ಮೇರಿ ಜೋಸೆಫ್ ಯಾರು?: ಮಧು ಬಂಗಾರಪ್ಪಗೆ ಹಾಲಪ್ಪ ಪ್ರಶ್ನೆ
ಸೊರಬ, ಆಗಸ್ಟ್ 23: ಜೆಡಿಎಸ್ ಮುಖಂಡ ಮಧು ಬಂಗಾರಪ್ಪ ಅವರ ಹೆಸರನ್ನು ನೇರವಾಗಿ ಪ್ರಸ್ತಾವ ಮಾಡದೆ ಮಾಜಿ ಸಚಿವ ಹಾಲಪ್ಪ ಅವರು ಸೊರಬದಲ್ಲಿ ವಾಗ್ದಾಳಿ ನಡೆಸಿದ್ದಾರೆ. ನನ್ನ ವಿರುದ್ಧ ದೂರು ಕೊಟ್ಟವರ ಬಗ್ಗೆ ತಮಗೇನು ಗೊತ್ತು ಎಂದಿದ್ದವರು ನೂರಾ ನಲವತ್ತಾರು ಸಲ ಅವರ ಜತೆ ಮಾತನಾಡಿದ್ದಾರೆ ಎಂದು ಹೇಳಿದ್ದಾರೆ.
ಇದೇ ವೇಳೆ, ಮೇರಿ ಜೋಸೆಫ್ ಯಾರು? ಅವರಿಗೆ ಒಬ್ಬ ಮಗ ಇದ್ದಾನಲ್ಲಾ ಆತ ಯಾರು ಎಂದು ಬಹಿರಂಗಪಡಿಸಿ ಎಂದು ಹಾಲಪ್ಪ ಸವಾಲು ಹಾಕಿದ್ದಾರೆ. ಒಟ್ಟಿನಲ್ಲಿ ಮಾಜಿ ಸಚಿವ ಹಾಲಪ್ಪ ಅವರ ಮೇಲೆ ಕೇಳಿಬಂದಿದ್ದ ಅತ್ಯಾಚಾರ ಪ್ರಕರಣದಿಂದ ದೋಷಮುಕ್ತರಾದ ಮೇಲೆ ಶಿವಮೊಗ್ಗ ರಾಜಕಾರಣ ರಂಗೇರಿದೆ.

ಹಾಲಪ್ಪ ಅವರ ಹುಟ್ಟೂರು ಹೊಳೆಕೊಪ್ಪದಿಂದ ಸೊರಬದ ತನಕ ಪಾದಯಾತ್ರೆ ಮಾಡಿದ ಹಾಲಪ್ಪ, ಆ ನಂತರ ಸಮಾವೇಶದಲ್ಲಿ ಮಧು ಬಂಗಾರಪ್ಪ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಇದೇ ವೇಳೆ ಹಾಲಪ್ಪ ಅವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿರುವ ಮಧು ಬಂಗಾರಪ್ಪ, ಯಾರೇನು ಹೇಳಿಕೊಳ್ಳುತ್ತಾರೋ ಹೇಳಿಕೊಳ್ಳಲಿ. ಕೇಳೋರಿಗೆಲ್ಲ ಉತ್ತರ ನೀಡೋಕೆ ಆಗಲ್ಲ. ನನಗೆ ಯಾರ ಜತೆಗೂ ಸಂಬಂಧವಿಲ್ಲ. ಇನ್ನು ಟೀಕೆ ಮಾಡಿದವರೇನೂ ಸಾಚಾ ಅಲ್ಲ ಎಂದು ಖಾರವಾಗಿ ಉತ್ತರ ನೀಡಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications