ತಮ್ಮ ಜಮೀನಿನಲ್ಲಿ ರೈತ ಬೆಳೆ app ಸಮೀಕ್ಷೆ‌ ಪ್ರಾತ್ಯಕ್ಷಿಕೆ ನಡೆಸಿದ ಬಿ.ಸಿ.ಪಾಟೀಲ್

ಶಿವಮೊಗ್ಗ, ಆಗಸ್ಟ್ 24: ಕೃಷಿ ಸಚಿವ ಬಿ.ಸಿ.ಪಾಟೀಲ್ ಇಂದು ಸೊರಬ ತಾಲೂಕಿನ ಯಲವಾಳ ಗ್ರಾಮದ ತಮ್ಮ ಜಮೀನಿನಲ್ಲಿ ರೈತ ಬೆಳೆ ಸಮೀಕ್ಷೆ app ಪ್ರಾತ್ಯಕ್ಷಿಕೆ ನಡೆಸಿದರು.

ಜಮೀನಿನಲ್ಲಿ ನಿಂತು ಬೆಳೆ ವಿವರ, ಸರ್ವೆ ನಂಬರ್ ಸೇರಿದಂತೆ ಜಮೀನಿನಲ್ಲಿನ ತಮ್ಮ ಭಾವಚಿತ್ರವನ್ನು appನಲ್ಲಿ ಅಪ್ಲೋಡ್‌ ಮಾಡಿದರು. ಈ ಸಂದರ್ಭ ಮಾತನಾಡಿದ ಬಿ.ಸಿ.ಪಾಟೀಲರು, ರೈತನ ಬೆಳೆ ರೈತನ ಹಕ್ಕು. ಇದೇ ದೇಶದಲ್ಲಿ ಮೊದಲ ಬಾರಿಗೆ ರೈತನೇ ಸ್ವತಃ ತನ್ನ ಹೊಲದ ಸಮೀಕ್ಷೆ ನಡೆಸಿ ತಾನೇ ಪ್ರಮಾಣ ಪತ್ರ‌ ನೀಡುವಂತಹ ಮಹತ್ವದ app ಪರಿಚಯಿಸಲಾಗಿದೆ. ರೈತರು ಈ app ಸಮೀಕ್ಷೆ ಬಗ್ಗೆ ಹೆಚ್ಚು ಒಲವು ತೋರುತ್ತಿದ್ದಾರೆ ಎಂದರು.

ಈ ಬಾರಿಯ ರೈತ ಬೆಳೆ ಸಮೀಕ್ಷೆ ರೈತರ ಬೆಳೆಯ ಉತ್ಸವವೇ ಆಗಿದೆ‌. ಸಮೀಕ್ಷೆಗೆ ದೊರೆತಿರುವ ಅಭೂತಪೂರ್ವ ಸ್ಪಂದನೆ ಕಂಡು ಆಗಸ್ಟ್ 24 ರವರೆಗೆ ನಿಗದಿಗೊಳಿಸಲಾಗಿದ್ದ ರೈತ ಬೆಳೆ app ಸಮೀಕ್ಷೆಯ ಅವಧಿಯನ್ನು ಇನ್ನು ಸ್ವಲ್ಪ ದಿನಗಳ ಕಾಲ ವಿಸ್ತರಿಸಲಾಗಿದೆ.

 Shivamogga: Agriculture Minister BC Patil Did Crop Survey In His Land

ಕೇಂದ್ರ ಸರ್ಕಾರ ಸಹ ರಾಜ್ಯದ ಈ ಕ್ರಾಂತಿಕಾರಕ ಹಾಗೂ ರೈತೋಪಯೋಗಿ app ಸಮೀಕ್ಷೆಯಿಂದ ಪ್ರೇರಿತಗೊಂಡಿದ್ದು, ದೇಶದ ಇತರೆ ಜಿಲ್ಲೆಗಳಲ್ಲಿಯೂ ಜಾರಿಗೊಳಿಸಲು ಮುಂದಾಗಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+