'ಬಸ್ ಸ್ಟಾಂಡ್ ರಾಘುವನ್ನು ಸೋಲಿಸುವುದು ನಮ್ಮ ಗುರಿ'
ಶಿವಮೊಗ್ಗ, ಅಕ್ಟೋಬರ್ 19 : 'ಬಸ್ ಸ್ಟಾಂಡ್ ರಾಘುವನ್ನು ಸೋಲಿಸುವುದು ನಮ್ಮ ಗುರಿಯಾಗಿದೆ. ಮಧು ಬಂಗಾರಪ್ಪ ಅವರನ್ನು ಗೆಲ್ಲಿಸಿ ಬಂಗಾರಪ್ಪ ಅವರ ಆತ್ಮಕ್ಕೆ ಅವರ ಅಭಿಮಾನಿಗಳು ಶಾಂತಿ ಕೊಡಿಸಬೇಕಿದೆ' ಎಂದು ಸಾಗರ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ.
ನವೆಂಬರ್ 3ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ಬಿಜೆಪಿಯಿಂದ ಬಿ.ವೈ.ರಾಘವೇಂದ್ರ, ಜೆಡಿಎಸ್-ಕಾಂಗ್ರೆಸ್ ಒಮ್ಮತದ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಅವರು ಕಣದಲ್ಲಿದ್ದಾರೆ.
'ಪ್ರತಿನಿತ್ಯ ಮೈತ್ರಿ ಸರ್ಕಾರವನ್ನು ಅಪವಿತ್ರ ಮೈತ್ರಿ ಎಂದು ಹೇಳುವ ಬಿಜೆಪಿಗೆ, ಅವರು ಜೆಡಿಎಸ್ ಜೊತೆ ಸರ್ಕಾರ ಮಾಡಿದಾಗ ಆ ಮೈತ್ರಿ ಏನಾಗಿತ್ತು?. ಯಡಿಯೂರಪ್ಪ ಅಪವಿತ್ರ ಮೈತ್ರಿ ಎಂದು ಮಾತನಾಡುವುದನ್ನು ಬಿಡಬೇಕು' ಎಂದು ಬೇಳೂರು ಗೋಪಾಲಕೃಷ್ಣ ಆಗ್ರಹಿಸಿದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚ ಉನಾವಣೆ ಹಲವು ಕಾರಣಗಳಿಗೆ ಗಮನ ಸೆಳೆದಿದೆ. ಮಾಜಿ ಮುಖ್ಯಮಂತ್ರಿಗಳ ಪುತ್ರರಾದ ಬಿ.ವೈ.ರಾಘವೇಂದ್ರ, ಮಧು ಬಂಗಾರಪ್ಪ ಮತ್ತು ಮಹಿಮಾ ಪಟೇಲ್ ಕಣದಲ್ಲಿದ್ದಾರೆ.

ಯಡಿಯೂರಪ್ಪ ಅವರಿಗೆ ಕಣ್ಣು ಕಾಣಿಸುತ್ತಿಲ್ಲ
'ಯಡಿಯೂರಪ್ಪ ಮತ್ತು ಅವರ ಮಕ್ಕಳಿಗೆ ಅಚ್ಛೇದಿನ್ ಬಂದಿದೆ. ಇತ್ತೀಚಿಗೆ ಯಡಿಯೂರಪ್ಪ ಅವರಿಗೆ ಕಣ್ಣು ಕಾಣಿಸುತ್ತಿಲ್ಲ, ಕಿವಿ ಕೇಳಿಸುತ್ತಿಲ್ಲ. ಉಪ ಚುನಾವಣೆಯಲ್ಲಿ ಸೋತರೆ ಅಚ್ಚೇದಿನ್ ಬಂದಿದೆಯೋ? ಇಲ್ಲವೋ ತಿಳಿಯುತ್ತದೆ' ಎಂದು ಬೇಳೂರು ಗೋಪಾಲಕೃಷ್ಣ ಹೇಳಿದರು.

ಸಂಖ್ಯಾಬಲದ ಮೇಲೆ ಮೈತ್ರಿ
'ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಅಪವಿತ್ರ ಮೈತ್ರಿ ಎಂದು ಬಿಜೆಪಿ ಹೇಳುತ್ತದೆ. ಬಿಜೆಪಿ ಅವರು ಜೆಡಿಎಸ್ ಜೊತೆ ಸೇರಿ ಸರ್ಕಾರ ಮಾಡಿರಲಿಲ್ಲವೇ?. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸಂಖ್ಯಾಬಲದ ಮೇಲೆ ರಚನೆಯಾಗಿದೆ. ಯಡಿಯೂರಪ್ಪ ಅವರು ಅಪವಿತ್ರ ಮೈತ್ರಿ ಎಂದು ಹೇಳುವುದನ್ನು ಬಿಡಬೇಕು' ಎಂದು ಬೇಳೂರು ಗೋಪಾಲಕೃಷ್ಣ ಆಗ್ರಹಿಸಿದರು.

ಬ್ರಾಹ್ಮಣ ಸಮಾಜಕ್ಕೆ ಅನ್ಯಾಯವಾಗಿದೆ
'ಬಿಜೆಪಿಯಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅನ್ಯಾಯವಾಗಿದೆ. ಕಾಂಗ್ರೆಸ್ ಬ್ರಾಹ್ಮಣ ಸಮುದಾಯಕ್ಕೆ ಉನ್ನತ ಸ್ಥಾನ ನೀಡಿದೆ. ಬಿಜೆಪಿಯಲ್ಲಿ ಯಡಿಯೂರಪ್ಪ ಅವರಿಗೆ ಬಕೆಟ್ ಹಿಡಿದವರಿಗೆ ಮಾತ್ರ ಟಿಕಟ್ ಸಿಗುತ್ತದೆ' ಎಂದು ಬೇಳೂರು ಗೋಪಾಲಕೃಷ್ಣ ಆರೋಪಿಸಿದರು.

ಮಧು ಬಂಗಾರಪ್ಪ ಏನು ಎಂದು ಗೊತ್ತಿದೆ
'ಮಧು ಬಂಗಾರಪ್ಪ ಅವರು ಏನು ಎಂದು ರಾಜ್ಯದ ಜನರಿಗೆ ತಿಳಿದಿದೆ. ನಿಮ್ಮಿಂದ ಅವರ ಹೆಸರು ಯಾರಿಗೂ ತಿಳಿಯಬೇಕಿಲ್ಲ. ಪ್ರತಿಸ್ಪರ್ಧಿ ಹೆಸರು ಹೇಳದೇ ಪ್ರಚಾರ ನಡೆಸಿ ಎಂಬ ಯಡಿಯೂರಪ್ಪ ಅವರ ಹೇಳಿಕೆಗೆ ಯಾವುದೇ ಅರ್ಥವಿಲ್ಲ' ಎಂದು ಹೇಳಿದರು.

ತುಮರಿ ಸೇತುವೆ ನೆನಪಾಗುತ್ತದೆ
'ಚುನಾವಣೆ ಬಂದಾಗ ಯಡಿಯೂರಪ್ಪ ಅವರಿಗೆ ತುಮರಿ ಸೇತುವೆ ಮತ್ತು ರೈಲು ಯೋಜನೆಗಳು ನೆನಪಾಗುತ್ತವೆ. ಯಡಿಯೂರಪ್ಪ ಅವರು ಜಿಲ್ಲೆಯ ಜನರಿಗೆ ಮೋಸ ಮಾಡಿದ್ದಾರೆ' ಎಂದು ಬೇಳೂರು ಗೋಪಾಲಕೃಷ್ಣ ಆರೋಪಿಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications