ನೀನಾಸಮ್: ಒಂದು ವರ್ಷ ಡಿಪ್ಲೊಮಾ ಇನ್ ಆರ್ಟ್ಸ್ ಶಿಕ್ಷಣಕ್ಕೆ ಅರ್ಜಿ ಆಹ್ವಾನ
ಸಾಗರ, ಮೇ 14: ನೀನಾಸಮ್ ರಂಗಶಿಕ್ಷಣ ಕೇಂದ್ರವು 2018-19ನೇ ಸಾಲಿನ ಡಿಪ್ಲೊಮಾ ಇನ್ ಆರ್ಟ್ಸ್ ಶಿಕ್ಷಣಕ್ಕೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪ್ರವೇಶಕ್ಕೆ ಕನಿಷ್ಠ ವಿದ್ಯಾರ್ಹತೆ ಎಸ್ಸೆಸ್ಸೆಲ್ಸಿ ಇರಬೇಕು.
ರಂಗಭೂಮಿಯಲ್ಲಿ ಆಸಕ್ತಿಯಿದ್ದು, ಸ್ವಲ್ಪಮಟ್ಟಿನ ಅನುಭವ ಇರಬೇಕಾದ್ದು ಅಗತ್ಯ. ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಊಟ, ವಸತಿ ವ್ಯವಸ್ಥೆ ಇದ್ದು ಹದಿನೈದು ಮಂದಿಗೆ ವಿದ್ಯಾರ್ಥಿವೇತನ ದೊರೆಯುತ್ತದೆ. ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ರಂಗಕಲ್ಪನೆ, ರಂಗ ಇತಿಹಾಸ, ನಾಟಕ ಇತಿಹಾಸ, ರಂಗನಟನೆ, ರಂಗಸಿದ್ಧತೆ, ರಂಗವ್ಯವಸ್ಥೆ ಮುಂತಾಗಿ ವಿಸ್ತಾರವಾದ ಸೈದ್ಧಾಂತಿಕ ಹಾಗೂ ಪ್ರಾಯೋಗಿಕ ಶಿಕ್ಷಣ ನೀಡಲಾಗುತ್ತದೆ.
ಕೇಂದ್ರದ ನುರಿತ ಅಧ್ಯಾಪಕರುಗಳಲ್ಲದೆ ಹೊರಗಿನ ತಜ್ಞರನ್ನು ಕರೆಸಿ ಸಾಕಷ್ಟು ಪ್ರಬುದ್ಧ ಶಿಕ್ಷಣ ಕೊಡಲಾಗುತ್ತದೆ. ಒಳ್ಳೆಯ ಗ್ರಂಥ ಭಂಡಾರ ಹಾಗೂ ದೃಶ್ಯಶ್ರವ್ಯ ಪರಿಕರಗಳ ಅನುಕೂಲತೆಯಿದೆ. ವಿದ್ಯಾರ್ಥಿ ವಿದ್ಯಾರ್ಥಿನಿಯರು ಪ್ರತಿದಿನ ಸುಮಾರು 12 (07.00 am- 09.30 pm) ಗಂಟೆಗಳಷ್ಟು ಕಾಲ ಅಭ್ಯಾಸದಲ್ಲಿ ತೊಡಗಿರಬೇಕಾಗುತ್ತದೆ.

ಪ್ರಾಸ್ಪೆಕ್ಟಸ್, ಶುಲ್ಕದ ವಿವರ ಮತ್ತು ಪ್ರವೇಶ ಪತ್ರಗಳನ್ನು www.ninasam.org ನಿಂದ ಉಚಿತವಾಗಿ ಡೌನ್ಲೋಡ್ ಮಾಡಿಕೊಳ್ಳಬಹುದು ಅಥವಾ ನಮ್ಮ ಕಛೇರಿಗೆ ಬರೆದು ಅಂಚೆಯಲ್ಲಿ ತರಿಸಿಕೊಳ್ಳಬಹುದು. ಪ್ರವೇಶ ಪತ್ರವನ್ನು ಭರ್ತಿಮಾಡಿ ಜೂನ್ 16ರ ಒಳಗಾಗಿ ಶ ಕಳುಹಿಸಬೇಕು.
ವಿಳಾಸ: ನೀನಾಸಮ್ ರಂಗಶಿಕ್ಷಣ ಕೇಂದ್ರ, ಹೆಗ್ಗೋಡು, ಸಾಗರ, ಶಿವಮೊಗ್ಗ 577 417 ಈ ವಿಳಾಸಕ್ಕೆ ತಲುಪುವಂತೆ ಕಳಿಸಬೇಕು. ದಿನಾಂಕ 23 ಮತ್ತು 24 ಜೂನ್ 2018 ಶನಿವಾರ ಬೆಳಿಗ್ಗೆಯಿಂದ ಭಾನುವಾರದವರೆಗೆ (ಮತ್ತು ಅಗತ್ಯವಿದ್ದರೆ 25ರಂದು ಕೂಡ) ಆಯ್ಕೆಯ ಸಂದರ್ಶನಕ್ಕೆ ಅಭ್ಯರ್ಥಿಗಳು ತಮ್ಮ ವೆಚ್ಚದಲ್ಲೇ ಹೆಗ್ಗೋಡಿಗೆ ಬಂದು ಹಾಜರಿರಬೇಕು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications