ರಾಘವೇಶ್ವರ ಶ್ರೀಗಳ ಮೇಲೆ ಸರ್ಕಾರದ ಕುತಂತ್ರವೇನು?
ಶಿವಮೊಗ್ಗ, ನವೆಂಬರ್, 26 : ಶ್ರೀರಾಘವೇಶ್ವರ ಭಾರತೀ ಸ್ವಾಮಿಗಳ ವಿರುದ್ಧದ ನಕಲಿ ಅಶ್ಲೀಲ ಸಿಡಿ ಪ್ರಕರಣವನ್ನು ಸರ್ಕಾರ ಹಿಂದಕ್ಕೆ ತೆಗೆದುಕೊಂಡಿರುವುದನ್ನು ಖಂಡಿಸಿದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕೆಲವು ಮುಖಂಡರು, ಸರ್ಕಾರ ಹೊರಡಿಸಿದ ತನ್ನ ಆದೇಶವನ್ನು ಹಿಂಪಡೆದು ತನಿಖೆ ಮುಂದುವರೆಸಬೇಕು ಎಂದು ಸಾಗರ ಉಪವಿಭಾಗಧಿಕಾರಿಗಳ ಮುಖಾಂತರ ನವೆಂಬರ್ 25ರ ಬುಧವಾರದಂದು ಸರ್ಕಾರಕ್ಕೆ ಅಹವಾಲು ಸಲ್ಲಿಸಿದರು.
ರಾಘವೇಶ್ವರ ಸ್ವಾಮೀಜಿ ತೇಜೋವಧೆಯ ಉದ್ದೇಶದಿಂದ ನಕಲಿ ಅಶ್ಲೀಲ ಸಿಡಿ ತಯಾರಿಸಿ, ಪೋಲೀಸರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪ್ರಕರಣವನ್ನು ಸರ್ಕಾರ ಏಕಾಏಕಿ ಯಾವುದೇ ಕಾರಣವನ್ನು ನೀಡದೆ ಹಿಂತೆಗೆದುಕೊಂಡಿರುವುದು ಖಂಡನೀಯ ಎಂದು ಸರ್ಕಾರದ ವಿರುದ್ಧ ಕೆಲವು ಮುಖಂಡರು ಕಿಡಿಕಾರಿದರು.[ಶ್ರೀಗಳ ತೇಜೋವಧೆಗೆ ಯತ್ನಿಸಿದವರ ಬಂಧನ]

ಆರೋಪಿತರ ವಿಚಾರಣೆ ನಡೆಯುತ್ತಿರುವ ಪ್ರಕರಣವನ್ನು ನ್ಯಾಯಾಲಯ ಹಿಂತೆಗೆದುಕೊಂಡಿರುವುದನ್ನು ನೋಡಿದರೆ ಶ್ರೀರಾಘವೇಶ್ವರ ಭಾರತೀ ಸ್ವಾಮಿಗಳ ಮೇಲೆ ದೊಡ್ಡ ಷಡ್ಯಂತ್ರ ರೂಪಿಸಲಾಗುತ್ತಿದೆ ಎಂದು ತಿಳಿದು ಬರುತ್ತಿದೆ.
ಸರ್ಕಾರ ಕೂಡಲೆ ಆದೇಶವನ್ನು ಹಿಂಪಡೆದು ನ್ಯಾಯಯುತ ತನಿಖೆ ನಡೆಸಲು ಅನುವುಮಾಡಿಕೊಡಬೇಕು ಎಂದು ಆಗ್ರಹಿಸಿ ಸಾಗರ ಮಂಡಲದ ಪ್ರಮುಖರು ಉಪವಿಭಾಗಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.[ರಾಘವೇಶ್ವರ ಶ್ರೀಗಳ ಬಗ್ಗೆ ಕೇಸ್ ಬಗ್ಗೆ ಕೆಲವು ಅನುಮಾನಗಳು, ಜಿಜ್ಞಾಸೆಗಳು]
ಈ ಸಂದರ್ಭದಲ್ಲಿ ಸಾಗರ ಮಂಡಲದ ಅಧ್ಯಕ್ಷರಾದ ಸಿ ಎಸ್ ಗಣಪತಿ, ಕಾರ್ಯದರ್ಶಿಗಳಾದ ಮುರಳಿ, ಮುಖಂಡರಾದ ಯು ಹೆಚ್ ರಾಮಪ್ಪ , ಸ್ವಾಮಿದತ್ತ ಹಕ್ರೆ, ಮಂಡಲ ವಲಯಗಳ ಪದಾಧಿಕಾರಿಗಳು ಹಾಗೂ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications