Get Updates
Get notified of breaking news, exclusive insights, and must-see stories!

"ಕಣ್ಣೀರು ಹಾಕುವ ಸಿಎಂ ಹೋಗಿ, ಕಣ್ಣೀರು ಒರೆಸುವ ಸಿಎಂ ಬಂದಿದ್ದಾರೆ'

ಶಿವಮೊಗ್ಗ, ಫೆಬ್ರವರಿ 25: ಕಣ್ಣೀರು ಸುರಿಸುವ ಮುಖ್ಯಮಂತ್ರಿ ತೆಗೆದು ಹಾಕಿ, ಕಣ್ಣೀರು ಒರೆಸುವ ಮುಖ್ಯಮಂತ್ರಿ ನಾವು ಪಡೆದುಕೊಂಡಿದ್ದೇವೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.

ಶಿವಮೊಗ್ಗ ಜಿಲ್ಲೆ ವಿವಿಧ ಅಭಿವೃದ್ಧಿ ಕಾಮಗಾರಿ ಮತ್ತು ಸೊರಬದಲ್ಲಿ ನೀರಾವರಿ ಯೋಜನೆ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಬಿ.ಸಿ ಪಾಟೀಲ್ ಮಾತನಾಡಿ, ಸೊರಬ ನನ್ನ ಜನ್ಮಭೂಮಿ, ಹಿರೇಕೆರೂರು ನನ್ನ ಕರ್ಮ ಭೂಮಿ. ಸೊರಬದಲ್ಲಿ ನಿಂತು ಮಾತನಾಡುತ್ತಿರುವುದು ನನಗೆ ಖುಷಿ ತಂದಿದೆ ಎಂದರು.

ನಮಗೆ ಕಣ್ಣೀರು ಸುರಿಸುವ ಮುಖ್ಯಮಂತ್ರಿ ಬೇಡ, ರೈತರ ಕಣ್ಣಿರು ಒರೆಸುವ ಮುಖ್ಯಮಂತ್ರಿ ನಮಗೆ ಬೇಕು. ರಾಜ್ಯದಲ್ಲಿ ರೈತರ ಕಣ್ಣೀರು ಒರೆಸುವ ಮುಖ್ಯಮಂತ್ರಿ ಅಂತಾ ಏನಾದರೂ ಇದ್ದರೆ ಅದು ಯಡಿಯೂರಪ್ಪನವರು ಮಾತ್ರ, ಅದಕ್ಕೆ ಹೆಮ್ಮೆ ಆಗುತ್ತದೆ ಎಂದು ಹೇಳಿದರು.

We Are Proud To Get Yediyurappa As Cm Said BC Patil

ರೈತರು ಯಾವುದೇ ಕಾರಣಕ್ಕೂ ಆತ್ಮಹತ್ಯೆಗಳನ್ನು ಮಾಡಿಕೊಳ್ಳಬಾರದು ನಿಮ್ಮೊಂದಿಗೆ ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರ ಇದೆ ಎಂದು ತಿಳಿಸಿದರು.

We Are Proud To Get Yediyurappa As Cm Said BC Patil

ಹಿಂದೆ ತೆಂಗಿನ ಸಸಿಗಳನ್ನು ಹಾಗೂ ಮೆಣಸಿಕಾಯಿ ಮಾರಲು ಆನವಟ್ಟಿಗೆ ಬರುತ್ತಿದ್ದೆ, ಇಂದು ಅದೆ ಭೂಮಿಯಲ್ಲಿ ಸಚಿವನಾಗಿ ಬರುತ್ತೇನೆ ಎಂದು ಕನಸು ಮನಸ್ಸಿನಲ್ಲಿಯೂ ಅಂದುಕೊಂಡಿರಲ್ಲಿಲ್ಲ. ನಿಮ್ಮೆಲ್ಲರ ಆರ್ಶೀವಾದದಿಂದ ಸಚಿವನಾಗಿದ್ದೇನೆ ಹಾಗಾಗಿ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+