ್ಥರಲ್ಲಿ ಆತಂಕ
ಶಿವಮೊಗ್ಗ, ಅಕ್ಟೋಬರ್, 07: ಉಂಬ್ಳೆಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಗಲಸರ ಗ್ರಾಮದ ಸಮೀಪದಲ್ಲಿರುವ ಗಣಪತಿ ದೇವಸ್ಥಾನದ ಸಮೀಪದಲ್ಲಿ ಸುಮಾರು ಹತ್ತು ಮಂಗಗಳು ಸಾವನ್ನಪ್ಪಿವೆ. ಇದು ಸುತ್ತಮುತ್ತಲ ಗ್ರಾಮಗಳಲ್ಲಿ ಆತಂಕ ಮೂಡಿಸಿದೆ.
ಉಂಬ್ಳೆಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಗಲಸರ ಗ್ರಾಮದ ಸಮೀಪದಲ್ಲಿರುವ ಆನೆಕಲ್ಲು ಉದ್ಭವ ಗಣಪತಿ ದೇವಸ್ಥಾನದ ಸಮೀಪ ಈ ಘಟನೆ ಸಂಭವಿಸಿವೆ. ಸುಮಾರು ಹತ್ತು ಮಂಗಗಳು ಮೃತಪಟ್ಟಿರುವುದನ್ನು ಕಂಡು ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. ಮಂಗಗಳು ಸಾವನ್ನಪ್ಪಿರುವ ವಿಚಾರ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳು, ವೈದ್ಯರು ಸ್ಥಳಕ್ಕೆ ದೌಡಾಯಿಸಿದರು. ಸ್ಥಳದಲ್ಲೇ ಮಂಗಗಳ ಮರಣೋತ್ತರ ಪರೀಕ್ಷೆ ನಡೆಸಿ, ವೈಜ್ಞಾನಿಕವಾಗಿ ಅಂತ್ಯಕ್ರಿಯೆ ನಡೆಸಲಾಯಿತು.

ಮಂಗಗಳ ಸಾವು, ಜನರಲ್ಲಿ ಹೆಚ್ಚಿದ ಆತಂಕ
ಇಷ್ಟೊಂದು ಮಂಗಗಳು ಒಟ್ಟಿಗೆ ಸಾವನ್ನಪ್ಪಲು ಕಾರಣವೇನು ಅನ್ನುವುದು ಮರಣೋತ್ತರ ಪರೀಕ್ಷೆಯಿಂದ ತಿಳಿದು ಬರಬೇಕಿದೆ. ವಿಷ ಪ್ರಾಶನದಿಂದ ಮಂಗಗಳು ಸಾವನ್ನಪ್ಪಿವೆ ಎಂದು ಶಂಕೆ ವ್ಯಕ್ತವಾಗಿವೆ. ಮರಣೋತ್ತರ ಪರೀಕ್ಷೆ ಬಳಿಕ ಮಂಗಗಳ ಸಾವಿಗೆ ಕಾರಣ ಏನೆಂದು ತಿಳಿಯಲಿದೆ.

ಈ ಸಂದರ್ಭದಲ್ಲಿ ವಲಯ ಅರಣ್ಯಾಧಿಕಾರಿ ಬಿ.ಜೆ.ತೇಜ, ಪಶು ವೈದ್ಯಾಧಿಕಾರಿ ಮಹದೇವ ಶರ್ಮಾ, ಹಿರಿಯ ಪಶು ಪರೀಕ್ಷಕ ಎನ್.ಎಸ್.ರಮೇಶ್, ಮೆಗ್ಗಾನ್ ಆಸ್ಪತ್ರೆಯ ವೈದ್ಯ ಡಾ. ರಘುಪ್ರಸಾದ್, ಗ್ರಾಮ ಪಂಚಾಯಿತಿ ಪಿಡಿಒ ಅಮಿತ್ ರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಈಗಾಗಲೇ ಶಿವಮೊಗ್ಗ ಜಿಲ್ಲೆಯಲ್ಲಿ ಹಲವು ಮಂಗಗಳು ಸಾವನ್ನಪ್ಪಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications