ಶಿವಮೊಗ್ಗ : ಬೀದಿಯಲ್ಲಿ ಬೈದಾಡಿಕೊಂಡ ಆಯುಕ್ತೆ, ಆಯನೂರು ಮಂಜುನಾಥ್
ಶಿವಮೊಗ್ಗ, ಜೂನ್ 12 : 'ನೀವು ಹೇಳಿದ ಕಥೆ ಕೇಳಿಕೊಂಡು ಇದೀವಾ ನಾವು, ಅಧಿಕಾರಿಗಳು ಹೇಳಿದಂತೆ. ಹೇಗೆ ಮಾತನಾಡಬೇಕು ನಿಮಗೆ?, ನಿಮಗೆ ಮರ್ಯಾದೆ ಬೇಕು ಅಲ್ಲಿ ಜನ ಸಾಯಬೇಕಾ? ಜನರ ಸಮಸ್ಯೆ ಮಾತಾಡುತ್ತಿದ್ದೇನೆ. ಕಮೀಷನರ್ ಅಲ್ವಾ ನೀನು ಸಾಲೂ ಮಾಡು' ಆಯನೂರು ಮಂಜುನಾಥ್ ಅವರು ಸರ್ಕಾರಿ ಅಧಿಕಾರಿ ಜೊತೆ ವಾಗ್ವಾದ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್ ಮತ್ತು ವಿಧಾನ ಪರಿಷತ್ ಸದಸ್ಯ, ಬಿಜೆಪಿ ನಾಯಕ ಆಯನೂರು ಮಂಜುನಾಥ್ ನಡುವೆ ನಡೆದ ವಾಕ್ಸಮರದ ವಿಡಿಯೋ ವೈರಲ್ ಆಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಿ.ಸಿ.ತಮ್ಮಣ್ಣ ಸಮ್ಮುಖದಲ್ಲೇ ಈ ವಾಗ್ವಾದ ನಡೆದಿದೆ.

ಮಂಗಳವಾರ ಶಿವಮೊಗ್ಗದಲ್ಲಿ ಡಿ.ಸಿ.ತಮ್ಮಣ್ಣ ಅವರು ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿ ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ಹೈಡ್ರಾಮ ನಡೆದಿದೆ, ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್ ಅವರನ್ನು ಏಕವಚನದಲ್ಲಿ ಮಾತನಾಡಿಸಿದ್ದಕ್ಕೆ ಆಯನೂರು ಮಂಜುನಾಥ್ ಅವರಿಗೆ ಆಯುಕ್ತರು ತಿರುಗೇಟು ಕೊಟ್ಟಿದ್ದಾರೆ.
ಶಿವಮೊಗ್ಗದ ಶರಾವತಿ ನಗರದಲ್ಲಿ ಪರಿಶೀಲನೆ ನಡೆಸುವ ವೇಳೆ ಬೀದಿ ದೀಪಗಳು ಸರಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿಲ್ಲ ಎಂದು ಆಯನೂರು ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಉಸ್ತುವಾರಿ ಸಚಿವರ ಮುಂದೆಯೇ ಪಾಲಿಕೆ ಆಯುಕ್ತರನ್ನು ತರಾಟೆಗೆ ತೆಗೆದುಕೊಂಡರು.
ಆಯನೂರು ಮಂಜುನಾಥ್ ಅವರು ಏರು ಧ್ವನಿಯಲ್ಲಿ ಮಾತನಾಡಿದಾಗ ಆಯುಕ್ತೆ ಚಾರುಲತಾ ಸೋಮಲ್ ನಿಧಾನವಾಗಿ ಮಾತನಾಡುವಂತೆ ಸೂಚಿಸಿದರು. ಆಯನೂರು ಮಂಜುನಾಥ್ ಅವರು ಆಯುಕ್ತೆಯನ್ನು ಏಕವಚನದಲ್ಲಿ ಮಾತನಾಡಿಸಿದರು.
ಇದರಿಂದ ಕೋಪಗೊಂಡ ಆಯುಕ್ತೆ ಚಾರುಲತಾ ಸೋಮಲ್ ಏಕವಚನದಲ್ಲಿ ಮಾತನಾಡದಂತೆ ತಿರುಗೇಟು ಕೊಟ್ಟರು. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆಯಿತು. ಸಚಿವ ಡಿ.ಸಿ.ತಮ್ಮಣ್ಣ, ಶಾಸಕ ಕೆ.ಎಸ್.ಈಶ್ವರಪ್ಪ, ಜಿಲ್ಲಾಧಿಕಾರಿ ದಯಾನಂದ್ ಮುಂತಾದವರು ಈ ಚಕಮಕಿಗೆ ಸಾಕ್ಷಿಯಾದರು.
-
HPCL Recruitment 2026: HPCL ನಿಂದ 731 ಹುದ್ದೆಗಳಿಗೆ ಬೃಹತ್ ನೇಮಕಾತಿ, ವಾರ್ಷಿಕ 60 ಲಕ್ಷ ರೂ. ವರೆಗೆ ಸಂಬಳ -
ಮಾರ್ಚ್ 16ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಎಲ್ಪಿಜಿ ಪೂರೈಕೆಯಲ್ಲಿ ತೊಂದರೆ ಇಲ್ಲ, ಕೇಂದ್ರ ಸಚಿವರಿಂದ ಭರವಸೆ ಸಿಕ್ಕಿದೆ: ಸಿಎಂ ಸಿದ್ದರಾಮಯ್ಯ -
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ -
ಮಾರ್ಚ್ 15ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ












Click it and Unblock the Notifications